ಬೆಳ್ತಂಗಡಿ | ಸಮಾವೇಶಗಳ ಮೂಲಕ ಹೃದಯಗಳ ಒಗ್ಗೂಡುವ ಕೆಲಸವಾಗಲಿ: ಚಾರುಕೀರ್ತಿ ಸ್ವಾಮೀಜಿ

Date:

ಸಾರ್ವಜನಿಕ ಸಮಾವೇಶಗಳ ಮೂಲಕ ಹೃದಯಗಳ ಒಗ್ಗೂಡುವ ಕೆಲಸವಾಗಬೇಕು. ಎಲ್ಲಾ ಧರ್ಮದವರು ಸೇರಿಕೊಂಡು ಜೀವನ ನಡೆಸಿದಾಗ ಮಾತ್ರ ಅಖಂಡ ಭಾರತದ ಪರಿಕಲ್ಪನೆ ನೆರವೇರುತ್ತದೆ. ಧರ್ಮ ಧರ್ಮದ ಮಧ್ಯೆ ವೈರತ್ವ ಸಾಧಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಎಲ್ಲರೂ ಒಂದುಗೂಡಿ ಜೀವನ ಮಾಡಿದರೆ ಮಾತ್ರ ಭಾರತ ಶ್ರೀಮಂತ ದೇಶವಾಗಲು ಸಾಧ್ಯ ಎಂದು ಮೂಡುಬಿದಿರೆಯ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜಮಾಅತೇ ಇಸ್ಲಾಮಿ ಹಿಂದ್ ನೇತೃತ್ವದಲ್ಲಿ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್’ ಘೋಷ ವಾಕ್ಯದಡಿ ಸೀರತ್ ಅಭಿಯಾನ ಜರುಗಿತು. ಇದರ ಪ್ರಯುಕ್ತ ನಡೆದ ʼಧಾರ್ಮಿಕ ಸೌಹಾರ್ದ ಸವಾಲುಗಳು ಮತ್ತು ಅವಕಾಶಗಳುʼ ಎಂಬ ಸಾರ್ವಜನಿಕ ಸಮಾವೇಶದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

“ಪ್ರತಿಯೊಬ್ಬರೂ ವರ್ಷದಲ್ಲಿ ಕನಿಷ್ಠ ನಾಲ್ಕು ಬಾರಿಯಾದರು ತಮ್ಮ ಪರಿಸರದಲ್ಲಿ ಇರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿ ಸಂವಿಧಾನದ ಪುಸ್ತಕ ಸೇರಿದಂತೆ ಎಲ್ಲಾ ಧರ್ಮದ ಪುಸ್ತಕಗಳನ್ನು ಓದಿದರೆ ಇತರೆ ಧರ್ಮದ ಬಗ್ಗೆ ಜ್ಞಾನ ಪಡೆದುಕೊಳ್ಳಲು ಸಹಾಯವಾಗುತ್ತದೆ. ಭಾರತದಲ್ಲಿ ಎಲ್ಲಾ ಧರ್ಮದವರು ನೆಲೆಸಿದ್ದಾರೆ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಧರ್ಮ, ಜಾತಿಗಳ ಮಧ್ಯೆ ಒಡಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಪೂಜೆ ಮಾಡುವ ದೇವರು ಒಬ್ಬನೇ. ಅದರೆ ಅವರು ಅನುಸರಿಸುವ ವಿಧಾನಗಳು ಮಾತ್ರ ಬೇರೆ ಬೇರೆಯಾಗಿದೆ ಅಷ್ಟೇ. ನಮ್ಮ ಧರ್ಮದ ಬಗ್ಗೆ ಯಾವ ರೀತಿಯಲ್ಲಿ ಗೌರವ, ಪ್ರೀತಿ ಹೊಂದಿರುತ್ತೇವೆ ಅದೇ ರೀತಿಯಲ್ಲಿ ಬೇರೆ ಧರ್ಮದ ಬಗ್ಗೆಯು ಅಷ್ಟೇ ಪ್ರೀತಿ ಗೌರವವನ್ನು ಹೊಂದಿರಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 08 at 12.58.32 PM

“ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡುವ ಸಂದರ್ಭದಲ್ಲಿ ಯಾರು ಕೂಡ ಜಾತಿ, ಧರ್ಮ ನೋಡಿ ಹೋರಾಟ ಮಾಡಲಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಯನ್‌, ಜೈನರು ಎಲ್ಲರೂ ಒಟ್ಟಾಗಿ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು” ಎಂದರು.

ಮಂಗಳೂರು ಬರಕಾ ಇಂಟರ್‌ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಶರ್ಫುದ್ದೀನ್ ಬಿ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ್ ಸಿಂಹ ನಾಯಕ್, ಕೆಪಿಸಿಸಿ ರಾಜ್ಯ ವಕ್ತಾರ ನಿಕೇತ್‌ರಾಜ್ ಮೌರ್ಯ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಮಾತನಾಡಿ ವಿಚಾರಗಳನ್ನು ಮಂಡಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನದಿಂದ ಸೋನಿಯಾ ಗಾಂಧಿಗೆ ಪತ್ರ

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್, ವರ್ತಕ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ಯಹ್ಯಾ ತಂಬಳ್ ಮದನಿ, ವಿವಿಧ ಸಂಘಟನೆಗಳ ಮುಖಂಡರುಗಳಾದ ಪ್ರಸಾದ್ ರೈ, ಶೇಖರ ಕುಕ್ಕೇಡಿ, ದಿವಾಕರ ರಾವ್, ಆದು ಬ್ಯಾರಿ ಬೆಳ್ತಂಗಡಿ, ಶೇಕುಂಗ್ ಬೆಳ್ತಂಗಡಿ, ಉಮರ್ ಕುಂಞ ಮುಸ್ಲಿಯಾರ್, ಪಿ ಜಿ ಅಬ್ದುಲ್ ಹಮೀದ್, ಡಾ. ರಾಜಾರಾಮ್, ಮನೋಹ‌ರ್ ಇಳಂತಿಲ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮೊದಲು ಬೆಳ್ತಂಗಡಿ ಸಂತೆಕಟ್ಟೆಯಿಂದ ಮಂಜುನಾಥ ಸ್ವಾಮಿ ಕಲಾ ಭವನದವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...