ಬೆಂಗಳೂರು | ಕೆಆರ್ ಪುರಂನ ʼಮಸ್ಜಿದ್ ಎ ನೂರ್‌ʼ ನಲ್ಲಿ ಮಸೀದಿ ದರ್ಶನ ಕಾರ್ಯಕ್ರಮ

Date:

ಮಸೀದಿಗಳ ಕುರಿತಂತೆ ಜನಸಾಮಾನ್ಯರಿಗೆ ಇರುವ ಕುತೂಹಲವನ್ನು ತಣಿಸಲು ಮಸೀದಿ ದರ್ಶನ ಕಾರ್ಯಕ್ರಮವನ್ನು ನಗರದ ಕೆಆರ್ ಪುರಂ ಮೆಟ್ರೋ ರೈಲು ನಿಲ್ದಾಣದ ಬಳಿಯಿರುವ ಮಸ್ಜಿದ್ ಎ ನೂರ್ ಅಲ್ಲಿ ಆಯೋಜಿಸಲಾಗಿತ್ತು.

ಸಾರ್ವಜನಿಕರಲ್ಲಿ ಮಸೀದಿ, ಮುಸ್ಲಿಮರ ಆರಾಧನೆಗಳು, ಕಾರ್ಯ ಚಟುವಟಿಕೆಗಳು ಹಾಗೂ ಮಸ್ಜಿದ್ ಬಗ್ಗೆ ಇರುವ ತಪ್ಪು ಕಲ್ಪನೆಗಳು, ಪೂರ್ವಾಗ್ರಹಗಳನ್ನು ನಿವಾರಿಸಿ ಪರಸ್ಪರ ಸೌಹಾರ್ದ, ನಂಬಿಕೆ/ವಿಶ್ವಾಸಗಳನ್ನು ಮೂಡಿಸುವಂತಹ ಒಂದು ಅಪರೂಪದ ಕ್ಷಣಗಳಿಗೆ ಮಸೀದಿ ದರ್ಶನ ಕಾರ್ಯಕ್ರಮವು ಸಾಕ್ಷಿಯಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಮಸೀದಿ, ನಮಾಜ್ ನ ಕ್ರಮ, ಸಾಮೂಹಿಕ ನಮಾಜ್, ನಮಾಜ್ ಮುಂಚಿತವಾಗಿ ನಿರ್ವಹಿಸುವ ಅಂಗಸ್ನಾನ (ವುಜೂ) ಮಿಂಬರ್ (ಭಾಷಣ ಪೀಠ), ಮೆಹ್ರಾಬ್ (ನಮಾಜ್ ಗೆ ನೇತೃತ್ವ ವಹಿಸುವ ಸ್ಥಳ, ಆಜಾನ್ (ನಮಾಜಗಾಗಿ ಕರೆ), ಮಸೀದಿಯಲ್ಲಿ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳು ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಸ್ಪರರನ್ನು ಅರಿಯುವ, ಹೃದಯಗಳನ್ನು ‘ಸಮುದಾಯಗಳನ್ನು’ ಬೆಸೆಯುವ ಇಂತಹ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ, ಈ ಮೂಲಕ ಕೋಮು ದ್ವೇಷ, ಅಪನಂಬಿಕೆಗಳಿಗೆ ಕಡಿವಾಣ ಹಾಕಿ, ಪರಸ್ಪರ ಬೆರೆಯುವ/ಅರಿಯುವ ಮೂಲಕ ಸಮಾಜ ಮತ್ತು ದೇಶವನ್ನು ಕಟ್ಟುವ ಕೆಲಸವನ್ನು ಈ ಮೂಲಕ ನಡೆಸಲಾಗುತ್ತಿದೆ‌.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಗವಾಯಿ ಬೌದ್ಧತತ್ವವೂ ಬಿಜೆಪಿಗರ ಮನುವಾದವೂ

ಮಸೀದ್ ಎ ನೂರ್ ಆಡಳಿತದ ಸಮೀತಿಯ ಅಧ್ಯಕ್ಷ ದಾವೂದ್, ಪದಾಧಿಕಾರಿಗಳು, ಜಮಾಅತೆ ಇಸ್ಲಾಮಿ ಹಿಂದ್ ಬೆಂಗಳೂರು ನಗರ ಸಂಚಾಲಕಾದ ಶೇಖ್ ಹಾರೂನ್ ಸಪ್ದರ್, ರಾಜ್ಯ ಕಾರ್ಯದರ್ಶಿ ಮೌಲಾನಾ ಲಬೀದ್ ಶಾಫಿ, ಹೀರಾ ಪೌಂಡೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಶಮೀರ್, ಹಂಜಾ ಕುಂಜ್, ಜಮಾಅತ್ ಸದಸ್ಯರಾದ ಮಸೂದ್ ಶರೀಫ್ ಉಪಸ್ಥಿತರಿದ್ದರು.

ಗೈಡ್ ಆಗಿ ಮೊಹಮ್ಮದ್ ನವಾಜ್, ರಂಶೀದ್, ಮೊಹಮ್ಮದ್ ಇಸಾಕ್, ಸಯ್ಯದ್ ಮುರಾದ್, ಮಹಮ್ಮದ್ ಪೀರ್ ಲಟಗೇರಿ ರವರು ಕನ್ನಡ, ಇಂಗ್ಲಿಷ್ ಮತ್ತು ಇತರೆ ಭಾಷೆಗಳಲ್ಲಿ ಮಸೀದಿ ಕುರಿತು ವಿವರಣೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...