ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆ ಕಾಯಿ ಪರಿಷೆ ಡಿ.9 ರಂದು ಆರಂಭವಾಗಲಿದ್ದು, ಡಿ.13ರವರೆಗೂ ಪರಿಷೆ ನಡೆಯಲಿದೆ. ಈ ಪರಿಷೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಸುಗಮ ಸಂಚಾರಕ್ಕೆ ಒತ್ತು ನೀಡಿರುವ ಬೆಂಗಳೂರು ನಗರ ಸಂಚಾರ ಪೊಲೀಸ್ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಂಚಾರ ಪೊಲೀಸ್, “ಬೆಂಗಳೂರು ನಗರದ ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ದೊಡ್ಡಬಸವಣ್ಣ ಮತ್ತು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಈ ವರ್ಷವೂ ಐತಿಹಾಸಿಕ ಕಡೆಲೆಕಾಯಿ ಪರಿಷೆ ಜಾತ್ರೆಯು ಡಿ.9 ರಿಂದ ಡಿ.13ರವರೆಗೆ ನಡೆಯಲಿದೆ” ಎಂದು ಮಾಹಿತಿ ನೀಡಿದೆ.

ಈ ಪರಿಷೆಗೆ ಲಕ್ಷಾಂತರ ಮಂದಿ ಭಕ್ತಾಧಿಗಳು, ವ್ಯಾಪಾರಸ್ಥರು, ಗಣ್ಯವ್ಯಕ್ತಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆ, ಪರಿಷೆಗೆ ಬರುವ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪಾದಚಾರಿಗಳ ಸುರಕ್ಷಿತ ಓಡಾಟ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ, ವಾಹನಗಳ ನಿಲುಗಡೆಗಾಗಿ ಅನುಕೂಲ ಕಲ್ಪಿಸಿಕೊಡಲು ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ರಸ್ತೆಯಾದ ಬುಲ್‌ಟೆಂಪಲ್ ರಸ್ತೆಯಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ, ಪರ್ಯಾಯ ಮಾರ್ಗ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಲ್‌ಟೆಂಪಲ್ ರಸ್ತೆಯ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

ಲಾಲ್‌ಬಾಗ್ ವೆಸ್ಟ್‌ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜಪೇಟೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಬುಲ್‌ ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯ ಮೂಲಕ ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

ಆರ್.ವಿ.ಟೀಚರ್ಸ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಠಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್‌ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್‌ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಕಾಲೋನಿ ರಸ್ತೆಯಲ್ಲಿ ಬುಲ್‌ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್‌ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ರಿಗುಪ್ಪೆ ರಸ್ತೆಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್‌ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್ ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ

ಪಾರ್ಕಿಂಗ್ ವ್ಯವಸ್ಥೆ

ಕಡಲೆಕಾಯಿ ಪರಿಷೆಗೆ ಭೇಟಿ ನೀಡುವ ಸಾರ್ವಜನಿಕರು/ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ, ಸಾರ್ವಜನಿಕ ರಸ್ತೆಗಳಲ್ಲಿರುವ ಆಟದ ಮೈದಾನಗಳನ್ನು ಬಳಸಿಕೊಳ್ಳಬಹುದಾಗಿದೆ.

  1. ಎ.ಪಿ.ಎಸ್. ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ.

2. ಹಯವದನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ, ರಾಮಕೃಷ್ಣ ಆಶ್ರಮ ಜಂಕ್ಷನ್ ಬಳಿ.

3. ಬುಲ್‌ಟೆಂಪಲ್ ರಸ್ತೆಯಲ್ಲಿರುವ ಉದಯಭಾನು ಆಟದ ಮೈದಾನದಲ್ಲಿ ಪಾರ್ಕಿಂಗ್ ಅವಕಾಶ ನೀಡಲಾಗಿದೆ.

ಐತಿಹಾಸಿಕ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ.9 ರಿಂದ ಡಿ.13 ರವರೆಗೆ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಇರುತ್ತದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...