ಬೆಂಗಳೂರು : ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

Date:

ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು  ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು  ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವ ದುಃಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ನೂತನವಾಗಿ ನೇಮಕಗೊಂಡಿರುವ ಆಮ್ ಆದ್ಮಿ ಪಕ್ಷದ ನೂತನ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರದಿಂದ ಮುದ್ರಾಂಕ ಶುಲ್ಕ ಆಸ್ತಿ,  ದರ ಹೆಚ್ಚಳ, ವಾಹನಗಳ ರಿಜಿಸ್ಟ್ರೇಷನ್ ಶುಲ್ಕ, ನಂದಿನಿ ಹಾಲಿನ ಬೆಲೆ, ದೇಶಿಯ ಮದ್ಯದ ದರ ಹೆಚ್ಚಳ ,ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಎಲೆಕ್ಟ್ರಿಕ್ ವಾಹನಗಳ ಮೇಲೆ ಇದ್ದ ತೆರಿಗೆ ವಿನಾಯಿತಿ ರದ್ದು ,ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಶುಲ್ಕ ದುಬಾರಿ, ಕುಡಿಯುವ ನೀರಿನ ಬೆಲೆ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ದುಬಾರಿ ಆಸ್ತಿಗಳ ಬಿ ಖಾತೆ ಹೆಸರಿನಲ್ಲಿ ತೆರಿಗೆ ದರೋಡೆ, ಕೆಪಿಟಿಸಿಎಲ್ ಎಸ್ಕಾಂ ನೌಕರರ ಪಿಂಚಣಿ ಅವರೇ ನೇರವಾಗಿ ರಾಜ್ಯದ ನಾಗರಿಕರಗಳ ಮೇಲೆ ಹೊರೆ ,ಬಿಬಿಎಂಪಿ ವ್ಯಾಪ್ತಿಯಲ್ಲಿ ದುಪ್ಪಟ್ಟು ಆಸ್ತಿ ತೆರಿಗೆ, ಕೆಪಿಟಿಸಿಎಲ್ ನೂತನ ಮೀಟರ್ ಗಳ ಬೆಲೆ ಲಕ್ಷಾಂತರ ಏರಿಕೆ ,ರೈತರ ಪಂಪ್ಸೆಟ್ಗಳ ಮೇಲೆ ದುಬಾರಿ ವೆಚ್ಚ, ವಿದ್ಯುತ್ ದರ ಏರಿಕೆ ಹಾಗೂ ಮೆಟ್ರೋ ಬೆಲೆ 100 ಪರ್ಸೆಂಟ್  ಏರಿಕೆಯನ್ನು ಮಾಡಿದೆ ಎಂದು ಕಿಡಿಕಾರಿದರು.

aap2 1

ಇದೇ ರೀತಿ ಬಿಜೆಪಿಯ ಕೇಂದ್ರ ಸರ್ಕಾರವು ಸಹ  ಟೋಲ್, ಔಷಧ, ಕಾರು ,ವಿದೇಶಿ ಶಿಕ್ಷಣ, ವೀಸಾ ಶುಲ್ಕ, ಸಿ ಏನ್ ಜಿ ಮೇಲಿನ ತೆರಿಗೆ ಹೆಚ್ಚಳದಿಂದಾಗಿ ಜನಸಾಮಾನ್ಯನು ಬದುಕಲು ತತ್ತರಿಸುವಂತಹ ಪರಿಸ್ಥಿತಿಗೆ  ಕಳ್ಳಿದ್ದಾರೆ. ಇವುಗಳ ವಿರುದ್ಧ ರಾಜ್ಯದಾದ್ಯಂತ ಮನೆಮನೆಗಳಲ್ಲಿ ಪಕ್ಷದ ವತಿಯಿಂದ ಕಾರ್ಯಕರ್ತರುಗಳು ಬೃಹತ್ ಜಾಗೃತಿ ಅಭಿಯಾನವನ್ನು ಇದೇ ತಿಂಗಳ 5ನೇ  ತಾರೀಖಿನಿಂದ ಬೆಂಗಳೂರಿನಿಂದ ಆರಂಭಿಸಲಾಗುವುದು ಎಂದು ಸೀತಾರಾಮ ಗುಂಡಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
aap1

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ . ಸದಂ, ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಕುಮಾರ್, ಹರಿಹರನ್, ಶಶಿಧರ್ ಆರಾಧ್ಯ  ,ಅನಿಲ್ ನಾಚಪ್ಪ, ಅಯೂಬ್ ಖಾನ್ , ಇರ್ಷಾದ್ ಖಾನ್  ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...