ಬೆಂಗಳೂರು | ಪುಸ್ತಕ ಹಿಡಿದು ಓದುವ ಅನುಭವ ಗೂಗಲ್‌ನಿಂದ ದೊರೆಯದು: ಗಿರೀಶ್‌ ಕಾಸರವಳ್ಳಿ

Date:

ಗೂಗಲ್‌ನಲ್ಲಿ ಎಲ್ಲದರ ಬಗ್ಗೆಯೂ ಮಾಹಿತಿ ಸಿಗಬಹುದು.. ಆದರೆ ಕೈಯಲ್ಲಿ ಪುಸ್ತಕ ಹಿಡಿದು ಓದುವುದರಲ್ಲಿ ಸಿಗುವ ಪರಿಪೂರ್ಣ ಅನುಭವ, ಮಾಹಿತಿ, ಜ್ಞಾನವನ್ನು ಗೂಗಲ್‌ನಿಂದ ನೀಡಲು ಸಾಧ್ಯವಿಲ್ಲ ಎಂದು ಖ್ಯಾತ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹೇಳಿದರು.

ವೀರಲೋಕ ಪ್ರಕಾಶನ ನಿನ್ನೆ (ಮಾ.23) ಹಮ್ಮಿಕೊಂಡಿದ್ದ ʼಸಾಹಿತ್ಯ ಯುಗಾದಿ-2025ʼ ಕಾರ್ಯಕ್ರಮದಲ್ಲಿ ವಿವಿಧ ಲೇಖಕರ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಪುಸ್ತಕೋದು ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ಹಾಗೂ ಬಹುಮುಖ್ಯ ಪಾತ್ರ ವಹಿಸುತ್ತದೆ. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಅಂಗೈಯಲ್ಲಿ ಪುಸ್ತಕ ಹಿಡಿದು ಓದುವ ಅನುಭವ ಬೇರಾವುದರಿಂದಲೂ ಸಿಗಲು ಸಾಧ್ಯವಿಲ್ಲ. ಜ್ಞಾನ ವಿಸ್ತರಣೆಗೆ ತಂತ್ರಜ್ಞಾನಕ್ಕಿಂತ ಹೆಚ್ಚಾಗಿ ಪುಸ್ತಕಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಬಸವರಾಜ ಸಬರದ ಮಾತನಾಡಿ, “ಪುಸ್ತಕೋದ್ಯಮದ ಬೆಳವಣಿಗೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಏಕಗವಾಕ್ಷಿ ಯೋಜನೆಯು ಪೂರಕವಾಗಿತ್ತು. ಆದರೆ, ಈ ಯೋಜನೆಯಡಿ 2021ರ ಪುಸ್ತಕಳ ಖರೀದಿ ಪ್ರಕ್ರಿಯೆಯೇ ನಡೆದಿಲ್ಲ. 2020ರಲ್ಲಿ ಖರೀದಿಸಿರುವ ಪುಸ್ತಕಗಳಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಪುಸ್ತಕಗಳ ಕುರಿತ ಸರ್ಕಾರದ ಈ ನಡೆ ಖಂಡನೀಯ. ಪ್ರಕಾಶಕರ ಉಳಿವಿಗೆ ಆಧಾರವಾಗಿದ್ದ ಏಕಗವಾಕ್ಷಿ ಯೋಜನೆಯನ್ನು ಸರ್ಕಾರ ಪುನಃ ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

ವೀರಲೋಕ ಪ್ರಕಾಶನದ ವೀರಕಪುತ್ರ ಶ್ರೀನಿವಾಸ ಮಾತನಾಡಿ, “ಪುಸ್ತಕ ಬಿಡುಗಡೆ ಕಾರ್ಯಕ್ರಮಗಳೆಂದರೆ ಹೆಚ್ಚಿನ ಜನ ಸೇರುವುದಿಲ್ಲ ಎನ್ನುವ ಭಾವನೆ ಇದೆ. ಸಾವಿರಾರು ಜನರನ್ನು ಸೇರಿಸುವುದರ ಜತೆಗೆ ನವ ಓದುಗರನ್ನೊಳಗೊಂಡ ಪುಸ್ತಕ ಬಿಡುಗಡೆ ಮಾಡಬೇಕೆನ್ನುವ ನಮ್ಮ ಕನಸು ಈ ಸಮಾರಂಭದ ಮೂಲಕ ಈಡೇರಿದೆ” ಎಂದರು.

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಕಾರ್ಯಕ್ರಮದಲ್ಲಿ ಅಜಿತ್‌ ಕಾರಂತ್‌, ರಾಧಾಕೃಷ್ಣ ಕಲ್ಚಾರ್‌ ಅವರ ತಂಡ, ಸಾಹಿತಿ ಬೈರಮಂಗಲ ರಾಮೇಗೌಡ, ಕಾದಂಬರಿಗಾರ್ತಿ ಸಹನಾ ವಿಜಯ್‌ ಕುಮಾರ್‌ ಸೇರಿ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...