ಬೆಂಗಳೂರು | ಯುವ ಸಬಲೀಕರಣಕ್ಕೆ ಉಬರ್ ಹೊಸ ಯೋಜನೆ; ಚಾಲನೆ ತರಬೇತಿ & ಪ್ರವಾಸಿ ಗೈಡ್ ಕೌಶಲ್ಯ

Date:

ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿಯೊಂದಿಗೆ ಉಬರ್ ಇಂಡಿಯಾ ಹೊಸದೊಂದು ಯೋಜ‌ನೆ‌ಯನ್ನು ಜಾರಿಗೆ‌ ತರಲು ಮುಂದಾಗಿದೆ. ಈ ಯೋಜನೆಯಡಿ ಯುವಕರಿಗೆ ಚಾಲನೆ ತರಬೇತಿ ನೀಡುವುದರ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಉದ್ದೇಶ ಹೊಂದಿದೆ.

ಈ ನಿಟ್ಟಿನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರೊಂದಿಗೆ ಉಬರ್‌ನ ಏಷ್ಯಾ ಪೆಸಿಫಿಕ್‌ನ ಸಾರ್ವಜನಿಕ ನೀತಿ ಮುಖ್ಯಸ್ಥ ಮೈಕ್ ಆರ್ಗಿಲ್ ಮಾತುಕತೆ ನಡೆಸಿದರು.

ಪ್ರ”ವಾಸೋದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಚಾಲಕರನ್ನು ಸಜ್ಜುಗೊಳಿಸುವುದು ವಿಶೇಷವಾಗಿ ತಳ ಸಮುದಾಯದ ಯುವಕರಿಗೆ ಆದಾಯದ ಅವಕಾಶಗಳನ್ನು ಒದಗಿಸುವುದು ಹಾಗೂ ಸಬಲೀಕರಣಕ್ಕೆ ಆದ್ಯತೆ ನೀಡುವ ಯೋಜನೆ ಇದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರಸ್ತುತ ಅಭ್ಯರ್ಥಿಗಳಿಗೆ ಲಘು ಮತ್ತು ಭಾರೀ ವಾಹನ ಚಾಲನೆ ತರಬೇತಿ ನೀಡುತ್ತದೆ. 100ಕ್ಕೂ ಹೆಚ್ಚು ತರಬೇತಿ ಪಡೆದ ಚಾಲಕರು ಈಗಾಗಲೇ ಭಾರತ ಮತ್ತು ವಿದೇಶಗಳಲ್ಲಿ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಬರ್ ಸಂಸ್ಥೆ ಗಳಿಕೆಯ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು “ಚಾಲಕ-ಕಮ್-ಪ್ರವಾಸಿ ಮಾರ್ಗದರ್ಶಿ” ಮಾದರಿಯನ್ನು ಪ್ರಸ್ತಾಪಿಸಿದೆ.

“ತಂತ್ರಜ್ಞಾನ ಮತ್ತು ಪ್ರವಾಸೋದ್ಯಮದಾದ್ಯಂತ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲು ವಿವಿಧ ಕೌಶಲ್ಯ ಯೋಜನೆಗಳನ್ನು ನಾವು ಚರ್ಚಿಸಿದ್ದೇವೆ, ಕರ್ನಾಟಕದಲ್ಲಿ ಹೇರಳ ಪ್ರವಾಸೋದ್ಯಮ ತಾಣಗಳಿವೆ. ಅಲ್ಲಿ ಉತ್ತಮ ತರಬೇತಿ ಪಡೆದ ಕ್ಯಾಬ್ ಚಾಲಕರು ಇದ್ದರೆ ಪ್ರವಾಸಿ ಮಾರ್ಗದರ್ಶಿಯಾಗಿಯೂ ಕಾರ್ಯನಿರ್ವಹಿಸಬಹುದು” ಎಂದು ಆರ್ಗಿಲ್ ಹೇಳಿದರು.

ನಂತರ ಸಚಿವ ಡಾ. ಪಾಟೀಲ್ ಮಾತನಾಡಿ, “ಚಾಲಕ ತರಬೇತಿಯಲ್ಲಿ ವಿಶೇಷ ಕೌಶಲ್ಯಗಳನ್ನು ಸಂಯೋಜಿಸುವುದು ಪ್ರಯೋಜನಕಾರಿ. ಇದೊಂದು ಉತ್ತಮ ಯೋಜನೆ ಎಂದು ಸ್ವಾಗತಿಸಿದರು ಮತ್ತು ಮಂಡಳಿಯ ಮುಂದಿನ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಲಾಗುವುದು” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಬೆಂಗಳೂರು | ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಹೈವಿಷನ್ ಇಂಡಿಯಾ, ಸುಧಾರಿತ ತಾಂತ್ರಿಕ ತರಬೇತಿಗಾಗಿ ಜಿಟಿಟಿಸಿ ಜೊತೆ ಒಪ್ಪಂದ: ಮತ್ತೊಂದು ಸಭೆಯಲ್ಲಿ, ಐಫೋನ್ ತಯಾರಕ ಫಾಕ್ಸ್‌ಕಾನ್‌ಗೆ ಕ್ಯಾಮೆರಾ ಪರಿಕರಗಳನ್ನು ಒದಗಿಸುವ ಕೊರಿಯನ್ ಸಂಸ್ಥೆಯಾದ ಹೈವಿಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸಚಿವ ಡಾ. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.

ತಾಂತ್ರಿಕ ತರಬೇತಿ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಯಾಂತ್ರೀಕೃತತೆ, ನಿಖರ ಯಂತ್ರೋಪಕರಣ ಮತ್ತು ಸಲಕರಣೆಗಳ ಜೋಡಣೆಯಂತಹ ಕ್ಷೇತ್ರಗಳಲ್ಲಿ ಸೌಲಭ್ಯಗಳ ಹಂಚಿಕೆಯಲ್ಲಿ ಸಹಕಾರಕ್ಕಾಗಿ ಈ ಒಪ್ಪಂದವು ಅವಕಾಶವನ್ನು ಒದಗಿಸುತ್ತದೆ.

ಒಪ್ಪಂದಕ್ಕೆ ಹೈವಿಷನ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಲೀ ಯುನ್ಹೋ ಮತ್ತು ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಸಹಿ ಹಾಕಿದರು. ಎರಡೂ ಸಂಸ್ಥೆಗಳು ಅರ್ಹ ಜಿಟಿಟಿಸಿ ಪ್ರಶಿಕ್ಷಣಾರ್ಥಿಗಳಿಗೆ ಕೈಗಾರಿಕಾ ಮಾನ್ಯತೆ, ಇಂಟರ್ನ್‌ಶಿಪ್ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಸಮ್ಮತಿಸಿವೆ. ಜೊತೆಗೆ ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಕೈಗಾರಿಕಾ ಸೌಲಭ್ಯಗಳು ಮತ್ತು ಪ್ರಾತ್ಯಕ್ಷಿಕೆ ಸಲಕರಣೆಗಳನ್ನು ಪೂರೈಸಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...