ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ ರೋಗಕ್ಕೆ ತುತ್ತಾದ ಹುಳುಗಳು, ಹಣ್ಣಾಗುವ ಬದಲು ಹಾಲುವಾಂತಿ ಮಾಡಿಕೊಂಡು ಸಾಯುತ್ತವೆ ಎಂದು ರೇಷ್ಮೆ ಬೆಳೆಗಾರರು ಕಳವಳ ವ್ಯಕ್ತಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಸಂಜೆಯ ವೇಳೆ ಹೆಚ್ಚು ತಂಪಾದ ವಾತಾವರಣ ಇರುತ್ತದೆ. ಹಗಲಿನಲ್ಲಿ ಮೋಡ ಮುಸುಕಿದ ವಾತಾವರಣದೊಂದಿಗೆ ತುಂತುರು ಮಳೆ ಹನಿಗಳು ನಿರಂತರವಾಗಿ ಬೀಳುತ್ತಿವೆ. ಇದರಿಂದಾಗಿ ರೇಷ್ಮೆಹುಳು ಸಾಕಾಣಿಕೆ ಮನೆಗಳಲ್ಲಿ ಉಷ್ಣಾಂಶ ಕಾಪಾಡಿಕೊಳ್ಳುವುದು ಹಾಗೂ ರೇಷ್ಮೆಹುಳುಗಳಿಗೆ ತೇವಾಂಶರಹಿತವಾದ ಸೊಪ್ಪು ಕೊಡುವುದು ಸವಾಲಾಗಿ ಪರಿಣಮಿಸಿದೆ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

“ಹಿಪ್ಪುನೇರಳೆ ಸೊಪ್ಪಿನಲ್ಲಿ ನೀರು ಇರುವ ಕಾರಣ, ತೋಟಗಳಲ್ಲಿ ನೀರು ಉದುರಿಸಿದ ನಂತರ ಕಟಾವು ಮಾಡಿಕೊಂಡು ಬಂದು ಹುಳುಗಳಿಗೆ ಕೊಡುತ್ತಿದ್ದಾರೆ. ಆದರೂ ಸೊಪ್ಪಿನಲ್ಲಿ ನೀರಿನ ಅಂಶ ಹೆಚ್ಚಾಗಿರುವ ಕಾರಣ, ತೇವಾಂಶವಿರುವ ಸೊಪ್ಪು ತಿನ್ನುವ ಹುಳುಗಳು ಹಣ್ಣಾಗುವ ಹಂತದಲ್ಲಿ ಹಾಲುತೊಂಡೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ರೇಷ್ಮೆ ಬೆಳೆಗೆ ಹಾಕಿರುವ ಬಂಡವಾಳ ಬರುತ್ತದೆಯೊ, ಇಲ್ಲವೋ ಎನ್ನುವ ಆತಂಕ ಕಾಡತೊಡಗಿದೆ” ಎಂಬುದು ರೈತರ ಸಂಕಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೂರು ಮೊಟ್ಟೆ ರೇಷ್ಮೆ ಹುಳು ಸಾಕಲು 45 ಮೂಟೆ ಹಿಪ್ಪುನೇರಳೆ ಸೊಪ್ಪು ಬೇಕು. ಇದಕ್ಕೆ ₹30 ಸಾವಿರ ಖರ್ಚು ಮಾಡಬೇಕು. ಆದರೆ, ಈಗಿನ ವಾತಾವರಣಕ್ಕೆ ರೇಷ್ಮೆಹುಳು ಗೂಡು ಕಟ್ಟುತ್ತಿಲ್ಲ. ಹುಳು ಹಣ್ಣಾದ ನಂತರ 5ರಿಂದ 6 ದಿನಗಳಿಗೆ ಮಾರುಕಟ್ಟೆಗೆ ಹೋಗಬೇಕು. ಆದರೆ, ಗೂಡುಕಟ್ಟುವುದು ವಿಳಂಬವಾಗುತ್ತಿರುವ ಕಾರಣ, 7ರಿಂದ 8 ದಿನಗಳಾಗುವ ಸಾಧ್ಯತೆ ಇದೆ. ರೇಷ್ಮೆ ಹುಳು ಸಾಕಲು ಹಾಕಿದ ಬಂಡವಾಳ ಕೈಗೆ ಬರುತ್ತಿಲ್ಲ” ಎಂದು ರೈತರು ಅವಲತ್ತುಕೊಂಡಿದ್ದಾರೆ.

“ಎರಡು ದಿನಗಳಿಂದ ಹಣ್ಣಾಗಿರುವ ರೇಷ್ಮೆಹುಳುಗಳು ಸರಿಯಾಗಿ ಗೂಡು ಕಟ್ಟುತ್ತಿಲ್ಲ. ಗೂಡಿನ ಇಳುವರಿಯೂ ಕುಂಠಿತವಾಗುತ್ತಿದೆ. ರೈತರು ಹಣ್ಣಾಗಿರುವ ಹುಳುಗಳನ್ನು ಚಂದ್ರಿಕೆಗಳಿಗೆ ಹಾಕಿ ವಿದ್ಯುತ್ ದೀಪ ಹಚ್ಚಿ ಶೆಡ್‌ಗಳಲ್ಲಿ ಜೋಡಿಸಿಟ್ಟು ಗೂಡುಕಟ್ಟುವಂತೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಮಾರುಕಟ್ಟೆಗೆ ತೆಗೆದುಕೊಂಡು ಹೋದರೂ ಮೋಡದ ವಾತಾವರಣದಲ್ಲಿ ಕಟ್ಟಿರುವ ಗೂಡನ್ನು ತೀರಾ ಕಡಿಮೆ ಬೆಲೆಗೆ ಕೇಳುತ್ತಾರೆ. ಈ ವಾತಾವರಣವೂ ರೇಷ್ಮೆ ಬೆಳೆಗಾರರಿಗೆ ಅನುಕೂಲಕರವಾಗಿಲ್ಲ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಭೀಮ ಆರ್ಮಿ ಒತ್ತಾಯ

ಇದೇ ವಾತಾವರಣ ಇನ್ನೂ ಮೂರ್ನಾಲ್ಕು ದಿನ ಮುಂದುವರೆದರೆ ಹುಳುಗಳಲ್ಲಿ ಸುಣ್ಣಕಟ್ಟು ರೋಗವೂ ಕಾಣಿಸಿಕೊಳ್ಳಲಿದೆ. ಈ ರೋಗ ಬಂದ ರೇಷ್ಮೆ ಹುಳುಗಳು ಸೊಪ್ಪು ತಿನ್ನದೆ ಚಟುವಟಿಕೆ ಕಳೆದುಕೊಂಡು ಸಾಯುತ್ತವೆ. ಸತ್ತ ಹುಳುವಿನ ದೇಹವು ಗಟ್ಟಿಯಾಗಿ ಮೈಮೇಲೆ ಬಿಳಿಯ ಪೌಡರ್‌ ರೂಪದಲ್ಲಿ ವೈರಾಣುಗಳು ಉತ್ಪತ್ತಿಯಾಗುತ್ತಿವೆ. ಹೀಗೆ ಉತ್ಪತ್ತಿಯಾದ ವೈರಾಣುಗಳು ಗಾಳಿಯ ಮೂಲಕ ಆರೋಗ್ಯವಂತ ಹುಳುವಿಗೆ ತಾಕುವುದರಿಂದ ಎಲ್ಲ ಹುಳುಗಳು ಸುಣ್ಣಕಟ್ಟು ರೋಗಕ್ಕೆ ತುತ್ತಾಗುತ್ತವೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...