ದೇಶದಲ್ಲಿ ಹಿಂಸೆಯ ವಾತಾವರಣ ರೂಪುಗೊಂಡಿದೆ: ರಾಕೇಶ್‌ ಟಿಕಾಯತ್

Date:

ದೇಶದಲ್ಲಿ ಹಿಂಸೆಯ ವಾತಾವರಣ ರೂಪುಗೊಂಡಿದ್ದು, ಗೌರಿ ಲಂಕೇಶ್‌ ಕೂಡಾ ಇದಕ್ಕೆ ಬಲಿಯಾದರು. ಈ ರೀತಿಯ ಕೃತ್ಯಗಳು ಹಲವು ವರ್ಷಗಳಿಂದಲೇ ನಡೆಯುತ್ತಿವೆ. 2015ರಲ್ಲಿ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಗಲಭೆಯಾಯಿತು. 2017ರಲ್ಲಿ ಗೌರಿ ಬಲಿಯಾದರು. ಇದು ಈಗಲೂ ಮುಂದುವರೆದಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.

ಬೆಂಗಳೂರಿನಲ್ಲಿ ನಡೆದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕೆಲವು ದಿನಗಳ ಹಿಂದೆ ಕಬ್ಬು ಬೆಳೆವ ರೈತರಿಂದ ದಾಳಿ ಮಾಡಿಸಿದರು. ಕರ್ನಾಟಕದಲ್ಲೂ ಇದನ್ನೇ ಮಾಡಲು ಪ್ರಯತ್ನ ಮಾಡಿದರು. ಇಲ್ಲಿ ರಾಮನ ಹೆಸರು ನಡೆಯದಿದ್ದಾಗ ಹನುಮಂತನ ಹೆಸರು ಹೇಳಿದರು. ಆದರೆ, ಅದೂ ಕೆಲಸ ಮಾಡಲಿಲ್ಲ” ಎಂದು ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಗಪುರ ನಿರ್ಧಾರ ಮಾಡುತ್ತದೆ-ಯಾವ ದೇವರು ಯಾವತ್ತು ಎಲ್ಲಿಗೆ ಹೋಗಬೇಕು. ಯಾರ ಪಾಲಿನ ಊಟ ಎಲ್ಲಿ ಸಿಗುತ್ತದೆ ಎಂದು ಅವರು ಹೇಳುತ್ತಾರೆ. ಇಂದು ನಾನು ಈ ಮಾತನಾಡಿದ್ದಕ್ಕೆ ಅವರ ಬೆಂಬಲಿಗರು ನನ್ನ ವಿರುದ್ಧವೂ ಮಾತನಾಡುತ್ತಾರೆ” ಎಂದರು.

“ನಾವೂ ಹಿಂದುಗಳೇ, ಅವರಿಗಿಂತಲೂ ಉತ್ತಮ ಹಿಂದುಗಳು. ನಮ್ಮ ಧರ್ಮ ಪಾಲಿಸಲು ನಮಗೆ ಸಂವಿಧಾನ ಅವಕಾಶ ನೀಡಿದೆ. ನಾವು ಹಿಂದೂ ಎಂದು ಹೇಳಿಕೊಳ್ಳಲು ನಮಗೇನೂ ಭಯವಿಲ್ಲ. ಆದರೆ, ನಾವು ಭಾರತೀಯ ಹಿಂದೂಗಳೂ, ಭಾರತೀಯ ಮುಸಲ್ಮಾನರೂ ಆಗಿದ್ದೇವೆ. ನಾಗಪುರದವರಿಗೆ ಹೆದರಬೇಕಾದ ಅಗತ್ಯವಿಲ್ಲ” ಎಂದರು.

“ಕರ್ನಾಟಕದ ಜನರು ದೇಶಕ್ಕೆ ದೊಡ್ಡ ಸಂದೇಶ ಕೊಟ್ಟಿದ್ದೀರಿ, ಅಭಿನಂದನೆಗಳು. ಈಗ ಬೇರೆ ರಾಜ್ಯಗಳಲ್ಲೂ ಇದೇ ಪುನರಾವರ್ತನೆಯಾಗಬೇಕು. ನಮ್ಮನ್ನು ಆಳುತ್ತಿರುವವರು ಹೊರದೇಶಗಳಲ್ಲಿ ಗಾಂಧಿಯ ಹೆಸರು ಹೇಳುತ್ತಾರೆ. ಆದರೆ, ಅವರನ್ನು ಕೊಂದವರು ಯಾರು? ಗೌರಿಯನ್ನು ಹತ್ಯೆ ಮಾಡಿದವರು ಯಾರು? ದೆಹಲಿಯಲ್ಲಿ‌ 770 ರೈತರು ಸತ್ತಾಗ ಆಧಿಕಾರ ಯಾರದಿತ್ತು. ರೈತರನ್ನು 13 ತಿಂಗಳು ಬೀದಿಯಲ್ಲಿ ಇಟ್ಟವರು ಯಾರು? ಇದೆಲ್ಲವನ್ನೂ ಮಾಡಿದ್ದು ಯಾರೆಂದು ಆಳುವವರು ಹೇಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಶೈಲಜಾ ಟೀಚರ್

“ಸಂಘರ್ಷ ಇನ್ನೂ ಜಾರಿಯಲ್ಲಿದೆ. ರೈತರ ಹೋರಾಟ, ಆದಿವಾಸಿಗಳ ಹೋರಾಟ, ಯುವಜನರ ಹೋರಾಟ ಹೀಗೆ ಅನೇಕ ದಿಕ್ಕುಗಳಲ್ಲಿ ವೇದಿಕೆಗಳಲ್ಲಿ ಸಂಘರ್ಷ ನಡೆಯುತ್ತಿದೆ” ಎಂದರು.

“ಮಣಿಪುರದಲ್ಲಿ ಪರಸ್ಪರ ಗಲಭೆ ಮಾಡಿಸುತ್ತಾರೆ. ಅಲ್ಲಿ, ಇಡೀ ಜಗಳ ಗಣಿಗಾರಿಕೆಗಾಗಿ ನಡೆಯುತ್ತಿದೆ. ಅದನ್ನು ಅದಾನಿಗೆ ಕೊಡಲು ಯತ್ನಿಸುತ್ತಿದ್ದಾರೆ. ಕಾಶ್ಮೀರದ ಪ್ರವಾಸೋದ್ಯಮ ನಷ್ಟದಲ್ಲಿದೆ. ₹50,000 ಲಾಭ ಗಳಿಸುತ್ತಿದ್ದವರು ಇಂದು ₹2,000ಕ್ಕೆ ಇಳಿದಿದ್ದಾರೆ. ಅದಾನಿಗೆ ಇದರ ಲಾಭವೂ ಸಿಗುತ್ತದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...