ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

Date:

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ ಹೆಸರಿನಿಂದ ಕರೆಸಿಕೊಳೊತ್ತಿರುವ ಪಟ್ಟಣ ಹಾಸನ ಜಿಲ್ಲೆಯ ಬೇಲೂರು. ಚನ್ನಕೇಶವ ದೇವಾಲಯದ ಸುತ್ತಮುತ್ತ ನಾನಾ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಿ, ಬದುಕು ದೂಡುತ್ತಿದ್ದಾರೆ. ಆದರೆ, ಎಂದಿನಂತೆ ಬುಧವಾರ ರಾತ್ರಿ ತಮ್ಮ ವ್ಯಾಪಾರ ಸಾಮಾನುಗಳನ್ನು ಜೋಡಿಸಿಟ್ಟು, ತಮ್ಮ ಗುಡಿಸಲಿಗೆ ತೆರಳಿದ್ದ ವ್ಯಾಪಾರಿಗಳು ಗುರುವಾರ ಬೆಳಗ್ಗೆ ಬಂದು ನೋಡುವುದರಲ್ಲಿ ತಾವು ಇಟ್ಟಿದ್ದ ಎಲ್ಲ ಸರಕು-ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ನಾಶವಾಗಿದ್ದವು. ಇದನ್ನು ಕಂಡ ವ್ಯಾಪಾರಿಗಳು ದಂಗಾಗಿದ್ದು, ದಿಕ್ಕೆಟ್ಟವರಾಗಿದ್ದಾರೆ. ಅವರ ಜೀವನ ಆಧಾರವಾಗಿದ್ದ ವ್ಯಾಪಾರವನ್ನು ಪುರಸಭೆ ಅಧಿಕಾರಿಗಳು ಕಸಿದುಕೊಂಡಿದ್ದಾರೆ.

ಬೇಲೂರು ಪುರಸಭಾ ಆರೋಗ್ಯ ಅಧಿಕಾರಿ ಲೋಹಿತ ಮತ್ತು ಮೇಸ್ತ್ರಿ ಹರೀಶ್ ನೇತೃತ್ವದ ಸಿಬ್ಬಂದಿಗಳು ಬೀದಿ ಬದಿ ವ್ಯಾಪಾರಿಗಳು ಹಾಕಿಕೊಂಡಿದ್ದ ಗುಡಾರಗಳನ್ನು ಕೊಯ್ಡು, ತಾಟುಗಳನ್ನು ಹರಿದು ಹಾಕಿದ್ದಾರೆ. ವ್ಯಾಪಾರ ಸಾಮಗ್ರಿಗಳನ್ನು ಒಡೆದು, ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವ್ಯಾಪಾರಿಗಳಲ್ಲಿ ಹೆಚ್ಚಿನವರು ತರಕಾರಿ-ಹಣ್ಣು ವ್ಯಾಪಾರಿಗಳು. ಅವರು ಸಾವಿರಾರು ರೂಪಾಯಿ ಬೆಕೆಯ ಬೆಳ್ಳುಳ್ಳಿ, ಈರುಳ್ಳಿ, ತರಕಾರಿ, ಹಣ್ಣುಗಳನ್ನು ಹಾಗೂ ವ್ಯಾಪಾರದ ಬಟ್ಟೆಗಳನ್ನು ತಮ್ಮ ಗುಡಾರದಲ್ಲಿ ಮುಚ್ಚಿಟ್ಟು ಹೋಗಿದ್ದರು. ಅವುಗಳನ್ನು ಅಧಿಕಾರಿಗಳು ಬೀದಿಗೆಸೆದು ಹಾಳು ಮಾಡಿದ್ದಾರೆ ಎಂದು ವ್ಯಾಪಾರಿಗಳು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಒಂದು ದಿನ ಮುಂಚಿತವಾಗಿ ಹೇಳಿದ್ದರೂ, ನಾವು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ಆದರೆ, ಹೇಳದೆ-ಕೇಳದೆ ನಮ್ಮ ಸಾಮಗ್ರಿಗಳನ್ನು ನಾಶ ಮಾಡಿ, ನಮ್ಮ ಬದುಕನ್ನು ಬೀದಿ ಪಾಲು ಮಾಡಿದ್ದಾರೆ” ಎಂದು ಅಧಿಕಾರಿಗಳಿಗೆ ವ್ಯಾಪಾರಿಗಳು ಶಾಪ ಹಾಕಿದ್ದಾರೆ.

“ಉಳ್ಳವರು ಹಣವಂತರು ಜೀವನೋಪಾಯಕ್ಕಾಗಿ ಸ್ವಂತ ಬಾಡಿಗೆ ಕಟ್ಟಡಗಳಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಜೀವನೋಪಾಯಕ್ಕೆ ಒಂದು ಹೊತ್ತಿನ ಗಂಜಿಗಾಗಿ ಬೀದಿ ಬದಿಗಳಲ್ಲಿ ದಿನದ ಸುಂಕ ಕೊಟ್ಟು ತರಕಾರಿ, ಹಣ್ಣು ಹಂಪಲು, ಪ್ಲಾಸ್ಟಿಕ್ ಸಾಮಾನು, ಪಾನಿಪುರಿ ಇನ್ನಿತರೇ ವ್ಯಾಪಾರವನ್ನು ಮಾಡಿ, ಜೀವನ ದೂಡುತ್ತಿದ್ದೇವೆ. ನಮ್ಮ ಬದುಕನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ. ನಮ್ಮ ಕಷ್ಟಗಳಿಗೆ ಜನಪ್ರತಿನಿಧಿಗಳೂ ಸ್ಪಂದಿಸುತ್ತಿಲ್ಲ” ಎಂದು ಈದಿನ.ಕಾಮ್‌ ಜೊತೆಗೆ ಮಾತನಾಡಿದ ಬೀದಿ ಬದಿ ವ್ಯಾಪಾರಿಗಳು ದೂರಿದ್ದಾರೆ.

ಪುರಸಭಾ ಆರೋಗ್ಯ ಅಧಿಕಾರಿ ಲೋಹಿತ ಮತ್ತು ಮೇಸ್ತ್ರಿ ಹರೀಶ್‌ ಎಂಬಾತನ ಸಿಬ್ಬಂದಿಗಳ ದಬ್ಬಾಳಿಕೆಗೆ ಕಡಿವಾಣ ಹಾಕದೆ, ಜನಪ್ರತಿನಿಧಿಗಳು ಕಂಡೂ ಕಾಣದಂತಿದ್ದಾರೆ. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತಕ್ಕಾಗಿ ನಮ್ಮ ಗುಡಿಸಲುಗಳ ಬಳಿ ಬಂದವರು, ಈಗ ನಮ್ಮ ಅಳಲು ಕೇಳಲು ಕಾಣೆಯಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬೇಲೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ಸಮಸ್ಯೆ ಇಲ್ಲ. ಅದರೂ, ನಮ್ಮ ಮೇಲೆ ಅಧಿಕಾರಿಗಳು ದರ್ಪ ತೋರುತ್ತಿದ್ದಾರೆ. ಆದರೆ, ಸರ್ಕಾರಿ ಉದ್ಯಾನವನ, ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಢ್ಯರ ವಿಚಾರದಲ್ಲಿ ಅಧಿಕಾರಿಗಳು ಮೂಕರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದಿದ್ದ ಶಾಸಕರು ಈಗ ನಮ್ಮ ಕರೆಯನ್ನೇ ಸ್ವೀಕರಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಸಮಸ್ಯೆಯನ್ನು ಪರಿಹರಿಸಬೇಕು. ಜಿಲ್ಲಾಧಿಕಾರಿಗಳು ಕೂಲಂಕುಶವಾಗಿ ತನಿಖೆ ನಡೆಸಿ, ಕಾನೂನು ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ವ್ಯಾಪಾರಿಗಳು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...