ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಐಟಿಎಂಎಸ್ ಅಳವಡಿಕೆ; 18.34 ಲಕ್ಷ ಪ್ರಕರಣ ದಾಖಲು

Date:

ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಬೆಂಗಳೂರು ನಗರದಲ್ಲಿ ಆಧುನಿಕ ಮಾದರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ. 80.61 ಕೋಟಿ ರೂ. ದಂಡ ವಿಧಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಗೆ ಸಂಪರ್ಕ ರಹಿತವಾಗಿ ದಂಡ ವಿಧಿಸಲು ಬೆಂಗಳೂರು ನಗರದ 50 ಜಂಕ್ಷನ್‌ಗಳಲ್ಲಿ 250 ಕೃತಕ ಬುದ್ಧಿಮತ್ತೆ ಕ್ಯಾಮೆರಾ ಅಳವಡಿಸಲಾಗಿದೆ. ದಿನದ 24 ಗಂಟೆಯೂ ಈ ಕ್ಯಾಮೆರಾಗಳು ಸಕ್ರಿಯವಾಗಿದ್ದು, ನಿಯಮ ಉಲ್ಲಂಘಿಸುವವರ ಫೋಟೊವನ್ನು ಕ್ಲಿಕ್ಕಿಸುತ್ತಿವೆ. ವಾಹನ ನೋಂದಣಿ ಸಂಖ್ಯೆ ಆಧರಿಸಿ ಐಟಿಎಂಎಸ್ ಮೂಲಕ ಮಾಲೀಕರಿಗೆ ದಂಡದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿವೆ.

ಅತಿ ವೇಗದ ಚಾಲನೆ, ಜೀಬ್ರಾ ಕ್ರಾಸಿಂಗ್, ಸಿಗ್ನಲ್‌ ಜಂಪ್‌, ಹೆಲ್ಮೆಟ್ ರಹಿತ ಚಾಲನೆ, ತ್ರಿಬಲ್ ರೈಡಿಂಗ್ ಸೇರಿದಂತೆ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುವುದೂ ಕೂಡ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಕರ್ತವ್ಯ. ಸಂಚಾರ ನಿಯಮ ಉಲ್ಲಂಘನೆ ಪತ್ತೆ ಮಾಡುವುದರಲ್ಲಿ ಹೆಚ್ಚು ಸಮಯ ಹೋಗುತ್ತಿತ್ತು. ಹಾಗಾಗಿ, ಸ್ವಯಂಚಾಲಿತ ಕ್ಯಾಮೆರಾ ಅಳವಡಿಸಲಾಗಿದೆ. ಇದೀಗ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ” ಎಂದು ವಿಶೇಷ ಕಮಿಷನರ್ (ಸಂಚಾರ) ಎಂ.ಎ ಸಲೀಂ ಹೇಳಿದ್ದಾರೆ.

“ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಿದ್ದ ಸವಾರ ಹಾಗೂ ಹಿಂಬದಿ ಸವಾರರ ಫೋಟೊವನ್ನು ಕ್ಯಾಮೆರಾಗಳು ಸೆರೆ ಹಿಡಿದಿವೆ. ನಿಯಮ ಉಲ್ಲಂಘಿಸಿದ್ದ 10.50 ಲಕ್ಷ ಮಂದಿಗೆ ದಂಡ ವಿಧಿಸಲಾಗಿದ್ದು, ಅವರಿಗೆ ಸಂದೇಶವನ್ನೂ ಕಳುಹಿಸಲಾಗಿದೆ” ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

2023ರ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಬೆಂಗಳೂರು ನಗರದಲ್ಲಿ 1197 ಅಪಘಾತಗಳು ಸಂಭವಿಸಿದ್ದು, 205 ಮಂದಿ ಮೃತಪಟ್ಟಿದ್ದಾರೆʼ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ...