ಬಳ್ಳಾರಿ | ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿಗೆ ಡಿಸಿ ನಾಗೇಂದ್ರ ಪ್ರಸಾದ್‌ ಸೂಚನೆ

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಪ್ರತಿ ಕ್ವಿಂಟಲ್‌ಗೆ ₹5,875 ಎಂಎಸ್‌ಪಿ ದರದಲ್ಲಿ ರೈತರಿಂದ ಕಡಲೆಕಾಳು ಖರೀದಿಸಲಾಗುತ್ತದೆ. ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದ ಮೇಲೆ ರೈತರಿಂದ ಕಡಲಡಕಾಳು ಉತ್ಪನ್ನ ಖರೀದಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದೆ. ಗೋದಾಮುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಮೂಲ ಸೌಕರ್ಯ ಒದಗಿಸಬೇಕು. ತೂಕ ಪ್ರಮಾಣಿಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ 2ರವರೆಗೆ ಉತ್ಪನ್ನ ಖರೀದಿಸಲು ಅವಧಿ ನಿಗದಿಗೊಳಿಸಲಾಗಿದೆ. ರೈತರು ನೋಂದಣಿಗೆ ಆಧಾರ್ ಕಾರ್ಡ್, ಪಹಣಿ ಪ್ರತಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್‌ ಪಾಸ್‌ಬುಕ್ ಝೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್‌ ಸಾಬೂನು ಉತ್ಪಾದನೆ

ಮೆಕ್ಕೆಜೋಳ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ನೋಂದಣಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆಬ್ರವರಿ 13ರವರೆಗೆ ಹಾಗೂ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಮಾರಾಟ ಮಾಡಿಕೊಳ್ಳಲು ಫೆ.21 ಕೊನೆಯ ದಿನವಾಗಿದೆ ಎಂದು ಸರ್ಕಾರ ತಿಳಿಸಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ವಿದ್ಯಾರ್ಥಿಯ ಕ್ರೌರ್ಯ; ಓರ್ವ ವಿದ್ಯಾರ್ಥಿ ಸಾವು – 7 ಮಂದಿ ಗಂಭೀರ

ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದು,...

ರಾಜ್ಯ ಬಜೆಟ್ | ನೀರಾವರಿ ಯೋಜನೆ ಪೂರ್ಣಗೊಳಿಸಿ, ಕೃಷಿಗೆ ವಿಶೇಷ ಅನುದಾನಕ್ಕೆ ಬೆಳಗಾವಿ ರೈತರ ನಿರೀಕ್ಷೆ

ಬೆಳಗಾವಿ ಜಿಲ್ಲೆಯ ಕೃಷಿ ಭವಿಷ್ಯ ಈ ಬಜೆಟ್ ನಿರ್ಧಾರಗಳ ಮೇಲೆ ಅವಲಂಬಿತವಾಗಿದೆ....

ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಕಿಡಿ: ಜನಪ್ರತಿನಿಧಿಗಳಿಗೆ ಛೀಮಾರಿ, ಸರ್ಕಾರದ ಶವಯಾತ್ರೆ

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ...

ಸರ್ಕಾರದ ಬೆಂಬಲ ಸಿಕ್ಕ್ರೆ ಹಳ್ಳಿಯ ಸಾಂಪ್ರದಾಯಿಕ ಬೆಲ್ಲದ ಗಾಣಗಳಿಗೆ ಮತ್ತೆ ಜೀವ

ಬೆಲ್ಲದ ಗಾಣ ಅಂದ್ರೆ ಕಬ್ಬಿನಿಂದ ಬೆಲ್ಲ ಮಾಡೋ ನಮ್ಮ ಹಳ್ಳಿಯ ಸಾಂಪ್ರದಾಯಿಕ...