ಬೆಂಗಳೂರು | ಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟರೂ ಕೆಲಸ ಆಗಿಲ್ಲ: ಪೋಸ್ಟ್ ವೈರಲ್ 

Date:

ʼಆಸ್ತಿ ನೋಂದಣಿಗೆ 3 ಲಕ್ಷ ಲಂಚ ಕೊಟ್ಟು, ಮೂರು ತಿಂಗಳಿನಿಂದ ಅಲೆದಾಡಿದರೂ ಕೆಲಸ ಮಾತ್ರ ಆಗಿಲ್ಲʼ ಎನ್ನುವ ಬೆಂಗಳೂರಿನ ವ್ಯಕ್ತಿಯೊಬ್ಬರ ಎಕ್ಸ್‌ ಪೋಸ್ಟ್‌ ಒಂದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ಬೆಂಗಳೂರಿನ ನೆಟ್ಟಿಗ ಮಾಧವ ಎಂಬುವರು ಎಕ್ಸ್​ನಲ್ಲಿ, ʼನನ್ನ ತಂದೆ 14 ಸೆಂಟ್ಸ್​ ಆಸ್ತಿ ನೋಂದಣಿಗಾಗಿ ತಹಶೀಲ್ದಾರ್​ಗೆ 3 ಲಕ್ಷ ಮತ್ತು ಕಂಪ್ಯೂಟರ್ ಆಪರೇಟರ್​ಗೆ 10 ಸಾವಿರ ರೂ. ಲಂಚ ನೀಡಿದ್ದಾರೆ. 3 ತಿಂಗಳು ಕಳೆದರೂ ಕೂಡ ನೋಂದಣಿಯಾದ ದಾಖಲೆ ಪತ್ರ ಇನ್ನೂ ನಮ್ಮ ಕೈ ಸೇರಿಲ್ಲʼ ಎಂದು ಬರೆದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್​ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರೂ ಆಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿವೆ. ಇನ್ನು, ಸಾಮಾಜಿಕ ಮಾಧ್ಯಮವಾದ ಎಕ್ಸ್​ನಲ್ಲಿ ನೆಟ್ಟಿಗರು ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಅಕ್ಷರಶಃ ಸ್ಯತ್ಯ ಎನ್ನುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟ್​ಗೆ asdf ಎಂಬ ಹೆಸರಿನ ಖಾತೆದಾರರು, ಉತ್ತರ ಬೆಂಗಳೂರಿನಲ್ಲಿ 1500 ಚದರ ಅಡಿ ಭೂಮಿ ನೋಂದಣಿಗೆ ಸಬ್ ರಿಜಿಸ್ಟ್ರಾರ್‌ಗೆ 35000 ರೂ, ಆರ್‌ಟಿಸಿ ದಾಖಲೆಗಳಲ್ಲಿ ಹೆಸರು ಬದಲಾವಣೆ ಮಾಡಲು ತಹಶೀಲ್ದಾರ್‌ಗೆ 25000 ರೂ. ಮತ್ತು ಸರ್ವೇ ಅಧಿಕಾರಿಗಳಿಗೆ ಸರ್ವೆ ಮತ್ತು ಗಡಿ ಗುರುತಿಸಲು 8000 ರೂ. (ಅಧಿಕೃತ ಶುಲ್ಕಗಳು ಸೇರಿದಂತೆ) ನೀಡಿದ್ದೇನೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ಬಿಜೆಪಿ ಅಧಿಕಾರದಲ್ಲಿದ್ದಾಗ ಕಮಿಷನ್‌ ಸರ್ಕಾರ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು, ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್‌ನ್ನು ಲೂಟಿಕೋರ ಸರ್ಕಾರ ಎಂದು ಬಿಜೆಪಿ ಜರೆಯುತ್ತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಮಾಡಬೇಕಾದ ಜನಪರ ಕೆಲಸಗಳನ್ನು ಮೂಲೆಗುಂಪು ಮಾಡಿ ಆಡಳಿತ-ವಿರೋಧ ಪರಸ್ಪರ ಕಚ್ಚಾಡುತ್ತವೆಯಷ್ಟೆ. ಜನಪ್ರತಿನಿಧಿಗಳ ಪರಸ್ಪರ ಕೆಸರೆರಚಾಟದ ಪರಿಣಾಮ ಜನತಾ ಜನಾರ್ಧನನ ಸ್ಥಿತಿ ಹೇಳತೀರದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...