ಬೆಂಗಳೂರು | ಮೆಟ್ರೋದಲ್ಲಿ ಗುಟ್ಕಾ, ಪಾನ್ ಉಗುಳುವವರೇ ಎಚ್ಚರ! ಬೀಳಲಿದೆ ದಂಡ

Date:

ಮೆಟ್ರೋ ಆವರಣ ಹಾಗೂ ರೈಲುಗಳ ಒಳಗೆ ಪಾನ್‌, ಗುಟ್ಕಾದಂತಹ ತಂಬಾಕು ಆಧಾರಿತ ಉತ್ಪನ್ನಗಳನ್ನು ಜಗಿದು ಎಲ್ಲೆಂದರಲ್ಲಿ ಉಗುಳುವವರಿಗೆ ಬಿಎಂಆರ್‌ಸಿಎಲ್‌ ದಂಡದ ಎಚ್ಚರಿಕೆ ನೀಡಿದೆ.

ಮೆಟ್ರೋ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಪ್ರಯಾಣಿಕರು ಗುಟ್ಕಾ ಮತ್ತು ಪಾನ್ ಮಸಾಲಾದಂತಹ ಉತ್ಪನ್ನಗಳನ್ನು ಜಗಿದು ಉಗುಳುವ ಬಗ್ಗೆ ಸಾರ್ವಜನಿಕ ದೂರುಗಳು ಹೆಚ್ಚಾಗುತ್ತಿವೆ. ಈ ಸಮಸ್ಯೆಯ ಪರಿಹಾರಕ್ಕಾಗಿ ಮತ್ತು ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸ ಹಾಕುವುದನ್ನು ತಪ್ಪಿಸುವುದಕ್ಕಾಗಿ ತಪ್ಪಿತಸ್ಥರ ವಿರುದ್ಧ ದಂಡದಂತಹ ಕಠಿಣ ಕ್ರಮ ಜರುಗಿಸಲಿದೆ.

ಈಗ ಎಲ್ಲಾ ರೈಲುಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಕಣ್ಗಾವಲು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ತಪ್ಪಿತಸ್ಥ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ನಿಯಮಗಳ ಪ್ರಕಾರ ದಂಡ ವಿಧಿಸಲಾಗುವುದು. ಅಂತಹ ವಸ್ತುಗಳನ್ನು ಲೋಹ ಶೋಧಕಗಳ ಮೂಲಕ ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಅನುಮಾನ ಬಂದ ಜಾಗಗಳಲ್ಲಿ ಆಗಾಗ್ಗೆ, ತಪಾಸಣೆಗಳನ್ನು ಜಾರಿಗೆ ತರಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 23 at 12.40.12 PM

ಅಂತಹ ಪ್ರಯಾಣಿಕರನ್ನು ಸೂಕ್ತ ರೀತಿಯಲ್ಲಿ ಗಮನಿಸಲು ಜೊತೆಗೆ ಜನರೊಂದಿಗೆ ಈ ಕುರಿತು ಸಂವೇದನಾಶೀಲ ನಡವಳಿಕೆ ಹೊಂದಿರುವುದರ ಬಗ್ಗೆ, ಪ್ಲಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಪ್ರಯಾಣಿಕರ ನಡವಳಿಕೆಯನ್ನು ಗಮನಿಸುವುದರ ಜೊತೆಗೆ ಯಾವುದೇ ಉಲ್ಲಂಘನೆಗಳನ್ನು ಗಮನಿಸಿದ ಕೂಡಲೇ ಸಂಬಧಿಸಿದ ಪ್ಲಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲು ಕೇಂದ್ರ ಭದ್ರತಾ ಕಣಾವಲು ಕೊಠಡಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಿರುಕುಳ; ಪೊಲೀಸರಿಬ್ಬರು ತಪ್ಪಿತಸ್ಥರೆಂದು ಘೋಷಣೆ

ಹೆಚ್ಚುವರಿಯಾಗಿ, ಎಲ್ಲ ಮೆಟ್ರೋ ಪ್ರಯಾಣಿಕರಿಗೆ ಸ್ವಚ್ಚ ಮತ್ತು ಹೆಚ್ಚು ಆಹ್ಲಾದಪೂರ್ಣ ಪ್ರಯಾಣಾನುಭವದ ಖಾತ್ರಿ ಮಾಡಿಕೊಳ್ಳಲು, ಮೆಟ್ರೋ ಆವರಣದಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸದಂತೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ವ್ಯಾಪಕ ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುವುದರ ಬಗ್ಗೆ ಯೋಜನೆ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...