ಬೆಳ್ತಂಗಡಿ ಸುಡುಮದ್ದು ಸ್ಫೋಟ ಪ್ರಕರಣ: ಮಾಲೀಕನ ವಶಕ್ಕೆ ಪಡೆದ ಎಸ್‌ಪಿ ಹೇಳಿದ್ದೇನು?

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ಸಾಲಿಡ್ ಫಯರ್ ವರ್ಕ್ಸ್ ಎಂಬ ಸುಡುಮದ್ದು ತಯಾರಿಕಾ ಘಟಕದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸಂಸ್ಥೆಯ ಮಾಲೀಕರಾಗಿರುವ ಸೈಯ್ಯದ್ ಬಶೀರ್​ ಅವರನ್ನು ವಶಕ್ಕೆ ಪಡೆದಿದ್ದೇವೆ. ನಮಗೆ ದೊರೆತಿರುವ ದಾಖಲೆಗಳ ಪ್ರಕಾರ 2011ರಿಂದ ಪಟಾಕಿ ತಯಾರಿಕೆಗೆ ಪರವಾನಗಿ ಪಡೆದುಕೊಂಡಿದ್ದಾರೆ. ಅದನ್ನು ಕಂದಾಯ ಇಲಾಖೆ ನೀಡಿದೆ. 2019ರಲ್ಲಿ ಅದನ್ನು ಮತ್ತೆ ನವೀಕರಿಸಿಕೊಂಡಿದ್ದು, 2022ರಲ್ಲಿ ಅದನ್ನು ಅಧಿಕಾರಿಗಳು ದೃಢೀಕರಣ ಕೂಡ ಮಾಡಿಕೊಂಡಿದ್ದಾರೆ. ಈ ಲೈಸೆನ್ಸ್ 2024ರವರೆಗೂ ಚಾಲ್ತಿಯಲ್ಲಿದೆ ಎಂಬುದು ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

sp dakshina kannada
ಘಟನಾ ಸ್ಥಳಕ್ಕೆ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಎಸ್‌ಪಿಯವರೊಂದಿಗೆ ಮಾಹಿತಿ ಪಡೆದುಕೊಂಡರು

“ಬಶೀರ್​ ಅವರು ತನ್ನದೇ ಹೆಸರಿನಲ್ಲಿರುವ ಜಾಗದಲ್ಲಿ ಪಟಾಕಿ ತಯಾರಿಸುತ್ತಿದ್ದರು. ಘಟನೆಯ ವೇಳೆ ಸ್ಥಳದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಕಾರ್ಮಿಕರನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(24), ಕೇರಳ ಮೂಲದ ವರ್ಗೀಸ್(60) ಮತ್ತು ಕುನ್ಹಿ(60) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಫಾರೆನ್ಸಿಕ್ ತಂಡವನ್ನು ಕರೆಸಲಾಗಿದೆ. ಎಲ್ಲ ವಸ್ತುಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗುವುದು. ಯಾವ ಕಾರಣಕ್ಕೆ ಈ ಸ್ಫೋಟ ಆಗಿದೆ ಎಂಬುದರ ಬಗ್ಗೆ ಪತ್ತೆ ಹಚ್ಚುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

fire 1

“ಸುಡುಮದ್ದಿಗೆ ಗ್ರಾಹಕರಿಂದ ಬೇಡಿಕೆ ಬಂದಾಗ ಅದನ್ನು ತಯಾರಿಸಿಕೊಡಲಾಗುತ್ತಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಾಗ ಸೈಯದ್ ಬಶೀರ್ ಅವರ ಕುಟುಂಬ ತುಂಬಾ ವರ್ಷದಿಂದ ಇದನ್ನು ಮಾಡಿಕೊಂಡು ಬರುತ್ತಿದೆ. ಅವರಿಂದಾನೇ ಸ್ಥಳೀಯ ಜನರು ತಮ್ಮ ಸಮಾರಂಭಗಳಲ್ಲಿ ಸಿಡಿಸಲು ಖರೀದಿಸುತ್ತಿದ್ದರು ಎಂದು ಗೊತ್ತಾಗಿದೆ. ಮೈಸೂರಿನ ವ್ಯಕ್ತಿಯೋರ್ವರು ಪಟಾಕಿ ಬೇಕು ಎಂದು ತಿಳಿಸಿದ್ದರಿಂದ ಇಲ್ಲಿನ ಕಾರ್ಮಿಕರು ತಯಾರಿಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸ್ಪೋಟಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಎಸ್‌ಪಿ ತಿಳಿಸಿದರು.

‘ಬಾಂಬ್’ ಆರೋಪಕ್ಕೆ ಎಸ್‌ಪಿ ಹೇಳಿದ್ದು ಹೀಗೆ..

ಬಾಂಬ್ ಸ್ಫೋಟದಂತಹ ಶಬ್ದ ಕೇಳಿಬಂದಿದೆ. ಹಾಗಾಗಿ ಇಲ್ಲಿ ಬಾಂಬ್ ತಯಾರಿಸಲಾಗುತ್ತಿತ್ತು ಎಂಬ ಬಗ್ಗೆ ಸ್ಥಳೀಯರು ಆರೋಪಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ, “ಸ್ಥಳೀಯರಲ್ಲಿ ವಿಚಾರಣೆ ನಡೆಸಿದಾಗ ಈ ಭಾಗದಲ್ಲಿ ಕೆಲವೊಂದು ದೊಡ್ಡ ಪಟಾಕಿ(ಸ್ಥಳೀಯವಾಗಿ ಗರ್ನಲ್ ಎಂದು ಹೆಸರಿದೆ) ಬಳಕೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರಕಿದೆ. ದೊಡ್ಡ ಪಟಾಕಿಗೆ ಅರ್ಧ ಸುಡುಮದ್ದು ಹಾಕಿ, ಅದಕ್ಕೆ ಬತ್ತಿ ಸೇರಿಸಲಾಗುತ್ತಿತ್ತು. ಅದನ್ನು ಇಲ್ಲಿ ತಯಾರು ಮಾಡುತ್ತಿದ್ದರು. ತಯಾರಿಸುತ್ತಿದ್ದಕ್ಕೆ ಪೂರಕವಾಗಿ ಕೆಲವೊಂದು ಖಾಲಿ ಶೆಲ್‌ಗಳು, ಬತ್ತಿಗಳು ಹಾಗೂ ಈಗಾಗಲೇ ತಯಾರಿಸಿದ್ದ ಸುಡುಮದ್ದುಗಳು ಕೂಡ ಪತ್ತೆಯಾಗಿದೆ. ಈ ದೊಡ್ಡ ಪಟಾಕಿಯನ್ನು ಸ್ಥಳೀಯ ಜಾತ್ರೆ, ಶಿವರಾತ್ರಿ ಹಬ್ಬ, ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಹೊಡೆಯಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

“ಇಂತಹಾ ಪಟಾಕಿ ತಯಾರಿಕಾ ಘಟಕದಲ್ಲಿ ಸುರಕ್ಷಿತೆ ಬಹಳ ಅಗತ್ಯವಾದುದು. ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸುರಕ್ಷತೆಗೆ ಆದ್ಯತೆ ಕೊಟ್ಟಿಲ್ಲ ಎಂದು ಗೊತ್ತಾಗಿದೆ. ಹಾಗಾಗಿ, ಇದೇ ಹಿನ್ನೆಲೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಸುತ್ತೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ ತಿಳಿಸಿದ್ದಾರೆ.

solid

rak

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...