ಬೆಂ.ನಗರ | ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ; 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ

Date:

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್‌ ಮಂಜುನಾಥ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಚಂದಾಪುರ ಪುರಸಭೆ ವ್ಯಾಪ್ತಿ ಇಗ್ಗಲೂರು ಬಳಿ ₹290ಕೋಟಿ ವೆಚ್ಚದಲ್ಲಿ 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಆಯುಷ್ಮಾನ್‌ ಭಾರತ್‌ ಯೋಜನೆ ಖಾಸಗಿ ಆಸ್ಪತ್ರೆಯಲ್ಲೂ ಸಿಗಬೇಕು. ಇದಕ್ಕೆ ರಾಜ್ಯ ಸರ್ಕಾರ ಕೆಲವು ಬದಲಾವಣೆ ತಂದು ಸಹಕಾರ ನೀಡಬೇಕು. ಇದರಿಂದ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆ ವಿಶೇಷತೆ: ಐದು ಎಕರೆ ಪ್ರದೇಶದಲ್ಲಿ ಏಳು ಮಹಡಿ ಆಸ್ಪತ್ರೆ, ಆಸ್ಪತ್ರೆ ಉದ್ಯೋಗಿಗಳಿಗೆ ವಸತಿ ಗೃಹ, ಕ್ಯಾಂಟೀನ್‌ ಸೇರಿದಂತೆ ಸುಸಜ್ಜಿತ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದಿದ್ದಾರೆ.

ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಇಎಸ್‌ಐ ಆಸ್ಪತ್ರೆ ತಾಲೂಕಿನಲ್ಲಿ ಸ್ಥಾಪಿತವಾಗಿದ್ದು, ಐದು ಎಕರೆ ಪ್ರದೇಶದಲ್ಲಿ ಏಳು ಮಹಡಿ ಆಸ್ಪತ್ರೆ, ಆಸ್ಪತ್ರೆ ಉದ್ಯೋಗಿಗಳಿಗೆ ವಸತಿ ಗೃಹ ಕ್ಯಾಂಟೀನ್‌ ಸೇರಿದಂತೆ ಸುಸಜ್ಜಿತ ಸೌಲಭ್ಯವುಳ್ಳ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬೊಮ್ಮಸಂದ್ರ, ಜಿಗಣಿ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಐದು ಕೈಗಾರಿಕಾ ಪ್ರದೇಶಗಳಿವೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪಟಾಕಿಗೆ ಹೆಚ್ಚು ಮಹತ್ವ ನೀಡದೆ ಪರಿಸರ ಉಳಿಸಿ: ಜಯ ಕರ್ನಾಟಕ ಪರಿಷತ್‌ ಮುಖಂಡ ನಾರಾಯಣ್‌

ಕೈಗಾರಿಕಾ ಪ್ರದೇಶಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ. ವಾರ್ಷಿಕ ₹140 ಕೋಟಿಗೂ ಹೆಚ್ಚು ಹಣ ಇಎಸ್‌ಐಗೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದಲೇ ಜಮೆಯಾಗುತ್ತಿದೆ. ಬಹುದಿನಗಳ ಕಾರ್ಮಿಕರ ಬೇಡಿಕೆ ಈಡೇರಿದಂತಾಗಿದ್ದು, ಎರಡೂವರೆ ವರ್ಷಗಳಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...