ಬೆಳ್ತಂಗಡಿ | ಶಾಸಕ ಹರೀಶ್ ಪೂಂಜಾರನ್ನು ರೌಡಿಶೀಟರ್ ಎಂದು ಪರಿಗಣಿಸಿ ಗಡಿಪಾರು ಮಾಡಿ: ರಕ್ಷಿತ್ ಶಿವರಾಂ

Date:

“ಗುಂಪು ಘರ್ಷಣೆ, ಅಧಿಕಾರಿಗಳ ಮೇಲೆ ಹಲ್ಲೆ, ಕೋಮು ಪ್ರಚೋದನಕಾರಿ ಭಾಷಣ ಸೇರಿದಂತೆ ಶಾಸಕ ಹರೀಶ್ ಪೂಂಜ ಮೇಲೆ 9 ಪ್ರಕರಣಗಳಿವೆ. ಕೋಮು ದ್ವೇಷದ ಮೂಲಕ ಶಾಂತಿ ಕದಡುವ ಅವರ ಮೇಲಿನ ಪ್ರಕರಣಗಳು ಗಂಭೀರವಾಗಿದೆ. ಅವರನ್ನು ರೌಡಿಶೀಟರ್ ಎಂದು ಪರಿಗಣಿಸಿ ಜಿಲ್ಲೆಯಿಂದ ಗಡಿಪಾರು ಮಾಡಿಸಬೇಕು” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕ ಹರೀಶ್ ಪೂಂಜ ಜಿಲ್ಲೆಯ ಕೋಮು ಸೌಹಾರ್ದಕ್ಕೆ ಧಕ್ಕೆ ತರುತ್ತಿದ್ದಾರೆ. ಸಾವಿನ ಮನೆಗೆ ಹೋಗಿ ರಾಜಕೀಯ ಮಾಡುತ್ತಿದ್ದಾರೆ. ಫರಂಗಿಪೇಟೆಯಲ್ಲಿ ಬಾಲಕ ನಾಪತ್ತೆಯಾದಾಗ, ತೆಕ್ಕಾರು ದೇವಸ್ಥಾನದ ಧಾರ್ಮಿಕ ವೇದಿಕೆಯಲ್ಲಿ ದ್ವೇಷ ಭಾಷಣದ ಮೂಲಕ ಸಮಾಜವನ್ನು ಒಡೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.

“ತೆಕ್ಕಾರಿನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ವಾಹನ ನಿಲುಗಡೆ, ರಸ್ತೆ, ವೇದಿಕೆಗೆ ಅಲ್ಲಿನ ಮುಸ್ಲಿಮರು ಜಾಗ ನೀಡಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿಯವರು ಮುಸ್ಲಿಮರ ಮನೆಗೆ ಹೋಗಿ ಆಮಂತ್ರಣ ನೀಡಿದ್ದರಿಂದ, ದೇವಸ್ಥಾನದ ಕೆಲಸಗಳಲ್ಲಿ ಒಟ್ಟಾಗಿ ಇದ್ದುದರಿಂದ ಅವರು ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿದ್ದರು. ಸಾಮರಸ್ಯಕ್ಕೆ ಹೆಸರಾಗಿದ್ದ ಆ ಊರಿನಲ್ಲಿ ಮನೆಗೆ ಬಂದ ಅತಿಥಿಗಳ ಬಗ್ಗೆ ಕೋಮು ಪ್ರಚೋದಿತ ಮಾತು ಆಡಿರುವುದು ದುರಂತ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನೈಜ ಸಮಸ್ಯೆ ಮರೆಮಾಚಲು, ಜನರ ಗಮನ ಬೇರೆಡೆ ಸೆಳೆಯಲು ಮೋದಿ ಬಳಸುತ್ತಿರುವ ಐದು ಆಸನಗಳು

“ಶಾಸಕ ಹರೀಶ್ ಪೂಂಜಾ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕುಟುಂಬವನ್ನು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದ‌ರ್ ಅವರನ್ನು ಅವಹೇಳನ ಮಾಡಿರುವುದು ಸರಿಯಲ್ಲ. ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿಯಾದರೆ ಶಾಸಕರ ದ್ವೇಷ ಕಾರುವ ಚಾಳಿಯಿಂದಾಗಿ ಬೆಳ್ತಂಗಡಿಯ ಅಭಿವೃದ್ಧಿ ಕುಂಠಿತವಾಗಿದೆ. ತಾಲೂಕಿನಲ್ಲಿ ಶಾಂತಿ ಕದಡಿ ಯುವ ಮನಸ್ಸನ್ನು ಪ್ರಚೋದಿಸಿ ಅಸ್ತಿತ್ವ ಉಳಿಸುವ ಕಾರ್ಯ ಮಾಡಬಹುದು ಎಂದುಕೊಂಡಿರುವ ಅವರಿಗೆ ತಾಲೂಕಿನ ಜನತೆ ಅವಕಾಶ ನೀಡುವುದಿಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ನಾಗೇಶ್ ಕುಮಾ‌ರ್ ಗೌಡ, ಸತೀಶ್ ಕಾಶಿಪಟ್ಟ, ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ, ಪ್ರಮುಖರಾದ ಶೇಖರ ಕುಕ್ಕೇಡಿ, ಸಂತೋಷ್ ಕುಮಾರ್, ಸೆಬಾಸ್ಟಿಯನ್, ಹನೀಫ್, ಹಕೀಂ ಕೊಕ್ಕಡ, ಅಜರ್‌ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...