ಬೆಂಗಳೂರು | ಮಹಿಳಾ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಆರೋಪಿ ಬಂಧನ

Date:

ಸಿಹಿ ತಿನಿಸು ಅಂಗಡಿಯೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ವಿಡಿಯೋ ಚಿತ್ರೀಕರಿಸುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

ಈ ಕುರಿತು ಸಂತ್ರಸ್ತ ಮಹಿಳೆಯೊಬ್ಬರು ಇನ್​ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 25 ರಂದು ರಾತ್ರಿ 8 ಗಂಟೆ ಸುಮಾರಿಗೆ ಮಹಿಳೆಯು ಅಂಗಡಿಯ ಮೊದಲ ಮಹಡಿಯ ಶೌಚಾಲಯಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಶೌಚಾಲಯದ ಒಳ ಪ್ರವೇಶಿಸಿದಾಗ, ಮುಂಭಾಗದ ಗೋಡೆ ಗಟ್ಟಿಯಾಗಿಲ್ಲದಿರುವುದು ಗಮನಕ್ಕೆ ಬಂತು. ಗೋಡೆಯ ಮೇಲ್ಭಾಗದಲ್ಲಿ ಫೈಬರ್‌ ಗ್ಲಾಸ್ ಫಲಕ ಮತ್ತು ಮುಖದ ಎತ್ತರಕ್ಕೆ ಮರದ ಹಲಗೆಗಳು ಇರುವುದನ್ನು ಗಮನಿಸಿದೆ. ಇದರಿಂದ ಅನುಮಾನಗೊಂಡು ಗೋಡೆಯಲ್ಲಿದ್ದ ಹಲಗೆಗಳನ್ನು ಪರಿಶೀಲಿಸಿದಾಗ ಇನ್ನೊಂದು ಬದಿಯಲ್ಲಿ ಫೋನ್ ಅಲ್ಲಾಡುತ್ತಿರುವುದು ಕಾಣಿಸಿತು. ಇದರಿಂದ, ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ದೃಢಪಡಿಸಿಕೊಂಡೆ” ಎಂಬುದಾಗಿ ಮಹಿಳೆ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಸಂತ್ರಸ್ತೆ ತನ್ನ ಸ್ನೇಹಿತೆಗೆ ವಿಚಾರ ತಿಳಿಸಿದ್ದು, ಅಂಗಡಿ ಸಿಬ್ಬಂದಿ ಬಳಿ ಪ್ರಶ್ನಿಸಿದ್ದಾರೆ. ʼಆಡಳಿತ ಮಂಡಳಿಯು ಆರಂಭದಲ್ಲಿ ಸಿಸಿಟಿವಿ ದೃಶ್ಯ ಪರಿಶೀಲಿಸಲು ಹಿಂಜರಿಯಿತಾದರೂ ನಂತರ ಪರಿಶೀಲಿಸಲು ಸಮ್ಮತಿಸಿತು. ಭದ್ರತಾ ಸಿಬ್ಬಂದಿಯೊಬ್ಬ ನಿರ್ಬಂಧಿತ ಪ್ರದೇಶ ಪ್ರವೇಶಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಹಿಂಬಾಗಿಲಿನಿಂದ ಮತ್ತೊಬ್ಬ ಉದ್ಯೋಗಿ ಹೊರಬರುತ್ತಿರುವುದು ಕಾಣಿಸಿತುʼ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಮಹಿಳೆಯ ಪ್ರಕಾರ, ರಾತ್ರಿ 9.10ರ ಸುಮಾರಿಗೆ ಪೊಲೀಸರು ಬಂದು ಆರೋಪಿಗಳನ್ನು ಬಂಧಿಸಿದರು. ಆರೋಪಿಯು ಆರಂಭದಲ್ಲಿ ಕೃತ್ಯ ಎಸಗಿದ್ದನ್ನು ಒಪ್ಪಿರಲಿಲ್ಲ. ತೀವ್ರ ವಿಚಾರಣೆಯ ನಂತರ ತಪ್ಪೊಪ್ಪಿಕೊಂಡಿದ್ದಾನೆ. ವೀಡಿಯೊಗಳನ್ನು ಡಿಲೀಟ್‌ ಮಾಡುವುದಾಗಿ ತಿಳಿಸಿದ್ದಾನೆ ಮತ್ತು ಕ್ಷಮೆ ಯಾಚಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರು | ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

ಮಹಿಳೆ ನೀಡಿದ್ದ ದೂರಿನ ಆಧಾರದ ಮೇಲೆ ಕೋರಮಂಗಲ ಠಾಣಾ ಪೊಲೀಸರು ಉತ್ತರ ಭಾರತ ಮೂಲದ ಅಮೋಧ್ ಎಂಬಾತನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ವಿಡಿಯೋ ರಿಟ್ರೀವ್​​ಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...