ಬೆಂಗಳೂರು | ಏಕಾಏಕಿ ಮನೆ ಡೆಮಾಲಿಷನ್‌; ಬೀದಿಗೆ ಬಿದ್ದ 30ಕ್ಕೂ ಹೆಚ್ಚು ಕುಟುಂಬಗಳು

Date:

ಆರು ದಿನಗಳ ಹಿಂದೆ ರೈಲ್ವೆ ಇಲಾಖೆಯ ಏಕಾಏಕಿ ಡೆಮಾಲಿಷನ್ ಕಾರ್ಯದಿಂದ ಬೆಂಗಳೂರಿನ ಕೆಜೆ ಹಳ್ಳಿಯ 30ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಿವೆ.

ಒಂದು ದಿನದ ಮುಂಚೆಯಾದರೂ ನೋಟಿಸ್‌ ನೀಡಿದ್ದರೆ, ಮನೆಯಲ್ಲಿ ಇದ್ದ ವಸ್ತುಗಳನ್ನಾದರೂ ತೆಗೆದುಕೊಳ್ಳಬಹುದಿತ್ತು, ಆದರೆ ಒಂದು ದಿನವೂ ಸಮಯ ಕೊಡಲಿಲ್ಲ. ಬಡವರ ಮೇಲೆ ದರ್ಪ ತೋರಿಸಲು 700 ಪೊಲೀಸರು ಬೇಕಾ? ನಮಗೆ ಬಟ್ಟೆ ಬದಲಾಯಿಸಲು ಜಾಗವಿಲ್ಲ, ಮಕ್ಕಳಿಗೆ ಕುಡಿಯಲು ನೀರಿಲ್ಲ. ವಾರದಿಂದ ರೈಲ್ವೇ ಹಳಿಯ ಪಕ್ಕದಲ್ಲೇ ಬದುಕುವಂತಾಗಿದೆ ಎಂದು ಸೂರು ಕಳೆದುಕೊಂಡ ಸಂತ್ರಸ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡೆಮಾಲಿಷನ್ ದಿನ ಮಹಿಳೆಯರ ಮೇಲೂ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ನಮ್ಮ ಮನೆಯು ತಾತನ ಕಾಲದಿಂದಲೂ ಇಲ್ಲಿದೆ, ನಾವು ವಾಸಕ್ಕೆ ಬಂದಾಗ ರೈಲ್ವೆ ಗೇಟ್ ಕೂಡ ಇರಲಿಲ್ಲ. ಆದರೆ ಇಂದು ಹೊಸ ರೈಲ್ವೆ ಹಳಿ ಹೆಸರಿನಲ್ಲಿ ನಮ್ಮ ಸೂರುಗಳನ್ನು ನೆಲಸಮ ಮಾಡಲಾಗಿದೆ. ನಮಗೆ ರೈಲ್ವೆ ಇಲಾಖೆಯ ಮೇಲೆ ಬೇಸರ ಇಲ್ಲ, ಆದರೆ ಜನಪ್ರತಿನಿಧಿಗಳ ಮೌನವೇ ನೋವು. ನಮ್ಮ ವಿಷಯ ಯಾರಿಗೂ ಗೊತ್ತಿಲ್ಲದಂತೆ ಮಾಡಲಾಗಿದೆ” ಎಂದು ನಿವಾಸಿಗಳು ವಿಷಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

ಕೆ.ಜೆ.ಹಳ್ಳಿ ನಿವಾಸಿಗಳ ಪ್ರಕಾರ, ಒಂದು ತಿಂಗಳ ಹಿಂದೆ ಹೊಸ ಟ್ರ್ಯಾಕ್ ನಿರ್ಮಾಣದ ನೋಟಿಸ್ ನೀಡಲಾಗಿತ್ತು. ಅದಾದ ಬಳಿಕ ಏಕಾಏಕಿ 25ಕ್ಕೂ ಹೆಚ್ಚು ಮನೆಗಳನ್ನ ನೆಲಸಮಗೊಳಿಸಲಾಗಿದೆ. ಈಗ ಟ್ರ್ಯಾಕ್ ಪಕ್ಕದ ಚಿಕ್ಕ ಗುಡಾರಗಳೇ ಇವರ ಮನೆಗಳು. ಮಕ್ಕಳು ಶಾಲೆ ಬಿಟ್ಟಿದ್ದಾರೆ, ವೃದ್ಧರಿಗೆ ಔಷಧಿ ಸಿಗುತ್ತಿಲ್ಲ. ರೈಲ್ವೆ ಇಲಾಖೆಯ ಕ್ರಮದ ವಿರುದ್ಧ ನಿವಾಸಿಗಳು ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...