ಬೆಂಗಳೂರು | ಸಹೋದರಿ ಕೊಲೆ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

Date:

ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಶಿಕ್ಷೆಯನ್ನು ಮಾರ್ಪಡಿಸಿದೆ.

ಅಲ್ಲದೆ, 2018ರ ಜುಲೈ 26ರಂದು ಬಂಧನಕ್ಕೊಳಗಾದಾಗಿನಿಂದ 6 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ ಎಂಬ ಅಂಶವನ್ನು ಪರಿಗಣಿಸಿದ ಪೀಠ, ಅಣ್ಣಪ್ಪಗೆ ವಿಧಿಸಿದ್ದ ಶಿಕ್ಷೆಯನ್ನು ಆ ಅವಧಿಗೆ ನಿಗದಿಪಡಿಸಿ, 10,000 ರೂಗಳ ದಂಡ ಪಾವತಿಸಲು ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಸಲೂನ್ ನಡೆಸುತ್ತಿದ್ದ ಅಣ್ಣಪ್ಪ ಭಂಡಾರಿ 2018ರ ಜುಲೈ 22ರಂದು ತನ್ನ ಸಹೋದರಿ ವಿಜಯ ಭಂಡಾರಿ ಜೊತೆ ಜಗಳವಾಡಿದ್ದ. ಅಣ್ಣಪ್ಪ ಭಂಡಾರಿ ತನ್ನ ಸಹೋದರಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದು, ವಿಜಯಾ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ವಿಜಯಾರ ಎಡಭುಜದ ಬಳಿ, ಬೆನ್ನಿನ ಬಲಭಾಗದಲ್ಲಿ ಗಾಯಗಳಾಗಿದ್ದವು. ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಜುಲೈ 28ರಂದು ಆಕೆ ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಪ್ರತ್ಯಕ್ಷ ಸಾಕ್ಷ್ಯಾಧಾರಗಳಾದ ಮೃತ ವಿಜಯಾ ಸಹೋದರಿ ಮತ್ತು ಸೋದರಳಿಯ, ಸುಶೀಲಾ ಮತ್ತು ಕಮಲಾಕ್ಷಿ ಎಂಬುವರ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿ ಅಣ್ಣಪ್ಪ ಭಂಡಾರಿಗೆ ಕೊಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆ ಪ್ರಶ್ನಿಸಿ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಗಾಯವು ಕುತ್ತಿಗೆ ಭಾಗದ ರಕ್ತನಾಳಗಳಿಗೆ ಹಾನಿಯಾಗದಂತೆ ಮೇಲ್ನೋಟಕ್ಕೆ ಕಾಣುತ್ತದೆ. ಆರಂಭಿಕ ಹಂತದಲ್ಲಿ ಗಮನಿಸಲಾದ ನಾಡಿಮಿಡಿತ ಮತ್ತು ರಕ್ತದೊತ್ತಡದಲ್ಲಿ (ಬಿಪಿ) ಯಾವುದೇ ಹೃದಯ ಸಂಬಂಧಿತ ಸಮಸ್ಯೆ ಅಥವಾ ಕಾಯಿಲೆಯನ್ನು ನಿರೀಕ್ಷಿಸಲು ಅಸಹಜವಾಗಿ ಹೆಚ್ಚಾಗಿರಲಿಲ್ಲ. ಈ ದೃಷ್ಟಿಕೋನದಲ್ಲಿ ಮೃತ ವಿಜಯಾ ಭಂಡಾರಿಗೆ ತಮಗಾದ ಗಾಯಗಳಿಂದಾಗಿ ಹೃದಯಸ್ತಂಭನ ಸಂಭವಿಸಿದೆ ಎಂಬ ವೈದ್ಯರ ಅಭಿಪ್ರಾಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...