ಬೆಂಗಳೂರು | ಕಳೆದ ದೀಪಾವಳಿಗಿಂತ ಈ ಬಾರಿ ವಾಯು ಗುಣಮಟ್ಟ ಶೇ.98ರಷ್ಟು ಉತ್ತಮ: ಕೆಎಸ್‌ಪಿಸಿಬಿ

Date:

ದೀಪಾವಳಿಯ ಎರಡನೇ ದಿನದಲ್ಲಿ ಬೆಂಗಳೂರು ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಕಳೆದ ದೀಪಾವಳಿಗಿಂತ ಶೇ.98ರಷ್ಟು ಉತ್ತಮವಾಗಿದ್ದು, ಸಾಮಾನ್ಯ ದಿನಕ್ಕಿಂತ ಶೇ.7ರಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶಬ್ದ ಮಾಲಿನ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ತಿಳಿಸಿದೆ.

ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆಯಲ್ಲಿರುವ ಮೇಲ್ವಿಚಾರಣಾ ಕೇಂದ್ರಗಳು ಕ್ರಮವಾಗಿ 104 ಮತ್ತು 109 ವಾಯು ಗುಣಮಟ್ಟ ಸೂಚ್ಯಂಕವನ್ನು ವರದಿ ಮಾಡಿದ್ದವು. ಕಳೆದ ವರ್ಷ ದೀಪಾವಳಿಯ ಮೊದಲ ದಿನದಂದು ಹೆಬ್ಬಾಳದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 263, ಹೊಂಬೇಗೌಡ ನಗರ 121, ಸಿಲ್ಕ್ ಬೋರ್ಡ್ ಜಂಕ್ಷನ್ 170, ಮೈಸೂರು ರಸ್ತೆ 122 ಮತ್ತು ಜಯನಗರ 136ಕ್ಕೆ ತಲುಪಿತ್ತು ಎಂದು ಮಾಹಿತಿ ಹೊರಹಾಕಿದೆ.

ದೀಪಾವಳಿ ಪೂರ್ವದ ವಾಯು ಗುಣಮಟ್ಟಕ್ಕೆ ಹೋಲಿಸಿದರೆ ಪೀಣ್ಯದಲ್ಲಿ ವಾಯು ಮಾಲಿನ್ಯವು ಶೇ.52ರಷ್ಟು ಹೆಚ್ಚಾಗಿದೆ. ಆದರೆ ಹೊಸಕೋಟೆ ಮತ್ತು ದಾಸರಹಳ್ಳಿಯಲ್ಲಿಯೂ ಹೆಚ್ಚಿನ ವಾಚನ ದಾಖಲಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ, ಮೈಸೂರು ರಸ್ತೆ, ಹೊಂಬೇಗೌಡ ನಗರ, ಜಯನಗರ, ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿರುವ ನಿಲ್ದಾಣಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಸುಧಾರಣೆ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನೇಕ ನಿವಾಸಿಗಳು ತಮ್ಮ ಊರುಗಳಲ್ಲಿ ದೀಪಾವಳಿ ಆಚರಿಸಲು ಬೆಂಗಳೂರಿನಿಂದ ಹೊರಗೆ ಪ್ರಯಾಣ ಬೆಳೆಸಿದ್ದರಿಂದ, ಸಂಚಾರ ದಟ್ಟಣೆ ಕಡಿಮೆಯಾಗಿ ಗಾಳಿಯ ಗುಣಮಟ್ಟ ಸುಧಾರಿಸಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

ಮಂಗಳವಾರ ರಾತ್ರಿ ಮತ್ತು ಬುಧವಾರವೂ ಜನರು ಪಟಾಕಿ ಸಿಡಿಸುವುದನ್ನು ಮುಂದುವರೆಸಿದ್ದರಿಂದ ವಾಯುಮಾಲಿನ್ಯದ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಕೆಎಸ್‌ಪಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100ಕ್ಕಿಂತ ಹೆಚ್ಚಿನ AQI ಮಟ್ಟಗಳು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಶ್ವಾಸಕೋಶ ಅಥವಾ ಹೃದಯ ಕಾಯಿಲೆ ಇರುವ ವ್ಯಕ್ತಿಗಳಲ್ಲಿ, ಮಕ್ಕಳು ಮತ್ತು ವೃದ್ಧರಲ್ಲಿ ಉಸಿರಾಟದ ತೊಂದರೆಯನ್ನು ಉಂಟುಮಾಡಬಹುದೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...