ವಚನ ದರ್ಶನದ ಮೂಲಕ ವಚನ ಸಾಹಿತ್ಯ ವಿಕೃತಿಗೆ ಹುನ್ನಾರ : ಜಾಗೃತಿಗೆ ಮುಂದಾದ ಬಸವ ಅನುಯಾಯಿಗಳು

Date:

ಲಿಂಗಾಯತ ಧರ್ಮ ಗ್ರಂಥವಾದ ವಚನ ಸಾಹಿತ್ಯವನ್ನು ವಿಕೃತಗೊಳಿಸುವ ಹುನ್ನಾರ ಇಟ್ಟುಕೊಂಡು ಪ್ರಕಟಿಸಿರುವ ‘ವಚನ ದರ್ಶನ’ ಕೃತಿಯನ್ನು ವಿರೋಧಿಸುತ್ತೇವೆ. ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ. ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಬಸವ ತತ್ವಾಭಿಮಾನಿಗಳು ಒಕ್ಕೊರಲ ತೀರ್ಮಾನ ಕೈಗೊಂಡಿದ್ದಾರೆ.

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಂಗಳೂರಿನ ಅನುಭವ ಮಂಟಪದಲ್ಲಿ ಇತ್ತೀಚೆಗೆ ಬಸವ ತತ್ವಾಭಿಮಾನಿಗಳ ಸಭೆ ನಡೆಯಿತು.

ಈ ಸಭೆಯಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ 70ಕ್ಕೂ ಹೆಚ್ಚು ಬಸವಾನುಯಾಯಿ ಸಾಹಿತಿಗಳು, ಪ್ರಾಧ್ಯಾಪಕರು, ಚಿಂತಕರು, ರೈತರು ಹಾಗೂ ವಿದ್ವಾಂಸರು ಸೇರಿ ಲಿಂಗಾಯತ ಧರ್ಮದ ಮೇಲೆ ಮತ್ತು ಲಿಂಗಾಯತ ಮಠಗಳು ಮತ್ತು ಸ್ವಾಮೀಜಿಗಳ ಮೇಲೆ ನಡೆಯುತ್ತಿರುವ ಆಕ್ರಮಣ-ದಾಳಿ ಹಾಗೂ ಲಿಂಗಾಯತದ ಧರ್ಮಗ್ರಂಥವಾದ “ವಚನ ಸಾಹಿತ್ಯ’ವನ್ನು ವಿಕೃತಗೊಳಿಸುತ್ತಿರುವ ಶಕ್ತಿಗಳ ವಿರುದ್ಧ ಹೇಗೆ ಹೋರಾಟ ನಡೆಸಬೇಕು ಮತ್ತು ಈ ಹೋರಾಟವನ್ನು ರಾಜ್ಯದ ಎಲ್ಲ ಭಾಗಗಳಿಗೂ ಒಯ್ಯುವುದು ಹೇಗೆ ಎಂಬುದರ ಬಗ್ಗೆ ಸುದೀರ್ಘವಾದ ಚರ್ಚೆ-ಸಂವಾದ ಮತ್ತು ವಿಚಾರ-ವಿನಿಮಯ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಭೆ1

ವಚನ ಸಾಹಿತ್ಯವನ್ನು ಮತ್ತು ಲಿಂಗಾಯತ ಧರ್ಮವನ್ನು ಚಾತುರ್ವರ್ಣ ವ್ಯವಸ್ಥೆಯ ಭಾಗವನ್ನಾಗಿ ಮಾಡುವ ಪುರೋಹಿತಶಾಹಿ ಪ್ರಯತ್ನ ಇದಾಗಿದೆ. ಲಿಂಗಾಯತವು ಹಿಂದೂ ಧರ್ಮದ ಭಾಗವೆಂದು ಹೇಳುತ್ತಿರುವ ಕೆಲವು ಲಿಂಗಾಯತ ಸ್ವಾಮಿಗಳ ನಿಲುವು ಖಂಡನೀಯ. ಲಿಂಗಾಯತ ಧರ್ಮವು ಹಿಂದೂ ಧರ್ಮದ ಭಾಗವಲ್ಲ. ಲಿಂಗಾಯತ ಧರ್ಮ ಗ್ರಂಥವಾದ ವಚನ ಸಾಹಿತ್ಯವನ್ನು ವಿಕೃತಗೊಳಿಸುವ ಪುರೋಹಿತಶಾಹಿಯ ಪ್ರಯತ್ನಗಳನ್ನು ಹಾಗೂ ಇಂತಹ ಕೃತಿಗಳ ಪ್ರಕಟಣೆ ನಿಲ್ಲಿಸಬೇಕು ಎಂದು ಸಭೆ ಆಗ್ರಹಿಸಿದೆ.

ಲಿಂಗಾಯತ ಧರ್ಮಕ್ಕೆ ವಿರುದ್ಧವಾದ ಗುಡಿ ಸಂಸ್ಕೃತಿ, ಕರ್ಮ ಸಿದ್ಧಾಂತ, ಮರ ಸುತ್ತುವುದು, ನೀರಲ್ಲಿ ಮುಳುಗುವುದು, ದಾನ-ದಕ್ಷಿಣೆ, ಮಹಿಳೆಯರನ್ನು ಕೀಳಾಗಿ ಕಾಣುವುದು, ಸೂತಕ, ಹೋಮ-ಹವನ ಆಚರಿಸುವುದು ಮುಂತಾದ ಗೊಡ್ಡು ಆಚರಣೆಗಳಿಂದ, ಕಂದಾಚಾರಗಳಿಂದ ಲಿಂಗಾಯತರು ಮತ್ತು ಲಿಂಗಾಯತ ಮಠಗಳು-ಸ್ವಾಮಿಗಳು ದೂರವಿರಬೇಕು. ಲಿಂಗಾಯತ ಪ್ರಣಾಳಿಕೆಗೆ ಮತ್ತು ಬಸವ ಸಂವಿಧಾನಕ್ಕೆ ಅನುಸಾರವಾಗಿ ಲಿಂಗಾಯತರು ನಡೆದುಕೊಳ್ಳಬೇಕೆಂದು ಸಭೆಯು ಕರೆ ನೀಡಿದೆ.

ಬಸವ

ಲಿಂಗಾಯತ ಸಮಾಜವನ್ನು, ಸಂಘಟನೆಯನ್ನು ಗಟ್ಟಿಗೊಳಿಸಲು ಮತ್ತು ಅದರ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಲು ಹಾಗೂ ಬಸವಾನುಯಾಯಿಗಳನ್ನು ಜಾಗೃತಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಅಲ್ಲದೇ, ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಸಭೆಯಲ್ಲಿ ಖಂಡಿಸಲಾಯಿತಲ್ಲದೇ, ಅವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ನಿರ್ಣಯ ತೆಗೆದುಕೊಳ್ಳಲಾಯಿತು.

ಈ ಸಭೆಯಲ್ಲಿ ಬೇಲಿಮಠ ಸ್ವಾಮೀಜಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್ ಎನ್ ಮುಕುಂದರಾಜ್, ಹಿರಿಯ ವಚನ ಸಾಹಿತ್ಯ ವಿದ್ವಾಂಸ ಗೊ.ರೂ. ಚನ್ನಬಸಪ್ಪ, ಮಾಜಿ ಸಂಸದ ಎಲ್ ಹನುಮಂತಯ್ಯ, ಶರಣ ಅರವಿಂದ ಜತ್ತಿ, ಶ್ರೀಮತಿ ಲೀಲಾ ಸಂಪಿಗೆ, ಆಶಾದೇವಿ, ಅಗ್ರಹಾರ ಕೃಷ್ಣಮೂರ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಟಿ.ಆರ್. ಚಂದ್ರಶೇಖರಯ್ಯ, ಮಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಎಚ್.ಎಂ. ಸೋಮಶೇಖರಪ್ಪ, ಬಸವ ತತ್ವದ ಮುಖಂಡರಾದ, ಸಂಯೋಜಕರಾದ ಎಚ್ ಸಿ ಉಮೇಶ್ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...