ಬಳ್ಳಾರಿ | ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

Date:

ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ಆಯೋಜನೆ ಮಾಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ, ಸಮುದಾಯಗಳ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಎಚ್. ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಬೇಕು. ಸಾರ್ವಜನಿಕರ ಚರ್ಚೆಗೆ ಬಿಟ್ಟು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು. ಇಡಬ್ಲೂಎಸ್ 10%‌ ಮೀಸಲಾತಿ ರದ್ದುಪಡಿಸಬೇಕು. ಲೋಕಸಭಾ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪ ಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಅಲ್ಪ ಸಂಖ್ಯಾತರ ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸವುದರ ಬಗ್ಗೆ ಸೇರಿದಂತೆ ಹಲವು ಹಕ್ಕೂತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಹಲವು ವೈವಿದ್ಯತೆಯ ದೇಶ. ಸರ್ವಜನಾಂಗದ ಶಾಂತಿಯ ತೋಟ. ಆದರೆ, ಬ್ರಾಹ್ಮಣ ಶಾಹಿಯ ಕುತಂತ್ರದಿಂದಾಗಿ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗದೆ, ಶೇ.97ರಷ್ಟು ಶಾಂತಿಯ ಸಮುದಾಯಗಳು ಸಾವಿರಾರು ವರ್ಷಗಳಿಂದ ಸಂಕಷ್ಟವನ್ನು ಅನುಭವಿಸಿದವು. ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರನ್ನು ತಳ ಸಮುದಾಯದ 70ವರ್ಷಗಳಿಂದ ವಿದ್ಯೆ, ಉದ್ಯೋಗ, ಅಧಿಕಾರ, ಅಂತಸ್ತು, ಸಮಾನತೆಗಳನ್ನು ಪಡೆದು ದೇಶದ ಮೂಲ ನಿವಾಸಿಗಳು ಪ್ರಗತಿಯತ್ತ ಮುನ್ನಡೆಯುತ್ತಿದ್ದಾರೆ.

ಇದನ್ನು ಸಹಿಸಲಾಗದ ಪುರೋಹಿತ ಶಾಹಿ ವರ್ಗ ಮುಸಲ್ಮಾನರೆಂಬ ಬೆದರು ಬೊಂಬೆಯ ಭಯ ಹುಟ್ಟಿಸಿ ತಮ್ಮ ಸ್ವಾರ್ಥಕ್ಕಾಗಿ ಯುವಕರುಗಳನ್ನು ಮರಳು ಮಾಡುತ್ತಿವೆ. ಅವರ ಮಾತಿಗೆ ಮರುಳಾಗದೆ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸ್ವಾಭಿಮಾನದ ಸಂರಕ್ಷಣೆಗಾಗಿ ಐಕ್ಯತೆಯಿಂದ ಹೋರಾಡಬೇಕಿದೆ ಎಂದ ಅವರು, ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ. ಸಾಮಾಜಿಕ ಸಮಾನತೆ ಸಾರಿದ ಕರ್ನಾಟಕ ಅಗ್ರಗಣ್ಯ ರಾಜ್ಯ ಹಲವು ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಯಾಗಿದೆ. ಆದರೆ, ಬಲಾಡ್ಯರು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಚನೀಯ ಎಂದರು.

ಇಂದಿರಾಸಹಾನಿ ಕೇಸಿನಲ್ಲಿ ಸುಪ್ರಿಂಕೋರ್ಟ್ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಿಕೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶಿಸಿದೆ. ಆ ಪ್ರಕಾರ ಎಲ್ಲಾ ರಾಜ್ಯಗಳು ಆಯೋಗ ರಚಿಸಿ ಎಲ್ಲಾ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಅಧ್ಯಯನಗಳನ್ನು ಪರಿಶೀಲಿಸಿ ಎಲ್ಲಾ ಜಾತಿಯವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂಬುದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಒತ್ತಾಯವಾಗಿದೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...