ಬೆಳ್ತಂಗಡಿ | ‘ಸೌಜನ್ಯ ಪರ’ ಹಾಕಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಪೊಲೀಸ್‌‌ ಇಲಾಖೆ ಸೂಚನೆ

Date:

  • ಬೆಳ್ತಂಗಡಿ ತಾ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸೂಚನೆ ನೀಡಿದ ಪೊಲೀಸರು
  • ಸಾರ್ವಜನಿಕರಲ್ಲಿ ಅನುಮಾನ, ಅಸಮಾಧಾನಕ್ಕೆ ಕಾರಣವಾದ ನಡೆ

ಧರ್ಮಸ್ಥಳದಲ್ಲಿ ಕಳೆದ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ರಾಜ್ಯಾದ್ಯಂತ ಚರ್ಚೆಯಲ್ಲಿರುವಾಗಲೇ ಒಂದೊಂದು ದಿನ ಒಂದೊಂದು ಬೆಳವಣಿಗೆಗಳಾಗುತ್ತಿದೆ.

ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ಕುಮಾರ್‌ನನ್ನು ಸಿಬಿಐ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ನೀಡಿದ ಬಳಿಕ, ಹಾಗಾದರೆ ಅತ್ಯಾಚಾರಗೈದು ಕೊಲೆ ನಡೆಸಿದವರು ಯಾರು ಎಂಬ ಪ್ರಶ್ನೆ ಎಲ್ಲೆಡೆ ಭುಗಿಲೆದ್ದಿದೆ.

ಈ ನಡುವೆ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬದ ಹೆಸರನ್ನು ಸೌಜನ್ಯ ಪ್ರಕರಣದಲ್ಲಿ ಎಳೆದುತಂದು ಹಾಳುಗೆಡವಲಾಗುತ್ತಿದೆ ಎಂದು ಆರೋಪಿಸಿ ಕಳೆದ ಶುಕ್ರವಾರ ಧರ್ಮಸ್ಥಳದ ಪರ ಇರುವವರು ಪ್ರತಿಭಟನೆಯೂ ನಡೆಸಿದ್ದರು. ಈ ವೇಳೆ ಸೌಜನ್ಯಳಿಗೆ ನ್ಯಾಯ ಕೊಡಿ ಎಂದು ಪ್ಲೆಕಾರ್ಡ್‌ ಇಟ್ಟು ವೇದಿಕೆಯ ಮುಂಭಾಗದಲ್ಲಿ ಕಾಣಿಸಿಕೊಂಡಿದ್ದ ಸೌಜನ್ಯಳ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆಯೊಡ್ಡಿದ್ದ ಘಟನೆಯೂ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಬೆಳವಣಿಗೆಗಳು ಚರ್ಚೆಯಲ್ಲಿರುವಾಗಲೇ ಸೌಜನ್ಯ ಪರ ಹಾಕಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಪೊಲೀಸ್‌‌ ಇಲಾಖೆಯು ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸೂಚನೆ ನೀಡಿರುವ ಪತ್ರವು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರ ಮನವಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್‌ನ ಪಿಡಿಓಗಳಿಗೆ ತಾ ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಹಾಕಿರುವ ಎಲ್ಲ ಬ್ಯಾನರ್, ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನ ಮತ್ತು ಅಸಮಾಧಾನ ಉಂಟು ಮಾಡಿದೆ.

flex letter 1

ಆಗಸ್ಟ್ 3ರಂದು ಹೊರಡಿಸಿರುವ ಆದೇಶದ ಪ್ರತಿಯು ಈ ದಿನ.ಕಾಮ್‌ಗೂ ಲಭ್ಯವಾಗಿದ್ದು, ಆದೇಶದಲ್ಲಿ, ‘ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ, ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು, ಧರ್ಮ ಧರ್ಮಗಳ ನಡುವೆ ಒಡಕು ಉಂಟುಮಾಡಲಾಗುತ್ತಿದೆ. ಇದರಿಂದಾಗಿ ಸಮಾಜದಲ್ಲಿ, ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ, ಕಾನೂನುಬಾಹಿರವಾಗಿ ಅಳವಡಿಸಿರುವ ಸೌಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಫ್ಲೆಕ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ದ‌.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು’ ಎಂದು ಉಲ್ಲೇಖಿಸಲಾಗಿದೆ.

soujanya

ಈ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಸೂಚನೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು, ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಿಗೂ ನಿರ್ದೇಶನ ನೀಡಿದ್ದರು. ಹೀಗಾಗಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯ ಪಿಡಿಓಗಳು ‘ಸೌಜನ್ಯಪರ’ ಬ್ಯಾನರ್ ತೆರವು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...