ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ

Date:

ಬೆಂಗಳೂರು ನಗರದ ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಣ ಮಾಡಿ ‘ಬೆಂಗಳೂರು ಮೆಟ್ರೋ_ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬೆಂಗಳೂರಿನ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

ಬಂಧಿಸಲ್ಪಟ್ಟ ಯುವಕನನ್ನು ಹಾವೇರಿ ಮೂಲದ, ಬೆಂಗಳೂರಿನ ಪೀಣ್ಯದಲ್ಲಿ ವಾಸಿಸುತ್ತಿದ್ದ ದಿಗಂತ್ (27 ವರ್ಷ) ಎಂದು ಗುರುತಿಸಲಾಗಿದೆ.

“ಈತ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಪೀಣ್ಯದಲ್ಲಿ ಈತನನ್ನು ಶುಕ್ರವಾರ ಬಂಧಿಸಲಾಗಿದೆ” ಎಂದು ಬನಶಂಕರಿ ಪೊಲೀಸರು ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಯುವಕ ಅಪ್ಲೋಡ್ ಮಾಡುತ್ತಿದ್ದ ‘ಬೆಂಗಳೂರು ಮೆಟ್ರೋ_ಚಿಕ್ಸ್’ ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಂ ಪೇಜ್‌ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಎಲ್ಲ ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾನೆ. ಎಲ್ಲ ಸೈಬರ್ ವಿವರಗಳನ್ನು ಪರಿಶೀಲನೆ ನಡೆಸಿದಾಗ ಪೀಣ್ಯದಲ್ಲಿ ವಾಸಿಸುತ್ತಿರುವುದು ಗೊತ್ತಾಗಿದೆ. ಸಂಪೂರ್ಣ ವಿವರ ತಿಳಿಯುತ್ತಿದ್ದಂತೆಯೇ ಪೀಣ್ಯದಲ್ಲಿ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ” ಎಂದು ಬನಶಂಕರಿ ಪೊಲೀಸ್ ಠಾಣೆಯ ಎಸ್‌ಐ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

“ಈತ ಅಪ್ಲೋಡ್ ಮಾಡುತ್ತಿದ್ದ ‘ಬೆಂಗಳೂರು ಮೆಟ್ರೋ_ಚಿಕ್ಸ್’ ಇನ್ಸ್ಟಾಗ್ರಾಮ್ ಖಾತೆಗೆ ಸುಮಾರು 6,000 ಕ್ಕೂ ಹೆಚ್ಚು ಫಾಲೋವರ್ಸ್‌ಗಳಿದ್ದದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆ” ಎಂದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಏನಿದು ಪ್ರಕರಣ?

ಮೆಟ್ರೋ ರೈಲುಗಳು ಹಾಗೂ ನಿಲ್ದಾಣಗಳಲ್ಲಿ ಮೊಬೈಲ್‌ಗಳಲ್ಲಿ ಮಹಿಳೆಯರ ವಿಡಿಯೋ ಸೆರೆ ಹಿಡಿದು ‘ಮೆಟ್ರೋ ಚಿಕ್ಸ್’ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗುತ್ತಿತ್ತು. ಈ ಖಾತೆಯನ್ನು ಸುಮಾರು 6,000 ಕ್ಕೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದರು. ಇದನ್ನು ಗಮನಿಸಿದ್ದ ನೆಟ್ಟಿಗರೋರ್ವರು ಬೆಂಗಳೂರಿನ ಪೊಲೀಸರಿಗೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹಿಸಿದ್ದರು.

GrZjEFpbAAEi9LE

ಸಾರ್ವಜನಿಕ ವಲಯದಲ್ಲಿ ಈ ಕಿಡಿಗೇಡಿ ಕೃತ್ಯಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬನಶಂಕರಿ ಠಾಣೆ ಪೊಲೀಸರು ‘ಮೆಟ್ರೋ ಚಿಕ್ಸ್‌’ ಇನ್ಸ್‌ಸ್ಟಾಗ್ರಾಮ್‌ ಖಾತೆದಾರನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಬಳಿಕ ಈ ವಿಡಿಯೋ ಪೋಸ್ಟ್‌ ಮಾಡಿದ್ದ ಕಿಡಿಗೇಡಿಯ ಪತ್ತೆಗೆ ತನಿಖೆ ಕೈಗೊಂಡಿದ್ದರು.

ಸ್ವಯಂ ಪ್ರೇರಿತ ದೂರಿನಲ್ಲಿ ಏನಿತ್ತು?

ಬನಶಂಕರಿ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಶಂಕರ್‌ ಈ ಸಂಬಂಧ ದೂರು ನೀಡಿದ್ದಾರೆ. ಮೇ 5ರಂದು ಸಂಜೆ ಸಾಮಾಜಿಕ ಜಾಲತಾಣ ವೀಕ್ಷಿಸುವಾಗ ಇನ್ಸ್‌ಸ್ಟಾಗ್ರಾಮ್‌ ಆ್ಯಪ್‌ನ ಮೆಟ್ರೋ ಚಿಕ್ಸ್‌ ಎಂಬ ಖಾತೆಯಲ್ಲಿ ಮಹಿಳೆಯರ ವಿಡಿಯೋಗಳು ಕಂಡು ಬಂದವು. ಮೆಟ್ರೋ ರೈಲಿನಲ್ಲಿ ಸಂಚರಿಸುವ ಹಾಗೂ ನಿಲ್ದಾಣಗಳಲ್ಲಿ ನಡೆದು ಹೋಗುವ ಮಹಿಳೆಯರನ್ನು ಹಿಂಬಾಲಿಸಿ ಆ ಮಹಿಳೆಯರ ದೇಹದ ಹಿಂಭಾಗ ಹಾಗೂ ಮುಂಭಾಗವನ್ನು ವಿಡಿಯೋ ಚಿತ್ರೀಕರಣ ಮಾಡಿ ಆ ವಿಡಿಯೋವನ್ನು ಮೆಟ್ರೋ ಚಿಕ್ಸ್‌ ಎಂಬ ಖಾತೆಯಲ್ಲಿ ಅಪ್ಲೋಡ್‌ ಮಾಡಿರುವುದು ಕಂಡು ಬಂದಿದೆ. ಈ ಖಾತೆಯಲ್ಲಿ ಒಟ್ಟು 14 ವಿಡಿಯೋಗಳನ್ನು ಅಪ್ಲೋಡ್‌ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಕರ್ನಾಟಕ ವಕ್ಪ್‌ ಪರಿಷತ್ ಉಪಾಧ್ಯಕ್ಷರಾಗಿ ಮೌಲಾನಾ ಶಾಫಿ ಸಅದಿ ನೇಮಕ

ಈ ರೀತಿಯ ವಿಡಿಯೋಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಮಹಿಳೆಯರ ಗೌರವಕ್ಕೆ ಧಕ್ಕೆ ತರಲಾಗಿದೆ. ಹೀಗಾಗಿ ಈ ಕಿಡಿಗೇಡಿ ಕೆಲಸ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ, ಕಿಡಿಗೇಡಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...