ಬೆಂಗಳೂರು | ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ನಿವೃತ್ತ ಉದ್ಯೋಗಿಗಳಿಂದ ಉಪವಾಸ ಸತ್ಯಾಗ್ರಹ

Date:

ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.

ಶನಿವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ.ಆಚಾರ್ಯ, ಬ್ಯಾಂಕೇತರ ಸರಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೇತನದಲ್ಲಿನ ವಿಶೇಷ ಭತ್ಯೆಯ ಜೊತೆಗೆ ಪಿಂಚಣಿಯನ್ನು ಲೆಕ್ಕ ಹಾಕಲು ಪರಿಗಣಿಸುತ್ತಿಲ್ಲ. ಈ ಕಾರಣದಿಂದ, ಪಿಂಚಣಿಯನ್ನು ಸಂಬಳದ ಶೇ.50 ರಿಂದ 30ಕ್ಕೆ ಕಡಿತಗೊಳಿಸಲಾಗಿದೆ. ಹಣಕಾಸು ಸಚಿವಾಲಯದ ಸಲಹೆಯಂತೆ ನೀಡಲಾಗಿರುವ ವೈದ್ಯಕೀಯ ವಿಮಾ ಯೋಜನೆ ಮಾರ್ಗದರ್ಶನವನ್ನು ಕಾರ್ಯಗತಗೊಳಿಸಿಲ್ಲ. ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದರೂ, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಚಾರ್ಯ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024-25ನೆ ಸಾಲಿನ ಎಕ್ಸ್ ಗ್ರೇಶಿಯಾ ಪುನರ್ ಪರಿಶೀಲನೆಯನ್ನು ಇದುವರೆಗೂ ಮಾಡಿಲ್ಲ. ವೇತನ ಒಪ್ಪಂದದ ಪ್ರಕಾರ ಖಾಸಗಿ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಎಕ್ಸ್ ಗ್ರೇಶಿಯಾವನ್ನು ಖಾಸಗಿ ಬ್ಯಾಂಕ್ ಆಡಳಿತಗಳು ಕೊಡುತ್ತಿಲ್ಲ. ಈ ತಾರತಮ್ಯವನ್ನು ಕೇಂದ್ರ ಸರಕಾರ ನಿವಾರಿಸಬೇಕು. ಸಾವಿರಕ್ಕಿಂತ ಕಡಿಮೆ ಬ್ಯಾಂಕ್ ನಿವೃತ್ತರು ಈ ಹಿಂದೆ ಪಿಂಚಣಿ ಆಯ್ಕೆ ಮಾಡದ ಕಾರಣ ಪಿಂಚಣಿಯಿಂದ ವಂಚಿತರಾಗಿದ್ದಾರೆ. ಅಂತಹ ಪ್ರಕರಣಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಪರಿಗಣಿಸಲಾಗಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಇದನ್ನು ವಿನಾಕಾರಣ ನಿರಾಕರಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ 80 ವರ್ಷ ದಾಟಿರುವ ಪಿಂಚಣಿದಾರರಿಗೆ ಬರುವ ಅಲ್ಪಮೊತ್ತದ ಪಿಂಚಣಿಯಿಂದ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಇಲ್ಲಿ ಉಪಾವಾಸ ಮಾಡುತ್ತಿರುವ ಅನೇಕರು ಡಯಾಬಿಟೀಸ್ ಮುಂತಾದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಎಸ್‌ಬಿಐ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಮೂಲ ವೇತನದ ಶೇ.50 ರಷ್ಟು ಪಿಂಚಣಿಯನ್ನು ಪೂರ್ವಾನ್ವಯಗೊಳಿಸಿ ನಿಗದಿ ಮಾಡಬೇಕು. ಹೊಸ ಪಿಂಚಣಿ ಯೋಜನೆಯ ಏರಿಳಿತಗಳು ಮತ್ತು ಅನಿಶ್ಚಿತತೆಗಳಿಂದ ರಕ್ಷಿಸುವ ಸಲುವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬೇಕು ಎಂದು ಆಚಾರ್ಯ ಒತ್ತಾಯಿಸಿದರು.

ಧರಣಿಯಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಪದಾಧಿಕಾರಿಗಳಾದ ಶಿವಪ್ರಕಾಶ್, ಎ.ಎನ್.ಕೃಷ್ಣಮೂರ್ತಿ, ಎಂ.ಆರ್.ಗೋಪಿನಾಥ್ ಸೇರಿದಂತೆ ನೂರಾರು ನಿವೃತ್ತ ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...