ಬೆಂಗಳೂರು ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಸ್ತ ಅಧಿಕಾರಿ/ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು
ಬಳಿಕ ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತ ಮಾತನಾಡಿದ ಅವರು, “ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ ಸೇರಿದಂತೆ ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ” ಎಂದು ಹೇಳಿದರು.
“ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತಿರ್ಥ ಶಾಲೆಗೆ ಹೊಸ ಚೆಲುವು
ಕೇಂದ್ರ ನಗರ ಪಾಲಿಕೆಯಿಂದ ಮೆಯೋಹಾಲ್ ಕಟ್ಟಡದ ಆವರಣದಲ್ಲಿಯೂ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಆಯುಕ್ತ ರಾಜೇಂದ್ರ ಚೋಳನ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಂಟಿ ಆಯುಕ್ತರುಗಳಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ಸುಗುಣ, ಉಪ ಆಯುಕ್ತರು ಹಾಗೂ ಆರೋಗ್ಯಾಧಿಕಾರಿ ಶಿವಕುಮಾರ್, ಕಾರ್ಯಪಾಲಕ ಅಭಿಯಂತರರು, ಕಂದಾಯ ಅಧಿಕಾರಿಗಳು, ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.





