ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

Date:

ಬೆಂಗಳೂರು ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಸ್ತ ಅಧಿಕಾರಿ/ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ‌ ಪಾಷ‌ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು

ಬಳಿಕ ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತ ಮಾತನಾಡಿದ ಅವರು, “ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ ಸೇರಿದಂತೆ ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ” ಎಂದು ಹೇಳಿದರು.

“ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಅಕ್ರಂ ಪಾಷ

ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತಿರ್ಥ ಶಾಲೆಗೆ ಹೊಸ ಚೆಲುವು

ಕೇಂದ್ರ ನಗರ ಪಾಲಿಕೆಯಿಂದ ಮೆಯೋಹಾಲ್ ಕಟ್ಟಡದ ಆವರಣದಲ್ಲಿಯೂ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಆಯುಕ್ತ ರಾಜೇಂದ್ರ ಚೋಳನ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತರುಗಳಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ಸುಗುಣ, ಉಪ ಆಯುಕ್ತರು ಹಾಗೂ ಆರೋಗ್ಯಾಧಿಕಾರಿ ಶಿವಕುಮಾರ್, ಕಾರ್ಯಪಾಲಕ ಅಭಿಯಂತರರು, ಕಂದಾಯ ಅಧಿಕಾರಿಗಳು, ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...