ಬಳ್ಳಾರಿ | ನಂದಿನಿ ಅಗಸರ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಬಳ್ಳಾರಿ ಜಿಲ್ಲಾಡಳಿತ ಸನ್ಮಾನಿಸಿದೆ.

ನಂದಿನಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದವರು. ಇತ್ತೀಚೆಗೆ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2022ರ ಏಷ್ಯನ್ ಗೇಮ್ಸ್‌ನಲ್ಲಿ ಹೆಪ್ಟಾಥ್ಲಾನ್ ಈವೆಂಟ್‌ನಲ್ಲಿ 800 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಯುವ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ ಅವರ ನಿರ್ದೇಶನದಂತೆ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿನಿ ಅಗಸರ ಅವರನ್ನು ಸನ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಜಿಲ್ಲೆಯ ವಜ್ರದಂತಿರುವ ಮನೆ ಮಗಳು ನಂದಿನಿ ಅಗಸರ ಅವರು ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾ ತರಬೇತಿಗಾಗಿ ಅವರಿಗೆ 3 ಲಕ್ಷ ರೂ. ಗೌರವಧನ ನೀಡಲಾಗುವುದು” ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

“ಕ್ರೀಡಾ ಮನೋಭಾವ ಮತ್ತು ಶ್ರೇಷ್ಠತೆಯನ್ನು ರೂಪಿಸಿಕೊಂಡಿರುವ ನಂದಿನಿ ಅವರು ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ಕ್ರೀಡೆಗಳಲ್ಲಿ ಭಾಗವಹಿಸುವಂತಾಗಲಿ. ಇನ್ನೂ ಹೆಚ್ಚಿನ ಪದಕಗಳನ್ನು ತಮ್ಮದಾಗಿಸಿಕೊಂಡು ನಮ್ಮ ದೇಶ, ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತರಬೇಕು. ಮುಂದಿನ ಅವರ ಎಲ್ಲ ಪ್ರಯತ್ನಗಳಿಗೆ ಶುಭವಾಗಲಿ” ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

“ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹಿಸಿದ ನನ್ನ ತಂದೆ-ತಾಯಿಗೆ ಈ ಕೀರ್ತಿ ಸಲ್ಲುತ್ತದೆ. ತರಬೇತಿಯಲ್ಲಿ ಕಾಳಜಿ ಮತ್ತು ಆಸಕ್ತಿ ವಹಿಸಿ ನನಗೆ ಶಕ್ತಿ ತುಂಬಿದ ನನ್ನ ಮಾರ್ಗದರ್ಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ನನ್ನನ್ನು ಗುರುತಿಸಿ ಸನ್ಮಾನಿಸಿದ ಜಿಲ್ಲಾಡಳಿತಕ್ಕೆ ಕೃತಜ್ಞತೆಗಳು” ಎಂದು ನಂದಿನಿ ಅಗಸರ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ, ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಬಳ್ಳಾರಿ ತಹಶೀಲ್ದಾರ ಗುರುರಾಜ, ಸಿರುಗುಪ್ಪ ತಹಶೀಲ್ದಾರ ವಿಶ್ವನಾಥ, ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಹೊನ್ನೂರಪ್ಪ, ನಂದಿನಿ ಅವರ ತಂದೆ ಯಲ್ಲಪ್ಪ ಹಾಗೂ ಇತರರು ಇದ್ದರು.

ವರದಿ: ರಾಧಾಕೃಷ್ಣ, ಸಿಟಿಜನ್ ಜರ್ನಲಿಸ್ಟ್‌, ಬಳ್ಳಾರಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...