ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ 6ನೇ ತರಗತಿ ವಿದ್ಯಾರ್ಥಿ ಹೈದರಾಬಾದ್‌ನಲ್ಲಿ ಪತ್ತೆ

Date:

ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದ 12 ವರ್ಷದ ವಿದ್ಯಾರ್ಥಿ ಮೂರು ದಿನಗಳ ಬಳಿಕ ಹೈದರಾಬಾದ್‌ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು, “ಜ.21ರ ಭಾನುವಾರದಂದು ಬೆಂಗಳೂರಿನಿಂದ ನಾಪತ್ತೆಯಾಗಿದ್ದ ದೀನ್ಸ್ ಅಕಾಡೆಮಿಯ 6ನೇ ತರಗತಿ ವಿದ್ಯಾರ್ಥಿ ಪರಿಣವ್(12 ವರ್ಷ) ಇಂದು ಬೆಳಗ್ಗೆ ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಆತನನ್ನು ಮನೆಗೆ ಕರೆದುಕೊಂಡು ಬರಲು ಹೈದರಾಬಾದ್‌ಗೆ ತೆರಳಲಿದ್ದಾರೆ” ಎಂದು ತಿಳಿಸಿದ್ದಾರೆ.

ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದ. ವೈಟ್‌ಫೀಲ್ಡ್‌ನ ಅಲೆನ್‌ ಟ್ಯೂಷನ್ ಸೆಂಟರ್‌ಗೆ ಮಗನನ್ನು ಕಳುಹಿಸಿ, ತಂದೆ ಮನೆಗೆ ಬಂದಿದ್ದರು. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಡೀನ್ಸ್ ಅಕಾಡೆಮಿಯ 6ನೇ ತರಗತಿ ವಿದ್ಯಾರ್ಥಿಯಾಗಿರುವ ಪರಿಣವ್, ಕೊನೆಯದಾಗಿ ಜ.21ರಂದು ಸಂಜೆ 04:15ರ ಸುಮಾರಿಗೆ ಮೆಜೆಸ್ಟಿಕ್‌ನಲ್ಲಿರುವ 19ಸಿ ಬಸ್‌ನಿಲ್ದಾಣದ ಫ್ಲ್ಯಾಟ್‌ಫಾರಂನಲ್ಲಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ತನ್ನ ಶಾಲೆಯ ಬ್ಯಾಗ್ ಹಾಗೂ ಹಾಕಿಕೊಂಡಿದ್ದ ಹಳದಿ ಬಣ್ಣದ ಟೀಶರ್ಟಿನೊಂದಿಗೆ ನಾಪತ್ತೆಯಾಗಿದ್ದನು.

ತಂದೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದ ವೈಟ್‌ಫೀಲ್ಡ್ ಠಾಣೆ ಪೊಲೀಸರು, ನಾಲ್ಕು ತಂಡ ರಚಿಸಿ ಬಾಲಕನ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದರೂ, ಎಲ್ಲೂ ಸಿಕ್ಕಿರಲಿಲ್ಲ.

ಆ ಬಳಿಕ ವೈಟ್‌ಫೀಲ್ಡ್‌ನ ಕೆಲವು ಸಾಮಾಜಿಕ ಕಾರ್ಯಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಬಾಲಕನ ವಿವರಗಳನ್ನು ಹಾಕಿ, ಕಂಡವರು ತಕ್ಷಣ ಮಾಹಿತಿ ನೀಡುವಂತೆ ವಿನಂತಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವಿನಂತಿಸಿದ ನಂತರ ಆತನಿಗಾಗಿ ತೀವ್ರ ಹುಡುಕಾಟ ನಡೆಸಲಾಯಿತಾದರೂ, ಎಲ್ಲೂ ಪತ್ತೆಯಾಗಿರಲಿಲ್ಲ. ಈ ನಡುವೆ ಮಾಧ್ಯಮಗಳಲ್ಲೂ ಸುದ್ದಿ ಪ್ರಕಟಿಸಲಾಗಿತ್ತು.

“ಇಂದು ಬೆಳಗ್ಗೆ ಕೆಲಸದ ನಿಮಿತ್ತ ಹೈದರಾಬಾದ್‌ಗೆ ತೆರಳಿದ್ದ ಬೆಂಗಳೂರಿನ ನಿವಾಸಿ ವಂದನಾ ಎಂಬುವವರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಕಾಯುತ್ತಿದ್ದಾಗ ಬಾಲಕ ಪರಿಣವ್ ಕಣ್ಣಿಗೆ ಬಿದ್ದಿದ್ದಾನೆ. ಸೋಷಿಯಲ್ ಮೀಡಿಯಾದ ಪೋಸ್ಟರ್‍‌ ಅನ್ನು ವಂದನಾ ಅವರು ನೋಡಿದ್ದರು. ಅನುಮಾನಗೊಂಡು ವಿಚಾರಿಸಿದಾಗ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹುಡುಗ ಈತನೇ ಎಂದು ಗೊತ್ತಾಗಿದೆ. ಆ ಬಳಿಕ ಕೂಡಲೇ ನಮಗೆ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತನನ್ನು ಕರೆದುಕೊಂಡು ಬರಲು ಹೈದರಾಬಾದ್‌ಗೆ ತಲುಪಿದ್ದೇವೆ” ಎಂದು ಬಾಲಕ ಪರಿಣವ್ ತಂದೆ ಇಂಜಿನಿಯರ್ ಸುಕೇಶ್ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

“ನನ್ನ ಮಗ ಕೊನೆಗೂ ಹೈದರಾಬಾದ್‌ನಲ್ಲಿ ಸಿಕ್ಕಿದ್ದಾನೆ. ಆತನನ್ನು ಹುಡುಕಲು ಸೋಷಿಯಲ್ ಮೀಡಿಯಾ ಮೂಲಕ ನೆರವಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಾಯಿ ನಿವೇದಿತಾ ತಿಳಿಸಿದ್ದಾರೆ.

ಟ್ಯೂಷನ್‌ ಸೆಂಟರ್‌ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿ ಮೆಜೆಸ್ಟಿಕ್‌ಗೆ ಬಂದಿದ್ದ. ಬೆಂಗಳೂರಿನಿಂದ ಮೊದಲು ಮೈಸೂರು ಕಡೆಗೆ ಹೋಗಿದ್ದ ಬಾಲಕ ಪರಿಣವ್, ಮೈಸೂರು ರೈಲು ನಿಲ್ದಾಣದಿಂದ ಚೆನ್ನೈ ರೈಲು ನಿಲ್ದಾಣಕ್ಕೆ ಹೋಗಿದ್ದಾನೆ, ಬಳಿಕ ಅಲ್ಲಿಂದ ರೈಲಿನ ಮೂಲಕ ಹೈದರಾಬಾದ್‌ಗೆ ತೆರಳಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...