ಬೆಳ್ತಂಗಡಿ | ಸ್ಥಳೀಯ ಉದ್ಯೋಗಕ್ಕೆ ಆದ್ಯತೆ ನೀಡುವಂತೆ ಬೇಡಿಕೆ; ಡಿವೈಎಫ್ಐ ವತಿಯಿಂದ ಯುವಜನ ಜಾಥಾ

Date:

ʼಉದ್ಯೋಗ ಸೃಷ್ಟಿಸಿʼ, ʼಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿʼ ಸೇರಿದಂತೆ ಹಲವು ಘೋಷಣೆಗಳೊಂದಿಗೆ ಡಿವೈಎಫ್ಐ ನೇತೃತ್ವದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ ಅವರು ನೆರವೇರಿಸಿ ಮಾತನಾಡುತ್ತಾ, “ನಮ್ಮ ಜಿಲ್ಲೆಗೆ ಬಂದಿರುವ ಕೈಗಾರಿಕೆಗಳಿಂದಾಗಿ ನೆಲ, ಜಲ, ವಾಯು ಹಾಳಾಗುತ್ತಿದೆ. ಆದರೆ‌, ನಮ್ಮ ಯುವಕರಿಗೆ ಉದ್ಯೋಗಾವಕಾಶಗಳು ಮರೀಚಿಕೆಯಾಗಿ‌ಯೇ ಉಳಿದಿದೆ ಎಂಬುದು ದುರಂತ. ಅವಕಾಶಗಳ ಕೊರತೆಯಿಂದಾಗಿ ಯುವ ಸಮುದಾಯ ಅಭದ್ರತೆಯಲ್ಲಿ ಬದುಕುವಂತಾಗಿದೆ. ಡಿವೈಎಫ್ಐ ಹಮ್ಮಿಕೊಂಡಿರುವ ಈ ಜಾಥಾ ಯುವಜನರನ್ನು ಎಚ್ಚರಗೊಳಿಸುವ ಕಾರ್ಯ ಮಾಡಲಿ” ಎಂದರು.

WhatsApp Image 2025 09 08 at 3.54.19 PM

ಡಿವೈಎಫ್ಐ ದಕ್ಷಿಣ ಕ್ನ್ನಡ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, “ದ.ಕ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಕ್ಷುಬ್ದ ವಾತಾವರಣ ಯುವಜನರ ಮೇಲೆ ಗಾಢ ಪರಿಣಾಮವನ್ನು ಬೀರುತ್ತಿದೆ. ಜಿಲ್ಲೆಯಲ್ಲಿನ ಅಶಾಂತಿಯ ವಾತಾವರಣ ಜಿಲ್ಲೆಯನ್ನು ಅಭಿವೃದ್ದಿಯಿಂದ ಹಿಂದಕ್ಕೆ ಸರಿಸುತ್ತಿದೆ. ಉದ್ಯೋಗಗಳು ನಾಶವಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿ ಆಗಬೇಕಾದರೆ ಉದ್ಯೋಗಗಳು ಸೃಷ್ಟಿಯಾಗಬೇಕಾದರೆ ಮೊದಲು ಶಾಂತಿ ಸೌಹಾರ್ದತೆ ನೆಲೆಸುವಂತೆ ನೋಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಜನ ಜಾಥಾದ ನೇತೃತ್ವ ವಹಿಸಿದ್ದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಾಥಾದ ಉದ್ದೇಶ ಮತ್ತು ಸರಕಾರದ ಮುಂದಿಟ್ಟಿರುವ ಬೇಡಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಬೆಳ್ತಂಗಡಿಯಲ್ಲಿರುವ ತಾಲೂಕು ಕಚೇರಿ ಸಹಿತ ಸರಕಾರದ ವಿವಿಧ ಇಲಾಖೆಗಳಲ್ಲಿ ನೂರಾರು ಹುದ್ದೆಗಳು ಖಾಲಿ ಬಿದ್ದಿದೆ. ಇಲ್ಲಿನ ಪ್ರವಾಸೋದ್ಯಮಕ್ಕೆ ಯಾವ ಆಧ್ಯತೆಯೂ ನೀಡಿಲ್ಲ. ಜಮಲಾಬಾದ್ ನಂತಹ ಕೋಟೆಗಳು, ಪ್ರಾಕೃತಿಕ ಸೌಂದರ್ಯ ಹೊಂದಿರುವ ಹಲವಾರು ಜಲಪಾತಗಳು ಹಾಗೂ ಪಶ್ಚಿಮ ಘಟ್ಟಗಳನ್ನು ಪರಿಸರಕ್ಕೆ ಯಾವುದೇ ಅಡ್ಡಿಯಾಗದಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಅಭಿವೃದ್ಧಿಗೊಳಿಸಲು ಸಾಧ್ಯವಾದರೇ ಬೆಳ್ತಂಗಡಿ ಭಾಗದ ಯುವಜನರಿಗೆ ಹಲವು ಉದ್ಯೋಗಗಳು ಸೃಷ್ಡಿಯಾಗಲು ಸಾಧ್ಯವಾಗಲಿವೆ‌” ಎಂದರು.

ಇದನ್ನೂ ಓದಿ: ಬೆಳ್ತಂಗಡಿ | ಸಮಾವೇಶಗಳ ಮೂಲಕ ಹೃದಯಗಳ ಒಗ್ಗೂಡುವ ಕೆಲಸವಾಗಲಿ: ಚಾರುಕೀರ್ತಿ ಸ್ವಾಮೀಜಿ

ವೇದಿಕೆಯಲ್ಲಿ ಕೋಶಾಧಿಕಾರಿ ಮನೋಜ್ ವಾಮಂಜೂರು, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷಕಿರಣ ಪ್ರಭ, ಭಾರತ ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ, ಇನಾಸ್ ಬಿ ಕೆ, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ಅದಿತಿ, ಕಾರ್ಯದರ್ಶಿ ಅಭಿಷೇಕ್ ಬೆಳ್ತಂಗಡಿ, ಸ್ವಾಗತ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ರೈತ ಸಂಘದ ಮುಖಂಡ ಸುರೇಶ್ ಭಟ್ ಉಪಸ್ಥಿತರಿದ್ದರು.

ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಿ, ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತನ್ನಿ ಎಂಬ ಬೇಡಿಕೆಯೊಂದಿಗೆ ಬೆಳ್ತಂಗಡಿಯಿಂದ ಆರಂಭವಾಗಿರುವ ಯುವಜನ ಜಾಥಾ ಜಿಲ್ಲೆಯಾದ್ಯಂತ ಸಂಚರಿಸಿ ಸೆ.9 ರಂದು ಮಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾರೋಪಗೊಳ್ಳಲಿದೆ ಎಂದು ಡಿವೈಎಫ್ಐ ನ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...