ಬೆ. ಗ್ರಾಮಾಂತರ | ವರದಕ್ಷಿಣೆ ದೌರ್ಜನ್ಯ; ಯುವತಿಯ ಮರ್ಮಾಂಗಕ್ಕೆ ಆಸಿಡ್ ಎರಚಿದ ವಿಕೃತ ಪತಿ

Date:

ತಂದೆ ಮನೆಯಿಂದ ವರದಕ್ಷಿಣೆ ಹಣ ತಂದಿಲ್ಲವೆಂದು ವಿಕೃತನೊಬ್ಬ ತನ್ನ ಪತ್ನಿಯ ಮರ್ಮಾಂಗಕ್ಕೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಾಗಲಗುಂಟೆ ನಿವಾಸಿ ಕಾವ್ಯ ವರದಕ್ಷಿಣೆ ದೌರ್ಜನ್ಯಕ್ಕೆ ತುತ್ತಾಗಿರುವ ಯುವತಿ. ಕಾವ್ಯ ಅವರು ಕಳೆದ ಮೇ ತಿಂಗಳಿನಲ್ಲಿ ಮಂಡ್ಯ ಮೂಲಕ ಸಂತೋಷ್ ಎಂಬಾತನನ್ನು ಮದುವೆಯಾಗಿದ್ದರು. ಮದ್ಯದ ವ್ಯಸನಿಯಾಗಿದ್ದ ಸಂತೋಷ್ ಆಕೆಗೆ ದಿನನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ಸಂತೋಷ್ ಮತ್ತು ಆತನ ತಾಯಿಯ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಉದ್ಯೋಗ ಮಾಡದ ಸಂತೋಷ್ ಪ್ರತಿದಿನ ಮದ್ಯಪಾನ ಮಾಡುತ್ತಿದ್ದ. ಮದುವೆಯಾದ ಹೊಸದರಲ್ಲಿ ದಂಪತಿಗಳು ಬೆಂಗಳೂರಿನ ಕುರುಬನಹಳ್ಳಿಯಲ್ಲಿ ವಾಸವಾಗಿದ್ದರು. ಆದರೆ, ಬಾಡಿಗೆ ಕಟ್ಟದ ಕಾರಣ ಮನೆ ಖಾಲಿ ಮಾಡಿದ್ದರು. ಆ ಬಳಿಕ, ಬಾಗಲಗುಂಟೆ ಬಳಿ ವಾಸವಾಗಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವ್ಯ ಅವರನ್ನು ಮದುವೆಯಾಗುವ ಸಮಯದಲ್ಲಿ ಆಕೆಯ ಪೋಷಕರಿಂದ ಸಂತೋಷ್ 20ಗ್ರಾಂ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಪಡೆದಿದ್ದ. ಮಾತ್ರವಲ್ಲದೆ, ಹಣಕ್ಕೂ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.

ಮದ್ಯಪಾನ ಮಾಡಿ ವರದಕ್ಷಿಣೆ ಹಣದ ವಿಚಾರಕ್ಕೆ ಕಾವ್ಯ ಜೊತೆ ಜಗಳ ಮಾಡಿ, ಹಲ್ಲೆ ನಡೆಸುತ್ತಿದ್ದ. ಇತ್ತೀಚೆಗೆ ಗಲಾಟೆ ಮಾಡಿದ್ದ ಸಂತೋಷ್, ಶೌಚಾಲಯ ಸ್ವಚ್ಛತೆಗಾಗಿ ತಂದಿಟ್ಟಿದ್ದ ಆಸಿಡ್‌ಅನ್ನು ಕಾವ್ಯಾಳ ಬೆನ್ನು, ಸೊಂಟ ಹಾಗೂ ಮರ್ಮಾಂಗಕ್ಕೆ ಎರಚಿ ವಿಕೃತಿ ಮರೆದಿದ್ದಾನೆ ಎಂದು ತಿಳಿದುಬಂದಿದೆ.

ವಿಕೃತ ಪತಿ ಮತ್ತು ಆತನ ತಾಯಿ ಪುಟ್ಟಮ್ಮ ವಿರುದ್ಧ ಸಂತ್ರಸ್ತೆ ಕಾವ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...