ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ ಬಾರಿ ಗುದ್ದಲಿ ಪೂಜೆ ನೆರವೇರಿಸಿದ ಹಿನ್ನೆಲೆ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಧೀರಜ್ ಸಚಿವ ಕೆ ಎಚ್‌ ಮುನಿಯಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ದೀರಜ್, “ಒಂದೇ ಕಾಮಗಾರಿಗೆ ಎರಡೆರಡು ಬಾರಿ ಗುದ್ದಲಿ ಪೂಜೆ ಮಾಡುವುದರಿಂದ ಸರ್ಕಾರದ ಕಾರ್ಯವೈಖರಿ ಸ್ಪಷ್ಟವಾಗುತ್ತದೆ. ಇದು ಜನರನ್ನು ಮರುಳು ಮಾಡುವ ನಾಟಕ” ಎಂದು ಕಿಡಿಕಾರಿದರು. “ಈ ಹಿಂದೆ ಎರಡು ವರ್ಷದ ಸಾಧನಾ ಸಮಾವೇಶ ಎಂಬ ಹೆಸರಿನಲ್ಲಿ ಮುಖ್ಯಮಂತ್ರಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಆದರೆ ಆ ಎರಡು ವರ್ಷಗಳಲ್ಲಿ ಯಾವ ಸಾಧನೆ ಮಾಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಜನರಿಗೆ ಹೇಳಬೇಕು ಎಂದು ಸವಾಲು ಹಾಕಿದರು.

“ಎರಡು ವರ್ಷಗಳಲ್ಲಿ ದೊಡ್ಡಬಳ್ಳಾಪುರಕ್ಕೆ ಏನು ಕೊಟ್ಟಿದ್ದೀರಿ? ಯಾವ ಅಭಿವೃದ್ಧಿ ಕೆಲಸಗಳು ನಡೆದಿವೆ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ: ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ಆದರೆ ಇದೇ ಪ್ರಶ್ನೆಯನ್ನು ಸಚಿವರ ಮುಂದೆ ಕೇಳುವ ಸಂದರ್ಭ ಬಂದಾಗ, ಶಾಸಕ ಧೀರಜ್ ಅವರ ನಿಲುವಿನಲ್ಲಿ ಬದಲಾವಣೆ ಕಂಡುಬಂದಿತು. ಸಚಿವರ ಮುಂದೆ ಪ್ರಶ್ನೆ ಕೇಳುತ್ತಿದ್ದಂತೆ ‘ಸಾಫ್ಟ್ ಕಾರ್ನರ್’ ತೋರಿದಂತೆ ಮಾತನಾಡಿದ ಅವರು, ತಾವು ಹೇಳಿದ ಮಾತುಗಳನ್ನು ತಿರುಚಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. “ನಾನು ಜವಳಿ ಇಲಾಖೆಗೆ ಅನುದಾನ ಬಂದಿಲ್ಲ ಎಂದಷ್ಟೇ ಹೇಳಿದ್ದೇನೆ. ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ” ಎಂದು ಹೇಳಿದರು.

ಒಂದೇ ವೇದಿಕೆಯಲ್ಲಿ ಪರಸ್ಪರ ವಿರೋಧಿ ಹೇಳಿಕೆಗಳನ್ನು ನೀಡಿದ ಶಾಸಕ ದೀರಜ್ ಅವರ ನಡೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆವಿಕಂ ವ್ಯಾಪ್ತಿಯಲ್ಲಿರುವ ರೈತರ ಅನಧಿಕೃತ ನೀರಾವರಿ ಸೇಟ್ಟುಗಳ ವಿದ್ಯುತ್ ಸಂಪರ್ಕ ಕಟ್

ಹೊಸಕೋಟೆ :ಹೊಸಕೋಟ ತಾಲ್ಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಇರುವ ಕೆಲ...

ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ...

ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ...

ದೊಡ್ಡಬಳ್ಳಾಪುರ | ಅನುಮತಿ ಇಲ್ಲದೆ ಹೊಸ ವರ್ಷದ ಪಾರ್ಟಿ; ರೆಸಾರ್ಟ್ ಮೇಲೆ ಪೊಲೀಸ್ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದವರಿಗೆ ಪೊಲೀಸರು...