ಬೆಂಗಳೂರು | ಎಪಿಸಿಆರ್ ರಾಜ್ಯ ಕಚೇರಿ ಉದ್ಘಾಟನೆ; ನಿವೃತ್ತ ಹೆಚ್ಚುವರಿ ಡಿಜಿಪಿ ಸುಭಾಷ್ ಭರಣಿ ಚಾಲನೆ

Date:

ಮಾನವ ಹಕ್ಕುಗಳ ಕಾನೂನು ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತಿರುವ ಎಪಿಸಿಆರ್ (ಅಸೋಸಿಯೇಷನ್‌ ಫಾರ್‌ ಪ್ರೊಟೆಕ್ಷನ್‌ ಆಫ್‌ ಸಿವಿಲ್‌ ರೈಟ್ಸ್)ನ ಕರ್ನಾಟಕ ರಾಜ್ಯ ಶಾಖೆಯ ಹೊಸ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆಯಾಯಿತು. ಸೇವಾ ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ಸುಭಾಷ್ ಭರಣಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಡಾ. ಸುಭಾಷ್ ಭರಣಿ ತಮ್ಮ ಮುಖ್ಯ ಭಾಷಣದಲ್ಲಿ, “ಸಮಾಜದಲ್ಲಿ ಮಾನವೀಯತೆ ನಶಿಸಿ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಕರುಣೆ ಮತ್ತು ಒಗ್ಗಟ್ಟನ್ನು ಮರುಸ್ಥಾಪಿಸಲು ಸಾಮೂಹಿಕ ಕ್ರಿಯೆಯ ಅಗತ್ಯವಿದೆ. ಮೌನ ಮತ್ತು ನಿಷ್ಕ್ರಿಯತೆ ತುಂಬಾ ಅಪಾಯಕಾರಿ. ಮಾನವ ಹಕ್ಕುಗಳು ಮತ್ತು ಸಂವಿಧಾನದ ರಕ್ಷಣೆಗಾಗಿ ನಾವೆಲ್ಲ ಒಗ್ಗಟ್ಟಿನಿಂದ ಕಾರ್ಯ ಪರ್ವತರಾಗುವುದು ಕಾಲದ ತುರ್ತು ಅಗತ್ಯವಾಗಿದೆ” ಎಂದು ಎಚ್ಚರಿಸಿದರು.

ಎಪಿಸಿಆರ್‌ ರಾಜ್ಯಾಧ್ಯಕ್ಷ ಸುಧೀರ್ ಕುಮಾರ್ ಮುರೋಳಿ ಮಾತನಾಡಿ, “ಇಂದಿನ ಜಗತ್ತಿನಲ್ಲಿ ಸಾಂವಿಧಾನಿಕ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವಲ್ಲಿ ಎಪಿಸಿಆರ್‌ನ ಅಗತ್ಯವಿದೆ. ದಮನಿತರು ಮತ್ತು ಶೋಷಿತರ ಹಕ್ಕುಗಳ ಸಂರಕ್ಷಣೆಯ ಕೆಲಸಗಳಲ್ಲಿ ಕಾರ್ಯ ಪರ್ವತರಾಗಿ ಎಪಿಸಿಆರ್‌ನ ಚಟುವಟಿಕೆಗಳಲ್ಲಿ ಎಲ್ಲರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದು” ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 02 at 1.49.19 PM

ಇದನ್ನೂ ಓದಿ: ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

ಕಾರ್ಯಕ್ರಮದಲ್ಲಿ ಎಪಿಸಿಆರ್ ರಾಷ್ಟ್ರೀಯ ಉಪಾಧ್ಯಕ್ಷ ವಕೀಲ ಪಿ. ಉಸ್ಮಾನ್, ಹುಲಗಪ್ಪ ಕಟ್ಟಿ ಮನೆ (ಸ್ಪಂದನ ಸಂಸ್ಥೆ, ಮೈಸೂರು), ‌ನಿವೃತ್ತ ಡಿಸಿಎಫ್ ಎಂ.ಆರ್. ಸುರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಚಿದಾನಂದ, ವಕೀಲೆ ಅಖಿಲಾ, ಹೈಕೋರ್ಟ್‌ ವಕೀಲ ಪಿ. ಉಸ್ಮಾನ್, ಜೆರಾಲ್ಡ್ ಡಿಸೋಜಾ, ವಕೀಲ ಬಿ.ಟಿ. ವೆಂಕಟೇಶ್, ಮಾವಳ್ಳಿ ಶಂಕರ್, ಎ.ಜಿ. ಕೈಸರ್, ಮಲ್ಲಿಗೆ, ಮಾಜಿ ಕೆಎಸ್‌ ಅಧಿಕಾರಿ ಖಾಲಿದ್, ಹರ್ಷವರ್ಧನ್ ಉಮ್ರೆ, ಎಂ. ಕುನ್ಹಿ, ಹುಸೇನ್, ಶಾಜೀಹಾ, ಮೆಹದಿ ಕಲೀಂ, ವಕೀಲ ಸಯೀದ್ ಅಕ್ಮಲ್ ರಜ್ವಿ, ಶೇಖ್ ಶಫಿ, ವಕೀಲ ಮಾನ್ವಿ, ವಕೀಲೆ ಮೈತ್ರಿ ಸೇರಿದಂತೆ ನಗರದ ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರು, ಖ್ಯಾತ ವಕೀಲರು ಮತ್ತು ಇತರ ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...