ಬೇಲೂರು | ಪವಿತ್ರ ರಂಝಾನ್ ಆಚರಣೆ; ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ

Date:

ಭಾನುವಾರ ಚಂದ್ರ ದರ್ಶನವಾದ ಹಿನ್ನೆಲೆ ಬೇಲೂರು ಕೇಂದ್ರ ಜಾಮಿಯಾ ಮಸೀದಿಯ ಗುರು ಸೈಯದ್ ಅಹಮದ್ ಅಶ್ರಫಿ ಸೋಮವಾರ ಈದುಲ್ ಫಿತರ್ ಆಚರಿಸುವುದಾಗಿ ಘೋಷಿಸಿದ್ದರು. ಹಾಗಾಗಿ ರಾಜ್ಯಾದ್ಯಂತ ರಂಝಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಒಂದು ತಿಂಗಳ ಉಪವಾಸ ತೊರೆದ ಮುಸ್ಲಿಮರು ಇಂದು ಬೆಳಿಗ್ಗೆ ಗೆಂಡೆಹಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ನಮಾಜ್ ಸಲ್ಲಿಸಿದರು ಮತ್ತು ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಕ್ಕಳು ಹಿರಿಯರು ಹೊಸ ಬಟ್ಟೆ ಧರಿಸಿ ಸಿಹಿ ಹಂಚಿ ಶುಭಕೋರಿ ವಿನಿಮಯ ಮಾಡಿಕೊಂಡರು.

ನೆರದಿದ್ದ ಭಕ್ತಾದಿಗಳಿಗೆ ಪ್ರವಚನ ನೀಡಿದ ಧರ್ಮಗುರುಗಳು ಮುಸ್ಲಿಮರಿಗೆ ಈ ರಂಝಾನ್ ತಿಂಗಳು ಪುಣ್ಯ ಪುನೀತ ತಿಂಗಳಾಗಿದೆ ರಂಝಾನ್ ತಿಂಗಳಲ್ಲಿ ಪ್ರಾಯ ಪೂರ್ತಿ ಹಾಗೂ ಬುದ್ಧಿ ಇರುವ ಸರ್ವ ಮುಸ್ಲಿಮರಿಗೂ ಪ್ರಾರ್ಥಕಾಲ ಮುಂಜಾನೆಯಿಂದ ಸೂರ್ಯಾಸ್ತದವರೆಗೆ ಉಪವಾಸ ವ್ರತ ಕಡ್ಡಾಯವಾಗಿದೆ. ಅಸೂಯೆ, ಅಹಂಕಾರ, ಲೋಭ, ಮದ-ಮತ್ಸರ, ಅಡಂಬರ, ಆಕ್ರಮ ಮುಂತಾದ ದುಷ್ಕೃತ್ಯಗಳಿಂದ ನಿತ್ಯ ಜೀವನದಲ್ಲೂ ನಿಷೇಧಿತವಾಗಿರುವಂತೆ ರಂಝಾನ್ ತಿಂಗಳಲ್ಲಿ ಪ್ರತ್ಯೇಕವಾಗಿ ಕಟ್ಟುನಿಟ್ಟಾಗಿ ವಿರೋಧಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೇಲೂರಿನಲ್ಲಿ ರಂಝಾನ್‌

ಸಾಮಾಜಿಕ ಹೋರಾಟಗಾರ ನೂರ್ ಅಹಮದ್ ಮಾತನಾಡಿ, “ಅಲ್ಲಾಹು ನಮಗೆ ಉಪವಾಸ ಪ್ರಾರ್ಥನೆ ಮತ್ತು ಸತ್ಕರ್ಮಗಳನ್ನು ಸ್ವೀಕರಿಸಲಿ ಉತ್ತಮ ಆರೋಗ್ಯದೊಂದಿಗೆ ಇನ್ನಷ್ಟು ರಂಝಾನ್ ತಿಂಗಳನ್ನು ಸ್ವಾಗತಿಸಲು ನಮ್ಮನ್ನು ಅನುಗ್ರಹಿಸಲಿ. ಪವಿತ್ರ ರಂಝಾನ್ ಹಬ್ಬವು ಕೇವಲ ಹೊಸಬಟ್ಟೆ ಸಂಭ್ರಮಾಚರಣೆಗೆ ಸೀಮಿತವಾಗದೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಆದೇಶದಂತೆ ಬಡವರ ಪಾಲಿನ ಜಕಾತ್ ನೀಡುವುದರ ಜತೆಗೆ ನಿರ್ಗತಿಕ, ಅನಾಥ ಮಕ್ಕಳೊಂದಿಗೆ ಪ್ರೀತಿ ವಿಶ್ವಾಸದಿಂದ ಹಬ್ಬ ಆಚರಿಸಬೇಕು. ನಮ್ಮಸುತ್ತಮುತ್ತ ಇರುವ ಅನಾಥ ಮಕ್ಕಳಿಗೆ ಸಾಂತ್ವನವಾಗಬೇಕು. ಅನಾಥ ಮಕ್ಕಳ ಆಶಾಕಿರಣವಾಗಿ ಅವರ ಹೃದಯ ದಣಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು.‌

ಈ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ರೇವಣ್ಣ, ಸಬ್ ಇನ್‌ಸ್ಪೆಕ್ಟರ್ ಎಸ್ ಜೆ ಪಾಟೀಲ್, ಸಿಬ್ಬಂದಿಗಳಾದ ದೇವರಾಜ್ ಚೇತನ್, ನವೀನ್ ದೇವೇಂದ್ರ, ಕುಮಾರ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...