ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚಿ ʼಗುಂಡಿ ಮುಕ್ತ ರಸ್ತೆʼಗಳೆಂದು ಘೋಷಿಸಿ: ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

Date:

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿ ʼಗುಂಡಿ ಮುಕ್ತ ರಸ್ತೆʼಗಳೆಂದು ಘೋಷಿಸುವಂತೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಚಿಕ್ಕಪೇಟೆ ವಿಭಾಗದ ವ್ಯಾಪ್ತಿಯಲ್ಲಿನ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸುಮಾರು 25 ಕಿ.ಮೀ ವ್ಯಾಪ್ತಿ ದ್ವಿಚಕ್ರ(ಬೈಕ್) ವಾಹನದ ಮೂಲಕ ಸಂಚರಿಸಿ ರಸ್ತೆ ಗುಂಡಿಗಳು, ಕೈಗೊಂಡ ರಸ್ತೆ ದುರಸ್ತಿ ಕಾಮಗಾರಿ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು.

ಚಿಕ್ಕಪೇಟೆ ರಸ್ತೆ

ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆ ನೀಡಿದ್ದು, “ತುರ್ತಾಗಿ ಎಲ್ಲ ರಸ್ತೆ ಗುಂಡಿಗಳನ್ನು ಉತ್ತಮ ರೀತಿಯಲ್ಲಿ ಮುಚ್ಚಬೇಕು. ಜಂಕ್ಷನ್‌ಗಳ ಅಭಿವೃದ್ಧಿ, ವೃತ್ತಗಳ ಅಭಿವೃದ್ಧಿ ಮಾಡಬೇಕು. ಹೊಸೂರು ರಸ್ತೆ ಮೇಲ್ಮೈ ಡಾಂಬರೀಕರಣ(resurfacing)ವಾಗಬೇಕು. ರಸ್ತೆ ಬದಿ ತ್ಯಾಜ್ಯ ಬ್ಲಾಕ್ ಸ್ಪಾಟ್‌ಗಳ ತೆರವು ಹಾಗೂ ಬ್ಲಾಕ್ ಸ್ಪಾಟ್‌ಗಳಾಗದಂತೆ ತಡೆಯಬೇಕು. ಪಾದಚಾರಿ ಮಾರ್ಗಗಳನ್ನು ದುರಸ್ತಿಗೊಳಿಸಿ ಪಾದಚಾರಿಗಳ ಸಂಚಾರ ಸುಗಮಗೊಳಿಸಬೇಕು. ಜೆಸಿ ರಸ್ತೆಯಲ್ಲಿನ ನಗರ ಪಾಲಿಕೆ ಜಾಗದ ಸುತ್ತಲೂ ಕಾಂಪೌಂಡ್/ತಂತಿಬೇಲಿ ಹಾಕಬೇಕು. ಜತೆಗೆ ಸದರಿ ಜಾಗದ ಅಭಿವೃದ್ಧಿಗೆ ಡಿಪಿಆರ್ ತಯಾರಿಸಬೇಕು ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆಯುಕ್ತ ರಾಜೇಂದ್ರ ಚೋಳನ್‌ 1

ಸ್ಥಳ ಪರಿಶೀಲನೆ ನಡೆಸಿದ(ಸಂಚರಿಸಿದ) ರಸ್ತೆಗಳು

ಬುಲ್‌ ಟೆಂಪಲ್‌ ರೋಡ್‌, ವಾಣಿವಿಲಾಸ್‌ ರೋಡ್‌, ಶಂಕರ್‌ ಮಠ್‌ ರೋಡ್, ‌ಕೆ ಆರ್‌ ರಸ್ತೆ, ನ್ಯಾಷನಲ್‌ ಕಾಲೇಜ್‌ ಲೆಫ್ಟ್‌ ವಾಣಿವಿಲಾಸ್‌ ರಸೆ, ವೆಸ್ಟ್‌ ಗೇಟ್‌, ಆರ್‌ವಿ ರಸ್ತೆ, ಟೀಚರ್ಸ್‌ ಕಾಲೇಜ್‌ ಲೆಫ್ಟ್‌, ಕನಕನಪಾಳ್ಯ ರಸ್ತೆ, ಟಿ ಮರಿಗೌಡ ರಸ್ತೆ, ಹೊಸೂರು ರಸ್ತೆ, ಕೃಂಬಿಗಲ್‌ ರಸ್ತೆ ವೆಸ್ಟ್‌ ಗೇಟ್‌ ರೈಟ್‌, ಜೆಸಿ ರಸ್ತೆ, ಪೂರ್ಣಿಮಾ ಟಾಕೀಸ್‌ ರಸ್ತೆ, ಲಾಲ್‌ಬಾಗ್‌ ರಸ್ತೆಗಳಲ್ಲಿ ಸಂಚರಿಸಿದ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು.

ಈ ಸುದ್ದೆಇ ಓದಿದ್ದೀರಾ? ಭೀಮಾ ನದಿ ಅಬ್ಬರ | ಪ್ರವಾಹಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ; 6,664 ಜನ ಸಂತ್ರಸ್ತರ ರಕ್ಷಣೆ

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಮುಖ್ಯ ಅಭಿಯಂತ ವಿಜಯಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಎಇಇ, ಎಇ, ಜೆಇ ಅಧಿಕಾರಿಗಳು, ಮಾರ್ಷಲ್‌ಗಳು ಸೇರಿದಂತೆ ಸಂಬಂಧಪಟ್ಟವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...