ಬೆಂಗಳೂರು | KSMCAಯಿಂದ ಸರ್ಕಾರಕ್ಕೆ ₹34.13 ಕೋಟಿಗಳ ವಿಶೇಷ ಲಾಭಾಂಶ ಹಸ್ತಾಂತರ

Date:

ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ (KSMCA) ಕಂಪನಿಯು ತನ್ನ ವಿಶೇಷ ಲಾಭಾಂಶದ ಮೊತ್ತ ₹34.13 ಕೋಟಿಗಳನ್ನು ಗುರುವಾರ ಸರ್ಕಾರಕ್ಕೆ ಹಸ್ತಾಂತರಿಸಿದೆ.

ಕಂಪನಿಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಮತ್ತು ಕೆಎಸ್‌ಎಂಸಿಎ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸತೀಶ್ ಕೃಷ್ಣ ಸೈಲ್ ಅವರು ವಿಧಾನಸೌಧದಲ್ಲಿ ವಿಶೇಷ ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆಯಿoದ ಕೈಬಿಟ್ಟು ಹೋಗಿರುವುದರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭದಾಯಕತೆ ಕಡಿಮೆಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎ ಸಂಸ್ಥೆಗೆ ವಹಿಸಿಕೊಡಬೇಕೆಂದು ಹಾಗೂ ಸಂಸ್ಥೆಯ ಆರ್ಥಿಕಾಭಿವೃದ್ಧಿಗೆ ಬೆಂಬಲಿಸಬೇಕೆ0ದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ:ಬೆಂಗಳೂರು | ಏಕಾಏಕಿ ಮನೆ ಡೆಮಾಲಿಷನ್‌; ಬೀದಿಗೆ ಬಿದ್ದ 30ಕ್ಕೂ ಹೆಚ್ಚು ಕುಟುಂಬಗಳು

ಈ ವೇಳೆ ಶಾಸಕ ಅಧ್ಯಕ್ಷ ಸತೀಶ ಸೈಲ್ ಮಾತನಾಡಿ, “ಸರ್ಕಾರವು ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರ್ಪಡೆ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕು” ಎಂದು ವಿನಂತಿಸಿದರು.‌

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಪಿ ಎಸ್ ನಂದೀಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...