ಬೆಂ. ಗ್ರಾಮಾಂತರ | ಫೋಟೋ ಕಳಿಸಿಲ್ಲವೆಂದು ಯುವಕನನ್ನೇ ಕೊಂದ ದುಷ್ಕರ್ಮಿಗಳ ಗುಂಪು

Date:

ಡಾಭಾದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಕಳಿಸಲಿಲ್ಲ ಎಂಬ ಕಾರಣಕ್ಕೆ ಯುವಕನನ್ನು ಗುಂಪೊಂದು ಇರಿದು ಕೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

18 ವರ್ಷದ ಯುವಕ ಸೂರ್ಯ ಹತ್ಯೆಯಾದ ದುರ್ದೈವಿ. ದೊಡ್ಡಬಳ್ಳಾಪುರ ಹೊರಭಾಗದಲ್ಲಿರುವ ಢಾಭಾದಲ್ಲಿ ಜನರನ್ನು ಆಕರ್ಷಿಸಲು ವರ್ಣರಂಜಿತ ಚಿತ್ರಗಳನ್ನು ಬಿಡಿಸಲಾಗಿದೆ. ಅಲ್ಲಿಗೆ ತೆರಳಿದ್ದ ಸೂರ್ಯ ಮತ್ತು ಸ್ನೇಹಿತರು ತಮ್ಮ ಚಿತ್ರಗಳನ್ನು ಕ್ಯಾಮೆರಾದಲ್ಲಿ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

ಆ ವೇಳೆಗೆ, ಅಲ್ಲಿಗೆ ಬಂದ ಮತ್ತೊಂದು ಗುಂಪು, ತಮ್ಮ ಫೋಟೋಗಳನ್ನೂ ತೆಗೆಯುವಂತೆ ಒತ್ತಾಯಿಸಿದ್ದಾರೆ. ಮೊದಲಿಗೆ ಸೂರ್ಯ ಮತ್ತು ಆತನ ಸ್ನೇಹಿತರು ಫೋಟೋ ತೆಗೆಯಲು ನಿರಾಕರಿಸಿದ್ದಾರೆ. ಬಳಿಕ, ಫೋಟೋಗಳನ್ನು ತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೋಟೋಗಳನ್ನು ಕೂಡಲೇ ವಾಟ್ಸಾಪ್‌ನಲ್ಲಿ ಕಳಿಸುವಂತೆ ಆ ಗುಂಪು ಒತ್ತಡ ಹಾಕಿದೆ. ಆದರೆ, ಕ್ಯಾಮೆರಾದ್ಲಿ ಫೋಟೋ ತೆಗೆದಿದ್ದರಿಂದ, ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಬಳಸಿ ಫೋಟೋಗಳನ್ನು ಕಳಿಸಬೇಕು. ಈಗಲೇ ಕಳಿಸಲು ಸಾಧ್ಯವಿಲ್ಲ ಎಂದು ಸೂರ್ಯ ಹೇಳಿದ್ದಾರೆ.

ಸೂರ್ಯನ ಮಾತು ಕೇಳದ ಆ ಗುಂಪು ವಾಗ್ವಾದಕ್ಕಿಳಿದಿದೆ. ಆ ಗುಂಪಿನಲ್ಲಿದ್ದ ದಿಲೀಪ್‌ ಎಂಬಾತ ಚಾಕುವಿನಿಂದ ಸೂರ್ಯನ ಎದೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡ ಸೂರ್ಯನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸೂರ್ಯ ಮೃತಪಟ್ಟಿದ್ದಾನೆ. ಆರೋಪಿಗಳ ಗುಂಪು ಪರಾರಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಉಳಿದವರನ್ನು ಗುರುತಿಸಿ ಶೀಘ್ರವೇ ಬಂಧಿಸುತ್ತೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲ್ದಾನಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...