ವೇಣೂರು | ನಿಯಂತ್ರಣ ತಪ್ಪಿ ಥಾರ್ ವಾಹನಕ್ಕೆ ಗುದ್ದಿದ ಖಾಸಗಿ ಬಸ್: ಜೀಪ್ ಚಾಲಕನಿಗೆ ಗಂಭೀರ ಗಾಯ

Date:

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮೂಡಬಿದಿರೆ ಭಾಗಕ್ಕೆ ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಥಾರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೇಣೂರಿನ‌ ಮೇಲಿನಪೇಟೆಯಲ್ಲಿ ನಡೆದಿದೆ.

ಮೂಡಬಿದಿರೆಯ ಭಾಗಕ್ಕೆ ಹೋಗಲು ಪ್ರಯಾಣಿಕರನ್ನು ತುಂಬಿಕೊಂಡು ಬೆಳ್ತಂಗಡಿ ಕಡೆಯಿಂದ ಬಂದಿದ್ದ ಶ್ರೀಕೃಷ್ಣ ಹೆಸರಿನ ಖಾಸಗಿ ಬಸ್, ವೇಣೂರು ಮೇಲಿನ ಪೇಟೆಯಲ್ಲಿರುವ ನಮನ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಬಸ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಳ್ತಂಗಡಿಯ ಭಾಗಕ್ಕೆ ತೆರಳುತ್ತಿದ್ದ ಥಾರ್ ಜೀಪ್‌ನ ಮುಂಭಾಗಕ್ಕೆ ನೇರವಾಗಿ ಬಡಿದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಥಾರ್ ಜೀಪ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಕೂಡಲೇ ಮೂಡಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಜೆ 5.30ರ ಸುಮಾರಿಗೆ ನಡೆದಿರುವುದಾಗಿ ತಿಳಿದು ಬಂದಿದ್ದು, ಜೀಪ್ ಚಾಲಕನ ವಿವರ ಇನ್ನೂ ತಿಳಿದು ಬಂದಿಲ್ಲ. ಬಸ್‌ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

1002406451

ಅಪಘಾತದ ರಭಸಕ್ಕೆ ಥಾರ್ ಜೀಪ್‌ನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ‌ ಕೂಡಲೇ ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆಯ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ ವೇಣೂರು ಪೊಲೀಸ್ ಠಾಣಾಧಿಕಾರಿ ಶ್ರೀ ಶೈಲಾ, “ಥಾರ್ ಜೀಪ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಕೂಡಲೇ ಮೂಡಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ವಿವರವನ್ನು ಸಂಗ್ರಹಿಸುತ್ತಿದ್ದೇನೆ. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಬಸ್ ಚಾಲಕ ಸ್ಟೀರಿಂಗ್ ಜಾಮ್ ಆದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...