ಬೆಳ್ತಂಗಡಿ | ಮುಸ್ಲಿಮರ ಧಾರ್ಮಿಕ ಉಡುಪು ಧರಿಸಿ ಅವಹೇಳನ; ವಿಡಿಯೋ ವೈರಲ್

Date:

ದುಷ್ಕರ್ಮಿಗಳ ಗುಂಪೊಂದು ಮುಸ್ಲಿಮ್ ಸಮುದಾಯದ ಧಾರ್ಮಿಕ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ಧರಿಸಿ ಧಾರ್ಮಿಕ ಅಪಹಾಸ್ಯ ಮಾಡಿರುವ ಪ್ರಚೋದನಾಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ದ.ಕ‌. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಘಟನೆ ನಡೆದಿದ್ದು, ಹಿಂದು ಸಮುದಾಯದ ಕೆಲವು ಮಂದಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಮುಸ್ಲಿಂ ಸಮುದಾಯವನ್ನು ಅಪಹಾಸ್ಯ ಮಾಡುವ ಉದ್ದೇಶದಿಂದಲೇ ಇಂತಹ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ವೇಣೂರಿನ ಪುರುಷರಕಟ್ಟೆ ಎಂಬ ಸ್ಥಳದಲ್ಲಿ ದುಷ್ಕರ್ಮಿಗಳು ಮುಸ್ಲಿಂ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ತೊಟ್ಟು ನಿಂದನಾತ್ಮಕವಾಗಿ ನೃತ್ಯ ಮಾಡಿದ್ದಾರೆ. ಧಾರ್ಮಿಕ ಉಡುಪುಗಳನ್ನು ಅಗೌರವ ಮತ್ತು ಅಪಹಾಸ್ಯ ಮಾಡುವ ರೀತಿಯಲ್ಲಿ ಉಡುಪುಗಳನ್ನು ಧರಿಸಿ, ದಾಂಧಲೆ ನಡೆಸಿದ್ದಾರೆ. ಅಲ್ಲದೇ, ವಿಡಿಯೋದಲ್ಲಿ ಎಸ್‌ಡಿಪಿಐ ಪಕ್ಷದ ಧ್ವಜವೊಂದನ್ನು ಯುವಕನೋರ್ವ ಕೈಯ್ಯಲ್ಲಿ ಹಿಡಿದಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಈದಿನ.ಕಾಮ್ಗೆ ಪ್ರತಿಕ್ರಿಯಿಸಿರುವ ವೇಣೂರು ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್, “ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೃತ್ಯ್ಯ ನಡೆದಿದೆ ಎಂಬುದಾಗಿ ದೂರು ಬಂದಿದೆ. ಆದರೆ, ಪ್ರತಿ ವರ್ಷವೂ ಪುರುಷಕಟ್ಟೆ ಪೂಜೆಯ ವೇಳೆ ನಾನಾ ರೀತಿಯ ವೇಷ ಧರಿಸಿ ನೃತ್ಯ ಮಾಡಲಾಗುತ್ತದೆ. ಈ ಬಾರಿ ಬುರ್ಖಾವನ್ನೂ ಹಾಕಲಾಗಿದೆ. ದೂರು ದಾಖಲಿಸಿಕೊಂಡಿದ್ದು, ಎಡಿಸಿ ಅಭಿಪ್ರಾಯಕ್ಕಾಗಿ ಪತ್ರ ಬರೆದಿದ್ದೇವೆ. ಎಡಿಸಿಯಿಂದ ಪ್ರತಿಕ್ರಿಯೆ ಬಂದ ಬಳಿಕ, ಅದರ ಅನುಸಾರ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...