ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

Date:

  • ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಶಕ್ತ್ಯೋತ್ಸವ
  • ಚುನಾವಣಾ ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮವಿಲ್ಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ಮಾ. 29ರ ರಾತ್ರಿ ಅದ್ದೂರಿ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ ಧ್ವಜಾರೋಹಣ ನಡೆಸುವ ಮೂಲಕ ಕರಗಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ಕರಗ ಶಕ್ತ್ಯೋತ್ಸವ‘ 11 ದಿನ ನಡೆಯಲಿದೆ. ಈ ವೇಳೆ, ನಾನಾ ಕೈಂಕರ್ಯಗಳು ಜರುಗಲಿವೆ. ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಮಹೋತ್ಸವ ನಡೆಯಲಿದೆ. ಪ್ರತಿ ಬಾರಿಯಂತೆ ಈ ವರ್ಷವೂ ಕೂಡಾ ಪೂಜಾರಿ ಜ್ಞಾನೇಂದ್ರ ಅವರು ಕರಗವನ್ನು ಹೊರಲಿದ್ದಾರೆ.

ಏ. 6ರಂದು ಕರಗ ಮೆರವಣಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಗ ಮೆರವಣಿಗೆ ಏ. 6ರಂದು ರಾತ್ರಿ ಆರಂಭಗೊಳ್ಳಲಿದೆ. ದ್ರೌಪದಮ್ಮನ ಕರಗ ರಾತ್ರಿ 12.30ಕ್ಕೆ ಕುಂಬಾರಪೇಟೆ, ನಗರ್ತಪೇಟೆ, ಗೊಲ್ಲರಪೇಟೆಗಳಲ್ಲಿ ಸಂಚರಿಸಲಿದೆ.

ದಶಕದ ಸಂಪ್ರದಾಯದಂತೆ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಭೇಟಿ ನೀಡಿ, ಬಳಿಕ ಮರುದಿನ (ಏಪ್ರಿಲ್ 7) ಬೆಳಗ್ಗೆ ಧರ್ಮರಾಯಸ್ವಾಮಿ ದೇವಾಲಯ ತಲುಪಲಿದೆ. ಏಪ್ರಿಲ್ 8ರ ಸಂಜೆ 4 ಗಂಟೆಗೆ ವಸಂತೋತ್ಸವ ಹಾಗೂ ರಾತ್ರಿ 12ಕ್ಕೆ ಧ್ವಜಾರೋಹಣ ಮೂಲಕ 2023 ರ ಕರಗಕ್ಕೆ ತೆರೆ ಬೀಳಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

ಕರಗದ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಧರ್ಮದರ್ಶಿ ಲಕ್ಷ್ಮಣ, “ನೂರಾರು ವರ್ಷಗಳಿಂದ ತುಂಬಾ ನಂಬಿಕೆಯಿಂದ ಈ ಕರಗ ಉತ್ಸವವನ್ನು ಮಾಡಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕರಗ ಉತ್ಸವ ವಿಜೃಂಭಣೆಯಿಂದ ನೆರವೇರಲಿದೆ” ಎಂದರು.

“ಚುನಾವಣಾ ನೀತಿ ಸಂಹಿತೆ ಇರುವುದರಿಂದ ವೇದಿಕೆ ಕಾರ್ಯಕ್ರಮ ಇರುವುದಿಲ್ಲ. ಗಣ್ಯವ್ಯಕ್ತಿಗಳಿಗೂ ಸಾಮಾನ್ಯ ಜನರಂತೆ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ವೀರಕುಮಾರರ ಸಂಖ್ಯೆ ಈ ವರ್ಷ ಹೆಚ್ಚಾಗಲಿದೆ. ಈ ಹಿಂದೆ 3,500 ವೀರಕುಮಾರರಿದ್ದರು. ನಾಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೀರಕುಮಾರರು ಸೇರ್ಪಡೆಯಾಗಲಿದ್ದಾರೆ” ಎಂದು ಹೇಳಿದರು.

“ಹಿಂದುಗಳು ಮುಸ್ಲಿಮರ ದರ್ಗಾಕ್ಕೆ ಯಾಕೆ ಹೋಗಬೇಕು ಎಂಬ ಕೂಗು ಇದೆ. ಆದರೆ, ಈ ಹಿಂದಿನಿಂದಲೂ ನಮ್ಮ ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ನಾವು ಮುನ್ನಡೆಸಬೇಕು. ಕರಗ ಹಿಂದೂ ಮತ್ತು ಮುಸ್ಲಿಂ ಏಕತೆಯನ್ನು ಸಂಕೇತಿಸುತ್ತದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...