ಬೆಂಗಳೂರು | ಮಾದಕ ವಸ್ತು ಕಳ್ಳಸಾಗಣೆ; ಮೂವರ ಬಂಧನ, 2.45 ಕೆಜಿ ಗಾಂಜಾ ವಶಕ್ಕೆ

Date:

ಮಾದಕ ವಸ್ತು ಮಾರಾಟ ಆರೋಪದಡಿ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿ, ಸುಮಾರು 2.45 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮಲ್ಲೇಶ್ವರಂ, ಆರ್.ಟಿ.ನಗರ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮಾದಕ ವಸ್ತು ಸೇವನೆ ಮಾಡುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ನಗರ ಉತ್ತರ ವಿಭಾಗದ ಒಟ್ಟು 13 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಇಂದು (ಆ.2) ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳ ತಂಡ ವಿಶೇಷ ಕಾರ್ಯಾಚರಣೆ ನಡೆಸಿ, ಎಲ್ಲಾ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಆವೇಳೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಒಟ್ಟು 180 ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿರುತ್ತದೆ. ಸದರಿ ವ್ಯಕ್ತಿಗಳ ಚಲನ ವಲನ, ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಕಲೆಹಾಕಿ, ಸದರಿಯವರುಗಳ ವಿರುದ್ಧ ಈ ಹಿಂದೆ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ವಾರೆಂಟ್, ಪ್ರೋಕ್ಷಮೇಷನ್ ಆಗಿರುವ ಬಗ್ಗೆ ಪರಿಶೀಲನೆ ಮಾಡಿ, ನ್ಯಾಯಾಲಯದ ವಿಚಾರಣೆ ವೇಳೆ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 02 at 3.05.10 PM

ಐವರು ಘೋಷಿತ ಅಪರಾಧಿ ವ್ಯಕ್ತಿಗಳನ್ನು ಮತ್ತು ಇಬ್ಬರು ವಾರೆಂಟ್ ಆರೋಪಿತರುಗಳನ್ನು ಪತ್ತೆ ಮಾಡಿ, ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೆ.ಪಿ ಆಕ್ಟ್ ಅಡಿಯಲ್ಲಿ ಹದಿನೆಂಟು ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಹಾಗೂ ಕೋಪ್ಪಾ ಕಾಯ್ದೆಯಡಿ 10 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಉದ್ಧಟತನ ತೋರಿದ ಜಿ. ಪಲ್ಲವಿಯವರ ಆಪ್ತ ಕಾರ್ಯದರ್ಶಿ ವರ್ಗ, ನಮ್ಮ ಹೋರಾಟಕ್ಕೆ ಜಯ: ಲೋಹಿತಾಕ್ಷ ಬಿ ಆರ್

ಈ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ IPS ಬಿ.ಎಸ್. ನೇಮಗೌಡ ಸೇರಿದಂತೆ 13 ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ ಪೆಕ್ಟರ್ ಗಳು, ಅಧಿಕಾರಿ ಮತ್ತು ಸಿಬ್ಬಂದಿಗಳು ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು ಮೂವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...