ಬೆಂಗಳೂರು | ಭಾರೀ ಮಳೆ; ನೆಲಕ್ಕುರುಳಿದ 400ಕ್ಕೂ ಅಧಿಕ ವಿದ್ಯುತ್‌ ಕಂಬ, ಮರಗಳು

Date:

ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ನಗರಾದ್ಯಂತ ಸುಮಾರು 1,600ಕ್ಕೂ ಅಧಿಕ ರೆಂಬೆಗಳು ಮುರಿದು ರಸ್ತೆಗೆ ಬಿದ್ದಿವೆ. ಈ ಸಂಬಂಧ  ಬಿಬಿಎಂಪಿಗೆ 600ಕ್ಕೂ ಅಧಿಕ ದೂರುಗಳು ಬಂದಿವೆ.

ನಾಗರಿಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈಗಾಗಲೇ 200ಕ್ಕೂ ಹೆಚ್ಚು ಕಡೆ ಮರಗಳ ತೆರವು ಕಾರ್ಯಾಚರಣೆ ನಡೆಸಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ದಿನದ ಮಳೆಗೆ ತತ್ತರಿಸುತ್ತಿರುವ ತ್ಯಾಜ್ಯ ವಿಲೇವಾರಿಗೆ ಪೌರಕಾರ್ಮಿಕರು ಪರದಾಟ ನಡೆಸುತ್ತಿದ್ದು, ಹಲವು ಪ್ರಮುಖ ರಸ್ತೆಗಳು ತಿಪ್ಪೆಗುಂಡಿಗಳಂತಾಗಿವೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ವ್ಯಾಪ್ತಿಯಲ್ಲಿ ಬರೋಬ್ಬರಿ 500ಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಅಪಾರ ನಷ್ಟವಾಗಿದೆ. ಮರಗಳು, ಮರದ ಕೊಂಬೆಗಳಂತೆ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ, ನಗರದ ವ್ಯಾಪ್ತಿಯಲ್ಲೇ ಸುಮಾರು 140ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿವೆ. ಸುಮಾರು 20 ಟ್ರಾನ್ಸ್ ಫಾರ್ಮಾರ್‌ಗಳು ಸುಟ್ಟು ಕರಕಲಾಗಿವೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಲಹಂಕ: ಭಾನುವಾರ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ರಾಜಾನುಕುಂಟೆಯ ಅದ್ದೆ ವಿಶ್ವನಾಥಪುರ ಗ್ರಾಮದಲ್ಲಿ ಕೊಯ್ಲಿಗೆ ಬಂದಿದ್ದ ಮಾವಿನ ಕಾಯಿಗಳು ನೆಲಕಚ್ಚಿವೆ.

ಹೆಸರಘಟ್ಟ ಹೋಬಳಿಯ ಅದ್ದೆ ವಿಶ್ವನಾಥಪುರ ಗ್ರಾಮದ ರೈತರುಗಳಾದ ಸಂಪಂಗಿರಾಮಯ್ಯ ಮತ್ತು ರಾಮಯ್ಯ ಅವರ 9 ಎಕರೆ ತೋಟದಲ್ಲಿ ಬೆಳೆದಿದ್ದ ಮಾವಿನ ಬೆಳೆಗೆ ಹಾನಿಯಾಗಿ ಕಾಯಿಗಳು ಉದುರಿದ್ದು, ಅಪಾರ ನಷ್ಟವಾಗಿದೆ. ಅರಕೆರೆ ಗ್ರಾಮದ ಮಂಜುನಾಥ್ ಎಂಬುವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆಗೂ ಹಾನಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿ-ಮಳೆಗೆ ನೆಲಕಚ್ಚಿದ 546 ವಿದ್ಯುತ್ ಕಂಬಗಳು

ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಸಂದ್ರ ಗ್ರಾಮದಲ್ಲಿ ಗೋಪಾಲ್ ಎಂಬುವರಿಗೆ ಸೇರಿದ ಪಾಲಿಹೌಸ್ ಬಿರುಗಾಳಿಗೆ ಹಾರಿದ್ದು, ಹನಿಯೂರಿನ ಕೆಲ ಮನೆಗಳ ಶೀಟ್‌ಗಳೂ ಹಾರಿವೆ.

ತಾಲೂಕು ಸಹಾಯಕ ತೋಟಗಾರಿಕಾ ಅಧಿಕಾರಿ ಶಿವಣ್ಣ ಸೋಮವಾರ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

“ಕಳೆದ ಮೂರ್ನಾಲ್ಕು ವರ್ಷಗಳಿಂದ ಫಸಲ್ ಬಿಮಾ ಯೋಜನೆಯಡಿ, ಬೆಳೆವಿಮೆ ಪಾವತಿ ಮಾಡುತ್ತಿದ್ದೆ. ಆದರೆ, 2-3 ವರ್ಷಗಳಿಂದ ಬೆಳೆ ಹಾನಿಯಾದರೂ ಪರಿಹಾರ ಬಂದಿರಲಿಲ್ಲ. ಹಾಗಾಗಿ ಈ ಬಾರಿ ವಿಮೆ ಹಣ ಪಾವತಿಸಿರಲಿಲ್ಲ” ಎಂದು ರೈತ ಸಂಪಂಗಿರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ...