ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ ಆರಂಭ

Date:

ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಎಸ್.ಬಿ.ಜಿ ವಿದ್ಯಾಲಯದ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಸ್.ಬಿ.ಜಿ ವಿದ್ಯಾಲಯದ ವತಿಯಿಂದ ಬೆಂಗಳೂರು ವಿಭಾಗ ಮಟ್ಟದ 2024-25ನೇ ಸಾಲಿನ 14 ರಿಂದ 17 ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾ ಕೂಟವು ಮಂಗಳವಾರ ಬೆಳಗ್ಗೆ ಪ್ರಾರಂಭಗೊಂಡಿತು.

ಕ್ರೀಡಾಕೂಟಕ್ಕೆ ತುಮಕೂರು, ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಿಂದ ಕ್ರೀಡಾ ವಿದ್ಯಾರ್ಥಿಗಳು ಆಗಮಿಸಿದ್ದರು. ಒಟ್ಟು 44 ತಂಡಗಳು ಸ್ಪರ್ಧಿಸಿದ್ದವು. 17 ನೇ ವಯಸ್ಸಿನ ಬಾಲಕಿಯರ ವಿಭಾಗದಲ್ಲಿ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್‌ನ ಆದಿಚುಂಚನಗಿರಿ ಮಠದ ಎಸ್.ಬಿ.ಜಿ ವಿದ್ಯಾಲಯದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ರಾಮನಗರ ಜಿಲ್ಲೆಯ ವಿದ್ಯಾರ್ಥಿಗಳ ತಂಡ (ದ್ವಿತೀಯ ಸ್ಥಾನ) ಪಡೆದರು. 14 ನೇ ವಯಸ್ಸಿನೊಳಗಿನ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರೆ, ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬಾಲಕಿಯರ ತಂಡ (ದ್ವಿತೀಯ ಸ್ಥಾನ) ಪಡೆಯಿತು. ಬುಧವಾರದಂದು 14 ನೇ ವಯಸ್ಸಿನೊಳಗಿನ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿಭಾಗದಲ್ಲಿ 3 ತಂಡಗಳು ಹಾಗು 17 ನೇ ವಯೋಮಾನದ ವಿಭಾಗದಲ್ಲಿ 3 ತಂಡಗಳು ಸೈಮಿಫೈನಲ್ಸ್ ಮತ್ತು ಫೈನಲ್ಸ್ ಪಂದ್ಯಗಳನ್ನು ಆಡಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರುವೇಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಮಾತನಾಡಿ ಓದು ಅಥವಾ ಕ್ರೀಡೆಗೆ ಯಾರು ಕಠಿಣ ಪರಿಶ್ರಮ ಹಾಕುತ್ತಾರೋ ಅವರು ಮಾತ್ರ ಒಳ್ಳೆಯ ಸ್ಥಾನಮಾನ ಪಡೆಯುತ್ತಾರೆ. ವಿದ್ಯಾರ್ಥಿಗಳು ಸೋಲು ಗೆಲುವಿನ ನಡುವೆ ಲೆಕ್ಕಾಚಾರ ಹಾಕದೇ ಕ್ರೀಡಾಸ್ಪೂರ್ತಿ ಮೆರೆಯಬೇಕೆಂದು ಕಿವಿಮಾತು ಹೇಳಿದರು.

ಈ ಸಂಧರ್ಭದಲ್ಲಿ ಆದಿಚುಂಚನಗಿರಿಯ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ.ಪರಮೇಶ್ವರಪ್ಪ, ಕರ್ನಾಟಕ ಹ್ಯಾಂಡ್ ಬಾಲ್ ಸಂಘದ ಉಪಾಧ್ಯಕ್ಷ ಪ್ರೊ.ಪುಟ್ಟರಂಗಪ್ಪ, ಖಜಾಂಚಿ ಪ್ರಕಾಶ್ ನರಗಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸಿದ್ದಪ್ಪ ನಾಗಪ್ಪ ವಾಲೀಕಾರ, ಗೋಪಾಲ ಕೃಷ್ಣ, ರಮೇಶ್ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...