ಮೊಬೈಲ್ ಕಳುವಾದಾಗ ಹೀಗೆ ಮಾಡಿ ಎಂದ ಬೆಂಗಳೂರು ನಗರ ಪೊಲೀಸ್‌

Date:

ನಮ್ಮ ಮೊಬೈಲ್ ಕಳುವಾದಾಗ ಅದರಲ್ಲಿರುವ ಫೋಟೋ, ದಾಖಲಾತಿಗಳು ಸೇರಿದಂತೆ ಇನ್ನಿತರ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ. ಇದನ್ನು ತಪ್ಪಿಸಲು ಬೆಂಗಳೂರು ನಗರ ಪೊಲೀಸ್‌ ಇಲಾಖೆ ಜನರಿಗೆ ಉಪಾಯವೊಂದು ತಿಳಿಸಿದೆ. ಅದೇನೆಂದರೆ, ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆಯ ಆ್ಯಪ್ ಸಹಾಯ ಮಾಡಲಿದೆ.

ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆ್ಯಪ್(KSP Application) ಕಳುವಾದ ಮೊಬೈಲ್ ಅನ್ನು ಬ್ಲಾಕ್ ಮಾಡಲು ಸಹಾಯ ಮಾಡಲಿದೆ.

ನಿಮ್ಮ ಮೊಬೈಲ್ ಕಳೆದುಹೋದಾಗ ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಕುಟುಂಬದವರ ಮೊಬೈಲ್ ಅಥವಾ ಸ್ನೇಹಿತರ ಮೊಬೈಲ್‌ನಲ್ಲಿ ಕೆಎಸ್‌ಪಿ ಅಪ್ಲಿಕೇಶನ್ ಅನ್ನು ಇನ್​ಸ್ಟಾಲ್ ಮಾಡಿಕ್ಕೊಳ್ಳಬೇಕು. ನಂತರ ಅದರಲ್ಲಿ ಈ ನಂಬರ್ ಅಥವಾ ಈ ಮೊಬೈಲ್ ಬ್ಲಾಕ್‌ ಮಾಡಿ ಎಂದು ದೂರು ದಾಖಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಇಲಾಖೆ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಎಸ್‌ಪಿ ಅಪ್ಲಿಕೇಶನ್‌ನಲ್ಲಿ ಯಾವ ರೀತಿ ದೂರು ದಾಖಲಿಸಬಹುದು ಎಂಬ ವಿಧಾನಗಳ ಮೂಲಕ ತಿಳಿಸಿದೆ.

  • ಮೊದಲಿಗೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಗೂಗಲ್‌ ಪ್ಲೇ ಸ್ಟೋರ್‌ನಿಂದ ಕೆಎಸ್‌ಪಿ ಅಪ್ಲಿಕೇಶನ್ (KSP Application) ಡೌನ್​ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಕೊಳ್ಳಬೇಕು.
  • ಮೊಬೈಲ್‌ ದೂರನ್ನು ಇ-ಲಾಸ್ಟ್‌ (E-Lost) ನಲ್ಲಿ ವರದಿ ಮಾಡಲು ಕೆಎಸ್‌ಪಿ ಅಪ್ಲಿಕೇಶನ್ ಅನ್ನು ಓಪನ್‌ ಮಾಡಿ, ಅಲ್ಲಿರುವ ಇ-ಲಾಸ್ಟ್‌(E-Lost) ವರದಿ ಆಪ್ಶನ್ (option) ಅನ್ನು ಆಯ್ಕೆ ಮಾಡಿಕೊಳ್ಳಿ.
  • ಈಗ E-Lost ವರದಿಯನ್ನು ನೋಂದಾಯಿಸಿ, ಆಪ್ಶನ್‌ ಅನ್ನು ಆಯ್ಕೆ ಮಾಡಿರಿ.
  • ನಂತರ ನಿಮ್ಮ ಹೆಸರು, ವಿಳಾಸ, ಜಿಲ್ಲೆ, ಮೊಬೈಲ್‌ ನಂಬರ್‌ ಹಾಗೂ ಸಾಧ್ಯವಾದರೆ ಇ-ಮೇಲ್‌ ಐಡಿ ನೋಂದಾಯಿಸಿರಿ. ನಂತರ ಮುಂದಿನ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ.
  • ನಂತರ ನಿಮ್ಮ ಮೊಬೈಲ್‌ನ ಬಿಲ್‌ ಇದ್ದರೆ ಅದನ್ನು ಅಪ್‌ಲೋಡ್‌ ಮಾಡಿ ನಂತರ select article option ಅನ್ನು ಆಯ್ಕೆ ಮಾಡಿ.
  • ಇದಾದ ಬಳಿಕ ಮೊಬೈಲ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ.
  • ನಂತರ ಮೊಬೈಲ್‌ ಮಾಹಿತಿಯನ್ನು ನೋಂದಾಯಿಸಿ. ಬಳಿಕ, ಆಡ್‌ (Add) ಆಪ್ಶನ್‌ ಅನ್ನು ಆಯ್ಕೆ ಮಾಡಿಕೊಳ್ಳಿರಿ
  • ಮೊಬೈಲ್‌ ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಮಾಹಿತಿಯನ್ನು ಹಾಗೂ ಕಳೆದು ಹೋದ ಬಗೆಯ ಬಗ್ಗೆ ಮಾಹಿತಿ ನೋಂದಾಯಿಸಿ ಸಬ್ಮಿಟ್ ಆಪ್ಶನ್ (submit option) ಆಯ್ಕೆ ಮಾಡಿ.
  • ಕೊನೆಯಲ್ಲಿ ರಶೀದಿ ಸಿಗಲಿದೆ. ಅದನ್ನು ಡೌನ್‌ ಲೋನ್‌ ಮಾಡಿ ಇಟ್ಟುಕೊಳ್ಳಿರಿ.

ಬೆಂಗಳೂರು ನಗರ ಪೊಲೀಸ್ ಇಲಾಖೆ ಮಾಡಿದ ಟ್ವೀಟ್‌ಗೆ ಹಲವು ಜನ ಪ್ರತಿಕ್ರಿಯೆ ನೀಡಿದ್ದು, “ನನ್ನ 2 ಫೋನ್‌ಗಳನ್ನು ಕಳೆದುಕೊಂಡಿದ್ದೇನೆ. ಕೆಎಸ್‌ಪಿ ಅಪ್ಲಿಕೇಶನ್‌ನಲ್ಲಿ ನಿಖರವಾದ ದಿನಾಂಕ, ಸಮಯ ಮತ್ತು ಬಿಲ್‌ನೊಂದಿಗೆ ನಾನು ವರದಿ ಮಾಡಿದ್ದೇನೆ. ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಆದರೆ, ನನಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಲಭ್ಯವಿಲ್ಲ” ಎಂದು ಎಕ್ಸ್‌ ಬಳಕೆದಾರ ಪ್ರವೀಣ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ

ಮತ್ತೋರ್ವ ಎಕ್ಸ್‌ ಬಳಕೆದಾರ ಅಸದ್‌ ಖಾನ್ ಎಂಬುವವರು, “ಕಳೆದ 2 ತಿಂಗಳ ಹಿಂದೆ ಮೈಸೂರು ಬಳಿ ನನ್ನ ಫೋನ್ ಕಳುವಾಗಿತ್ತು. ನಾನು ಕೆಎಸ್‌ಪಿ ಮತ್ತು ನಂತರ ಸಿಇಐಆರ್‌ನಲ್ಲಿ ದೂರು ಸಲ್ಲಿಸಿದ್ದೆ. ನನಗೆ ಮಂಡ್ಯ ಪೊಲೀಸರಿಂದ ಕರೆ ಬಂದಿತು. ಅವರು ನನಗೆ ನನ್ನ ಫೋನ್ ಅನ್ನು ಹುಡುಕಿ ಕೊಟ್ಟರು. ಪೊಲೀಸರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...