ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ ಎಂ ಬಿ ಪಾಟೀಲ್

Date:

‌- ಭಾರತ್ ಜೋಡೋ ಯಾತ್ರೆ ವೇಳೆ ಜೀನ್ಸ್ ಪಾರ್ಕ್ ಸ್ಥಾಪನೆ ಭರವಸೆ ಕೊಟ್ಟಿದ್ದ ರಾಹುಲ್ ಗಾಂಧಿ
-‌ 154 ಎಕರೆ ಸ್ವಾಧೀನ, ಪ್ರಮುಖ ಜವಳಿ ಉದ್ಯಮಗಳ ಅಹ್ವಾನಕ್ಕೆ ಸಿದ್ಧತೆ: ಸಚಿವ ಎಂ ಬಿ ಪಾಟೀಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ ‘ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ಈ ಬಗ್ಗೆ‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿದಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆಯನ್ನು ಆಕರ್ಷಿಸಲಿದ್ದೇವೆ. ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು” ಎಂದಿದ್ದಾರೆ.

“ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು. ಆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾವೋವಾದಿಗಳು ಮುಖ್ಯವಾಹಿನಿಗೆ ಮರಳುತ್ತಿರುವುದು ಸ್ವಾಗತಾರ್ಹ

ರಾಹುಲ್ ಗಾಂಧಿ ಭರವಸೆ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ” ಎಂದು ತಿಳಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ” ಎಂದು ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...