ಬೆಂಗಳೂರು | ಇಸ್ರೇಲ್ ವಿರುದ್ಧ ಪ್ರತಿಭಟನೆ; ಸಂಘಟಕರನ್ನು ವಶಕ್ಕೆ ಪಡೆದ ಪೊಲೀಸರು

Date:

ಗಾಜಾ, ಲೆಬನಾನ್, ಇರಾನ್ ಮೇಲೆ ದಾಳಿ ನಡೆಸುತ್ತಿರುವ, ವಿಶ್ವ ಶಾಂತಿಯನ್ನು ಕದಡುತ್ತಿರುವ ಇಸ್ರೇಲ್ ಜೊತೆ ಭಾರತ ವ್ಯಾಪಾರ ಸಂಬಂಧ ಮುಂದುವರೆಸಬಾರದು ಎಂದು ಆಗ್ರಹಿಸಿ ಬೆಂಗಳೂರಿನ ಗುಟ್ಟಹಳ್ಳಿ ಬಸ್ ನಿಲ್ದಾಣದ ಬಳಿ ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಡ್ರೋನ್‌ಗಳು, ಕೃಷಿ ತಂತ್ರಜ್ಞಾನ ಮತ್ತು ಶುದ್ಧ ಇಂಧನದಲ್ಲಿ ಭಾರತ-ಇಸ್ರೇಲ್‌ ಸಹಕಾರದ ಕುರಿತಾದ ಚರ್ಚೆಗಳಾಗುತ್ತಿವೆ. ಆ ಚರ್ಚೆಗಳನ್ನು ಖಂಡಿಸಿ, ಪಿಯುಸಿಎಲ್, ನಾವೆದ್ದು ನಿಲ್ಲದಿದ್ದರೇ, ಎಐಸಿಸಿಟಿಯು, ಎಐಎಸ್ಎ ಮತ್ತು ಎಸ್ಎಫ್‌ಪಿಡಿ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಪ್ರತಿಭಟನೆ ವೇಳೆ, ‘ಪ್ಯಾಲೇಸ್ತೀನ್ ಜತೆಗೆ ಭಾರತ ನಿಂತಿದೆ’, ‘ಗಾಜಾ ಜತೆಗೆ ಭಾರತ ನಿಂತಿದೆ’ ಎಂಬ ಪೋಸ್ಟರ್‌ಗಳನ್ನ ಹಿಡಿದು ಇಸ್ರೇಲ್ ಜತೆಗೆ ಭಾರತ ಯಾವುದೇ ಕಾರಣಕ್ಕೂ ವ್ಯಾಪಾರ ಸಂಬಂಧವನ್ನ ಹೊಂದಬಾರದು. ಒಂದು ವೇಳೆ ಹಾಗೇ ಮಾಡಿದರೇ, ಈಗಾಗಲೇ ಗಾಜಾದಲ್ಲಿ ಕ್ರೂರತ್ವವನ್ನ ಮೇರೆಯುತ್ತಿರುವ ಇಸ್ರೇಲ್ ಚಿಕ್ಕ ಮಕ್ಕಳನ್ನ ಬಲಿ ತೆಗೆದುಕೊಳ್ಳುತ್ತಿದೆ. ಹಲವು ಜನರ ಜೀವನವನ್ನ ನಾಶ ಮಾಡಿದೆ. ಇಸ್ರೇಲ್ ಜತೆಗೆ ವ್ಯಾಪಾರ ಸಂಬಂಧ ಹೊಂದಿದರೇ, ನಾವು ಕೂಡ ಅದರಲ್ಲಿ ಪಾಲು ಹೊಂದಿದಂತಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಜಾ

ಪ್ರತಿಭಟನೆ ವೇಳೆ ಮಾತನಾಡಿದ ಪಿಯುಸಿಎಲ್ ಐಶ್ವರ್ಯ, “ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಮೂರು ದಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ಗಾಜಾದಲ್ಲಿ ತನ್ನ ಕ್ರೂರತ್ವವನ್ನ ಮೇರೆಯುತ್ತಿರುವ ಇಸ್ರೇಲ್ ಜತೆಗೆ ಭಾರತ ಯಾವುದೇ ರೀತಿಯ ವ್ಯಾಪಾರ ಸಂಬಂಧವನ್ನ ಹೊಂದಬಾರದು. ಈಗಾಗಲೇ, ಇರುವ ವ್ಯಾಪಾರ ಸಂಬಂಧವನ್ನ ಕೈಬಿಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೆಟ್ರೋ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ಎಂಡಿಗೆ ಕೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

“ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.11ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್ವೆಸ್ಟ್ ಕರ್ನಾಟಕ – 2025) ಆರಂಭವಾಗಿದೆ. ಈ ಸಮಾವೇಶಲ್ಲಿ ಫ್ರಾನ್ಸ್, ನೆದರ್ಲೆಂಡ್ಸ್, ಜಪಾನ್, ಥಾಯ್ಲೆಂಡ್, ಮಲೇಷ್ಯಾ, ದಕ್ಷಿಣ ಕೊರಿಯಾ, ನಾರ್ವೆ, ಇಸ್ರೇಲ್, ಸ್ವಿಟ್ಜರ್ಲೆಂಡ್, ತೈವಾನ್, ಜರ್ಮನಿ, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೊಲಂಡ್, ಇಟಲಿ, ಬ್ರಿಟನ್, ಸ್ಲೊವೆನಿಯಾ, ಬಹರೇನ್ ಮತ್ತು ಸಿಂಗಪುರ ದೇಶಗಳು ಭಾಗಿಯಾಗಿವೆ. ಲೆಬನಾನ್, ಗಾಜಾ, ಇರಾನ್ ಮೇಲೆ ದಾಳಿ ನಡೆಸಿ ತನ್ನ ಕ್ರೂರತ್ವವನ್ನ ಮೆರೆಯುತ್ತಿರುವ ಇಸ್ರೇಲ್ ಜತೆಗೆ ಯಾವುದೇ ರೀತಿಯ ವ್ಯಾಪಾರ ಸಂಬಂಧವನ್ನ ಭಾರತ ಹೊಂದಬಾರದು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಗಾಜಾ

ಪ್ರತಿಭಟನಾಕಾರರ ಹಕ್ಕೊತ್ತಾಯಗಳು ಹೀಗಿವೆ

  • ಇಸ್ರೇಲ್ ಮೇಲೆ ಅರ್ನಿಸ್ ನಿರ್ಬಂಧ ಹೇರಬೇಕು
  • ನಮ್ಮ ರಾಜತಾಂತ್ರಿಕರನ್ನು ಭಾರತಕ್ಕೆ ವಾಪಸ್ ಕರೆತರಬೇಕು
  • ಇಸ್ರೇಲ್‌ನೊಂದಿಗಿನ ಎಲ್ಲ ಸಂಬಂಧಗಳನ್ನು ನಿರ್ಬಂಧಿಸಬೇಕು
  • ಜನಾಂಗೀಯ ಹತ್ಯೆಯು ಅಪರಾಧವೆಂದು ಕಾನೂನು ರೂಪಿಸಬೇಕು
  • ಇಸ್ರೇಲ್ ವಿರುದ್ಧದ ಐಜಿಜೆ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಬೇಕು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...