ದಲಿತರ ಹಣ ದುರುಪಯೋಗ ಆರೋಪ: ಸಚಿವ ಶರಣಬಸಪ್ಪರನ್ನು ಸಂಪುಟದಿಂದ ಕೈಬಿಡಲು ದಲಿತ ಸೇನೆ ಆಗ್ರಹ

Date:

ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ದುರುಪಯೋಗ ಮಾಡಿಕೊಂಡಿದ್ದಾರೆ. ಸರಕಾರ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಂಪುಟದಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಅಧ್ಯಕ್ಷ ಹನುಮಂತ ಜಿ.ಯಳಸಂಗಿ ಆಗ್ರಹಿಸಿದ್ದಾರೆ.

ಸೋಮವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಸರಕಾರಿ ಇಲಾಖೆಗಳ ಕಚೇರಿಗಳು ಮತ್ತು ಶಾಲೆಗಳು ಖಾಸಗಿ ಜಾಗಗಳಲ್ಲಿವೆ. ಶರಣಬಸಪ್ಪ ಮತ್ತು ಕುಟುಂಬದವರು ಸರಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅದೇ ಜಾಗಗಳಲ್ಲಿ ಸರಕಾರದ ಇಲಾಖೆಗಳಿಗೆ ಲಕ್ಷಾಂತರ ರೂಪಾಯಿಗೆ ಬಾಡಿಗೆ ನೀಡಿ ಅಕ್ರಮ ಎಸಗುತ್ತಿದ್ದಾರೆ ಎಂದು ಆರೋಪಿಸಿದರು.

ಬಡವರಿಗಾಗಿ ಮೀಸಲಿಟ್ಟ ಎರಡು ಎಕರೆ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿದ್ದಲ್ಲದೆ, ಸದರಿ ಜಮೀನಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ತಾವೇ ಮಾಲಕರಂತೆ ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು, ಸಚಿವರನ್ನು ಜನರು ಪ್ರಶ್ನೆ ಮಾಡಲಾಗದಂತ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ. ಸಣ್ಣ ಮತ್ತು ಮಧ್ಯಮ ವರ್ಗಗಳ ಸಮಗ್ರ ಅಭಿವೃದ್ಧಿ ಯೋಜನೆಯ ಸರ್ವೆ ನಂ.826 ರಲ್ಲಿ 1 ಎಕರೆ 32 ಗುಂಟೆ ಜಮೀನನ್ನು ಕೂಡ ಪಡೆದಿದ್ದು, ಅಲ್ಲಿನ ಎಲ್ಲ ಗಾರ್ಡನ್ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹನುಮಂತ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 04 at 4.47.48 PM

ಕೊರಚ ಮತ್ತು ಕೊರಮರಿಗೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅಲ್ಲಿ ಕಟ್ಟಡ ಕಟ್ಟಲಾಗಿದೆ. ಮೂಡಾ ಹಗರಣಕ್ಕಿಂತ ದೊಡ್ಡ ಮಟ್ಟದಲ್ಲಿ ಇಲ್ಲಿ ಅಕ್ರಮ ನಡೆಯುತ್ತಿದ್ದು, ಸಚಿವರ ಕುಟುಂಬ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ‘ಪ್ಯಾಲೆಸ್ತೀನ್ ಬ್ರ್ಯಾಂಡ್’ ತಂಪು ಪೇಯಗಳು ದೈತ್ಯ ಕೋಲಾ ಕಂಪನಿಗಳಿಗೆ ಸೆಡ್ಡು ಹೊಡೆದಿವೆ!

ಯಾದಗಿರಿಯ ಯಾವೊಂದು ಸರಕಾರಿ ಸಂಸ್ಥೆಗಳಿಗೆ ಸ್ವಂತ ಜಾಗಗಳಿಲ್ಲ. ಯಾವುದಾದರೊಂದು ಸರಕಾರಿ ಜಾಗದಲ್ಲಿ ಬಡವರು ಗುಡಿಸಲು ಕಟ್ಟಿಕೊಂಡಾಗ ಅದನ್ನು ಎತ್ತಂಗಡಿ ಮಾಡಿಸಿ ಅವರು ಆಕ್ರಮಿಸಿಕೊಳ್ಳುತ್ತಾರೆ. ಎಸ್ಸಿಪಿ-ಟಿಎಸ್ಪಿ ಯೋಜನೆ ಹೆಸರಿನಲ್ಲಿ ಹಣವನ್ನು ಕಬಳಿಸಿರುವ ಶರಣಬಸಪ್ಪ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸರಕಾರ ಸಚಿವರನ್ನು ಮಂತ್ರಿಮಂಡಲದಿಂದ ಕೈಬಿಡಬೇಕು. ಮುನಿಸಿಪಾಲಿಟಿ ಆಸ್ತಿ ಕಬಳಿಸುವಲ್ಲಿ ಸಹಕರಿಸಿದ ಶಹಾಪೂರ ಪುರಸಭೆಯ ಹಿಂದಿನ ಎಲ್ಲ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಹನುಮಂತ ಯಳಸಂಗಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೇನೆಯ ಉಪಾಧ್ಯಕ್ಷರಾದ ಎಂ.ಎ.ಸಿಂದಗಿಕರ್, ಶಾಂತಪ್ಪ ಬಿ.ಸಾಲಿಮನಿ, ಝಾವ್ಹೇದ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...