ಬೆಂ.ಗ್ರಾ | ಗೋಮಾಂಸ ಸಾಗಾಟಗಾರರ ಮೇಲೆ ಸಂಘಪರಿವಾರದವರ ವಿಕೃತ ಹಲ್ಲೆ

Date:

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ತಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರ(ಐಬಿ) ವೃತ್ತದಲ್ಲಿ ಒಂದು ಕಾರಿಗೆ ಬೆಂಕಿ ಹಚ್ಚಿರುವ ಪ್ರಕರಣ ಭಾನುವಾರ ಬೆಳಿಗ್ಗೆ 5.40ರ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ‌ ಹಸುಗಳ ರುಂಡಗಳನ್ನು ಇರಿಸಿದ್ದು, ಜೈ ಶ್ರೀರಾಮ್‌ ಎಂಬ ಘೋಷಣೆ ಕೂಗಿದ್ದಾರೆ. ಗೋಮಾಂಸ ಸಾಗಿಸುತ್ತಿದ್ದವನ ಮೇಲೆ ಶ್ರೀರಾಮಸೇನೆ ಕಾರ್ಯಕರ್ತ ಹಲ್ಲೆ ನಡೆಸಿದ್ದು, ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಶ್ರೀರಾಮ ಸೇನೆಯ ಸುಮಾರು 20 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತೆಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲೇ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಮೊಕ್ಕಾಂ ಹೂಡಿ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿ ಪರಿಶೀಲನೆ ನಡೆಸಿದರು.

ಘಟ‌ನೆಯ ಬಗ್ಗೆ ಇಂಚಿಂಚೂ ಪರಿಶೀಲನೆ ನಡೆಸಿದ್ದು, ಕಾರ್ಯಕರ್ತರ ಪೋನ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಎರಡೂ ಕಡೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಸಂಪರ್ಕಿಸಿದಾಗ, “ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಇಂಡಿಕಾ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು. ಇದನ್ನು ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದು, ತಪಾಸಣೆ ನಡೆಸಿದ ವೇಳೆ ಗೋಮಾಂಸ ಪತ್ತೆಯಾಗಿದೆ” ಎಂದು ಹೇಳಿದರು.

“ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳು ಹಾಗೂ ಚಾಲಕರು ಸೇರಿದಂತೆ 19 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಪೂರ್ಣ ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ?: ಮುಖ್ಯಮಂತ್ರಿ ಚಂದ್ರು

“ಬಂಧಿತ ಆರೋಪಿಗಳ ಪೈಕಿ ಇಬ್ಬರು ನಮ್ಮ ರಾಜ್ಯದವರಾಗಿದ್ದು, 17 ಮಂದಿ ಆಂಧ್ರಪ್ರದೇಶದ ಹಿಂದೂಪುರ ಮೂಲದವರೆಂದು ತಿಳಿದುಬಂದಿದೆ. ಪ್ರಕರಣದಲ್ಲಿ ಉಳಿದಂತೆ ಯಾರಿದ್ದಾರೆಂಬುದನ್ನು ತನಿಖೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಘಟನೆ ವೇಳೆ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಗೆ ಸಂಬಂಧಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, “ಘಟನೆಯ ಆರಂಭದಲ್ಲಿ ಕೆಲವು ನಿಮಿಷ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆದರೆ ನಮ್ಮ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ. ಇದೀಗ ಯಾವುದೇ ಸಮಸ್ಯೆ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆವಿಕಂ ವ್ಯಾಪ್ತಿಯಲ್ಲಿರುವ ರೈತರ ಅನಧಿಕೃತ ನೀರಾವರಿ ಸೇಟ್ಟುಗಳ ವಿದ್ಯುತ್ ಸಂಪರ್ಕ ಕಟ್

ಹೊಸಕೋಟೆ :ಹೊಸಕೋಟ ತಾಲ್ಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಇರುವ ಕೆಲ...

ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ...

ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ...

ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ...