ಬೇಲೂರು | 20 ಸೀಟುಗಳಿಂದ ರಾಜ್ಯದ ಲೂಟಿಯಲ್ಲಿ ಪಾಲು ಬಯಸುತ್ತಿದೆ ಜೆಡಿಎಸ್‌: ಮೋದಿ

Date:

ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕರ್ನಾಟಕ್ಕೆ ಬಂದಿದ್ದೇನೆ. ಹಲವು ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ನನ್ನ ಕರ್ನಾಟಕ ಪ್ರವಾಸದ ಮೂಲಕ ಕಂಡುಕೊಂಡಿರುವ ವಿಚಾರವೆಂದರೆ, ಈ ಬಾರಿಯೂ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “ಮೊದಲಿಗೆ, ಕರ್ನಾಟಕದ ಮಠ ಪರಂಪರೆ ಮತ್ತು ಇಲ್ಲಿನ ಸಂತ ಶ್ರೇಷ್ಠರಿಗೆ ಗೌರವ ನಮನ ಸಲ್ಲಿಸುತ್ತೇನೆ. ಆದಿಚುಂಚನಗಿರಿ ಮಠಕ್ಕೂ ಗೌರವ ನಮನಗಳು ಹಾಗೂ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಗೌರವದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ” ಎಂದರು.

“ಕೆಲವು ದಶಕಗಳ ಕಾಲದ ಅನೈತಿಕ ಘಟ ಬಂಧನ, ಅಸ್ಥಿರ ಸರ್ಕಾರಗಳ ಆಡಳಿತ ಕೊನೆಗೊಳಿಸಬೇಕೆಂದು ಈ ಬಾರಿ ಕರ್ನಾಟಕದ ಜನತೆ ನಿಶ್ಚಯಿಸಿದ್ದಾರೆ. ದೇಶದ ಯಾವೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿದೆ  ಅಲ್ಲಿನ ಕಾಂಗ್ರೆಸ್‌ ನಾಯಕರ ನಡುವಿನ ಒಳಜಗಳ ಯಾವಾಗಲೂ ಸುದ್ದಿಯಲ್ಲಿದೆ. ಇದರಿಂದ ರಾಜಸ್ಥಾನ ಮತ್ತು ಛತ್ತೀಸ್‌ಘಡ್‌ ರಾಜ್ಯಗಳ ಜನತೆ ಸಂಪೂರ್ಣ ಭ್ರಮನಿರಸವಾಗಿದ್ದು, ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಆ ರಾಜ್ಯಗಳಲ್ಲಿ ಕಾಂಗ್ರೆಸ್‌ ನೀಡಿದ ಎಲ್ಲ ಗ್ಯಾರಂಟಿಗಳು ಸುಳ್ಳಿನ ಕಂತೆಗಳಾಗಿವೆ” ಎಂದು ನರೇಂದ್ರ ಮೋದಿ ಹಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ನಲ್ಲಿ ಆಂತರಿಕ ಗುದ್ದಾಟ ಪರಸ್ಪರ ಹೋರಾಟಗಳು ಎಂದಿಗೂ ಇದ್ದದ್ದೇ. ಆದರೆ, ಜೆಡಿಎಸ್‌ ಕೂಡ ಅಧಿಕಾರದ ಕನಸು ಕಾಣುತ್ತಿದೆ. ರಾಜ್ಯದಲ್ಲಿ 15ರಿಂದ 20ಸೀಟುಗಳನ್ನು ಪಡೆದುಕೊಂಡರೆ ಸಾಕು ರಾಜ್ಯದ ಲೂಟಿಯಲ್ಲಿ ಪಾಲು ಪಡೆಯಬಹುದೆಂದು ತವಕಿಸುತ್ತಿದೆ” ಎಂದರು.

“ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಮೇಲ್ನೋಟಕ್ಕೆ ವಿರೋಧಿಗಳಂತೆ ಕಚ್ಚಾಡುತ್ತಾರೆ. ಆದರೆ, 2018ರ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ದೂರುತ್ತಾ, ತೆಗಳುತ್ತಾ ಆಪಾದನೆಗಳನ್ನು ಮಾಡುತ್ತಿದ್ದರು. ಆದರೆ, 2018ರ ಚುನಾವಣೆಗೆ ಮುನ್ನವೇ ಜೆಡಿಎಸ್‌ ಕಾಂಗ್ರೆಸ್‌ ನಾಯಕರು ಒಬ್ಬರಿಗೊಬ್ಬರು ಕೈ ಕೈ ಕುಲುಕಿಕೊಂಡು ಹೊಂದಾಣಿಕೆ ಮಾಡಿಕೊಂಡಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

“ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೇಲ್ನೋಟಕ್ಕೆ ಈ ರೀತಿ ಕಚ್ಚಾಡುತ್ತಾರೆ. ಆದರೆ, ಅವರಿಗೆ ಒಳ ಒಪ್ಪಂದಗಳಿರುತ್ತವೆ. ಸಂಸತ್ತಿನಲ್ಲಿಯೂ ಕೂಡ ಯಾವುದೇ ವಿಚಾರಗಳ ಕುರಿತು ಚರ್ಚಿಸುವ ಹೊರತಾಗಿ ಒಬ್ಬರಿಗೊಬ್ಬರು ಬೆಂಬಲಿಸಿಕೊಂಡು ಕೂರುತ್ತಾರೆ. ಹಾಗಾಗಿ ನೀವು ಜೆಡಿಎಸ್‌ಗೆ ನೀಡುವ ಮತಗಳು ಕಾಂಗ್ರೆಸ್‌ನ ಖಾತೆಗೆ ಹೋಗುತ್ತವೆ” ಎಂದರು. “ಕಾಂಗ್ರೆಸ್‌ಗೆ ಮತ ನೀಡುವುದಾದರೆ ಅದು ಕರ್ನಾಟಕದ ಅಭಿವೃದ್ಧಿಗೆ ಬ್ರೇಕ್‌ ಹಾಕಿದಂತೆ. ಕರ್ನಾಟಕದ ವಿಕಾಸಕ್ಕೆ ಹಿನ್ನಡೆ ಉಂಟಾದಂತೆ. ಕರ್ನಾಟಕದ ಜನತೆ ನಮ್ಮ ಭವಿಷ್ಯದ ಭಾಗ್ಯವನ್ನು ಕಾಂಗ್ರೆಸ್‌ ಕೈಗೆ ಇಡುವಂತೆಯೂ ಇಲ್ಲ. ಏಕೆಂದರೆ ಈ ಮೊದಲು ಕಾಂಗ್ರೆಸ್‌, ಜನತೆಯ ಹಕ್ಕಿನ ಪ್ರತಿಯೊಂದು ರೂಪಾಯಿಯಲ್ಲಿ 85 ಪೈಸೆ ಲೂಟಿಮಾಡುತ್ತಿತ್ತು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...