ಬೆಳ್ತಂಗಡಿ | ತೆಕ್ಕಾರಿನ ಶಾಂತಿ, ಸೌಹಾರ್ದತೆಗೆ ಧಕ್ಕೆ; ದೇವಸ್ಥಾನಕ್ಕೆ ಮುಸ್ಲಿಂ ಒಕ್ಕೂಟ ಪತ್ರ

Date:

ಬೆಳ್ತಂಗಡಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಬಹಿರಂಗವಾಗಿ ತೆಕ್ಕಾರಿನ ಮುಸ್ಲಿಮರ ಬಗ್ಗೆ ಅವಹೇಳನಕಾರಿ, ಮಾನಹಾನಿ ಪದಗಳನ್ನು ಬಳಸಿ ಕೋಮುಪ್ರಚೋದನಾಕಾರಿ ಭಾಷಣಕ್ಕೆ ಅವಕಾಶ ಮಾಡಿಕೊಟ್ಟಿರುವುದರ ವಿರುದ್ದ ಗ್ರಾಮದ ಮುಸ್ಲಿಮರು ದೇವಸ್ಥಾನದ ಆಡಳಿತ ಮಂಡಳಿಗೆ ತಮ್ಮ ನಿಲುವು ವ್ಯಕ್ತಪಡಿಸಲು ಕೋರಿ ಪತ್ರ ಬರೆದಿದ್ದಾರೆ.

ಕಳೆದ ಶನಿವಾರ (ಮೇ.3)ರಂದು ರಾತ್ರಿ 9.30ರ ಸಮಯದಲ್ಲಿ ಬ್ರಹ್ಮಕಲಶೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಊರಿನ ಮುಸ್ಲಿಮರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಭಾಷಣ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ದೇವಸ್ಥಾನದ ಪರವಾಗಿ ಖುದ್ದಾಗಿ ಮಸೀದಿಗಳಿಗೆ ಬಂದು ಕಾರ್ಯಕ್ರಮಕ್ಕೆ ಬರುವಂತೆ ಆಮಂತ್ರಣ ನೀಡಲಾಗಿತ್ತು. ಆಮಂತ್ರಣ ಸ್ವೀಕರಿಸಿ, ತೆಕ್ಕಾರಿನ ಸೌಹಾರ್ಧತೆಯನ್ನು ಇನ್ನಷ್ಟು ಉತ್ತೇಜಿಸುವ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಗ್ರಾಮದ ಮುಸ್ಲಿಂ ಬಾಂಧವರು ಭಾಗವಹಿಸಿರುತ್ತೇವೆ. ಆದರೆ ಅದೇ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ಕುರಿತು ಅವಹೇಳನಕಾರಿ ಭಾಷಣ ಮಾಡಿರುವುದು ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದಾರೆ.

ಊರಿನ ಹಿಂದೂ-ಮುಸ್ಲಿಂ ಸಮುದಾಯಗಳು ಅಣ್ಣತಮ್ಮಂದಿರಂತೆ ಬಾಳಬೇಕಾಗಿದ್ದ ಸಾಮರಸ್ಯವನ್ನು ಹಾಳು ಮಾಡಲಾಗಿದೆ. ಬ್ರಹ್ಮಕಲಶೋತ್ಸವದ ಸಂದರ್ಭ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ವಾಹನ ಪಾರ್ಕಿಂಗ್, ಸಭಾ ವೇದಿಕೆಗೆ, ನೀರಿನ ವ್ಯವಸ್ಥೆಗೆ, ಅನ್ನದಾನದ ವ್ಯವಸ್ಥೆಗೆ ಮುಸ್ಲಿಮರು ತಮ್ಮ ಜಮೀನಿನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಟ್ಯೂಬ್ ಲೈಟ್ ಹಾಗೂ ಡೀಸೆಲ್ ಕದ್ದ ಬಗ್ಗೆ ಸ್ಪಷ್ಟವಾದ ಸಾಕ್ಷಿ ಇಲ್ಲದೆ ಇಡೀ ಮುಸ್ಲಿಂ ಸಮುದಾಯದ ಮೇಲೆ ಗಂಭೀರ ಆರೋಪ ಹೊರಿಸಿದ್ದು, ಈ ಬಗ್ಗೆ ಗೋಪಾಲಕೃಷ್ಣ ಆಡಳಿತ ಮಂಡಳಿಯು ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಒಕ್ಕೂಟ ಪತ್ರದ ಮೂಲಕ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸೌಜನ್ಯ ಪ್ರಕರಣ | ಬೆಳ್ತಂಗಡಿಯಲ್ಲಿ 346 ಅಸಹಜ, ನಿಗೂಢ ಸಾವಾಗಿರುವ ಮಾಹಿತಿಯಿದೆ: ಚೇತನ್ ಅಹಿಂಸಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...